ಜ್ಯೂಬಿಲಿಯೆಂಟ್ ಮೀರಿಸಿ ಜನರನ್ನು ಭಯಕ್ಕೆ ತಳ್ಳಿದ ಜಿಂದಾಲ್!


ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು ಮೀರಿಸಿರುವ ಜಿಂದಾಲ್ನದಲ್ಲಿ ಕೊರೊನಾ ಶತಕ ಬಾರಿಸಿದೆ.
ರಾಜ್ಯದ ನಂಬರ್ ಒನ್ ಉಕ್ಕು ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಜಿಂದಾಲ್ ಈಗ ಕೊರೊನಾ ಕಾರ್ಖಾನೆಯಾಗಿ ಮಾರ್ಪಾಡಾಗಿದೆ. ಬಳ್ಳಾರಿಯಲ್ಲಿ ದಾಖಲಾದ 11 ಪ್ರಕರಣಗಳಲ್ಲಿ 8 ಪ್ರಕರಣ ಜಿಂದಾಲ್ ನೌಕರರಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 181 ಸೋಂಕಿತರಲ್ಲಿ ಸಿಂಹಪಾಲು ಅಂದರೆ 103 ಪ್ರಕರಣ ಜಿಂದಾಲ್ಗೆಡ ಸೇರಿದೆ. ಅಂದರೆ ಜಿಂದಾಲ್ ಒಂದೇ ಶತಕ ಬಾರಿಸಿ ಮುಂದುವರಿಯುತ್ತಿದೆ.
ಹಾಲು ಹಾಕುತ್ತಿದ್ದ ವ್ಯಕ್ತಿಗೆ ಸೋಂಕು ದೃಢವಾಗುತ್ತಿದ್ದಂತೆ ನಗರದ ಜಿಲ್ಲಾ ಕೊರೊನಾ ಆಸ್ಪತ್ರೆಗೆ ಆತನನ್ನು ದಾಖಲು ಮಾಡಲಾಗಿದೆ. ಈತ ವಾಸವಾಗಿರುವ ತಿಮ್ಮಲಾಪುರ ಗ್ರಾಮದ ನಿವಾಸ ಪ್ರದೇಶವನ್ನು ಕಂಟೈನ್ಮೆಂಟ್ ಮಾಡಲಾಗಿದೆ.
ಜಿಂದಾಲ್ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೆಚ್ಚಾಗಿದ್ದು, ಜಿಂದಾಲ್ ಸಂಪೂರ್ಣ ಬಂದ್ ಮಾಡುವಂತೆ ಆಗ್ರಹಿಸಿದ್ದಾರೆ.

Exit mobile version