ನವದೆಹಲಿ : ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಭೀತಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಅರವಿಂದ್ ಕೇಜ್ರಿವಾಲ್ ಸಭೆ ನಡೆಸಿದ್ದಾರೆ.
ಕೊರೊನಾ ಅಬ್ಬರ ತಡೆಗಟ್ಟುವ ನಿಟ್ಟಿನಲ್ಲಿ ಚರ್ಚಿಸಿದ್ದಾರೆ. ಮಹಾರಾಷ್ಟ್ರ ಹಾಗೂ ತಮಿಳುನಾಡು ಬಳಿಕ ದೇಶದಲ್ಲಿ ಅತ್ಯಂತ ಹೆಚ್ಚು ಅಪಾಯಕಾರಿ ರಾಜ್ಯವಾಗಿ ದೆಹಲಿ ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ದೆಹಲಿ ಲೆ.ಗವರ್ನರ್ ಅನಿಲ್ ಬೈಜ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಏಮ್ಸ್ ಡಾ. ರಣ್‌ದೀಪ್ ಗುಲೆರಿಯಾ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಭೆ ನಡೆಸಿ ಚರ್ಚೆ ನಡೆಸಿದರು.

Leave a Reply

Your email address will not be published. Required fields are marked *

You May Also Like

ಕೊರೊನಾ ಸೋಂಕು, ಎರಡನೇ ಬಾರಿ ಕಾಣಿಸಿಕೊಂಡರೆ ಏನಾಗಲಿದೆ?

ಒಮ್ಮೆ ಸೋಂಕಿನಿಂದ ಗುಣವಾದರೂ ಮತ್ತೊಮ್ಮೆ ಅದರ ಲಕ್ಷಣ ಕಂಡು ಬಂದರೆ, ಮೊದಲಿಗಿಂತಲೂ ಹೆಚ್ಚಿನ ಅಪಾಯ ಎದುರಿಸಬೇಕಾಗುತ್ತದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಕೊರೊನಾ ಎಫೆಕ್ಟ್ – ಪೊಲೀಸರ ಸಂಖ್ಯೆಯಲ್ಲಿ ಕ್ಷೀಣ!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾರಿಯರ್ಸ್ ನ್ನು ಇದು ಬಿಡುತ್ತಿಲ್ಲ. ಸದ್ಯ…

ಶಾಶ್ವತ ಚಿರನಿದ್ರೆಗೆ ಜಾರಿದ ಚಿರು..!

ತಮಿಳುನಾಡು ಅಂದ ತಕ್ಷಣವೇ ಕಾವೇರಿ ನದಿ ವಹಿವಾಟೆ ನಮ್ಮ ಕಣ್ಣೆದುರು ಬರುತ್ತದೆ. ಕಾವೇರಿ ಸಮಸ್ಯೆ ತೀವ್ರ ಇದ್ದ 1980ರ ದಶಕದಲ್ಲಿ ಈ ಹುಡುಗ ಹುಟ್ಟುತ್ತಾನೆ. ಬೆಂಗಳೂರಿನಲ್ಲೆ ಬೆಳೆಯುವ ಈ ಹುಡುಗನ ಸಿನಿಮಾ ಹುಚ್ಚಿಗೆ ಅವರ ಮಾವ ನೀರು ಎರೆಯುತ್ತಾರೆ.

ಬುಧವಾರ ಭಾರತಕ್ಕೆ ಬರಲಿವೆ ರಫೇಲ್ ಯುದ್ಧ ವಿಮಾನ: ಸದ್ಯ ಫ್ರಾನ್ಸ್ ಬಿಟ್ಟಿವೆ ಫೈಟರ್ ಜೆಟ್ಸ್

ಸೋಮವಾರ ಫ್ರಾನ್ಸ್ ನಿಂದ ಹೊರಟಿರುವ ಮೊದಲ ಬ್ಯಾಚಿನ ರಫೇಲ್ ಯುದ್ಧ ಫ್ರಾನ್ಸ್ ಬಿಟ್ಟಿರುವ 5 ರಫೇಲ್ ಯುದ್ಧ ವಿಮಾನಗಳು 7 ಸಾವಿರ ಕಿಮೀ ದೂರ ಕ್ರಮಿಸಿ ಬುಧವಾರ ಭಾರತವನ್ನು ತಲುಪಲಿವೆ. ಯುಎಇನಲ್ಲಿರುವ ಫ್ರಾನ್ಸ್ ಏರ್ ಬೇಸ್ ನಲ್ಲಿ ಇಳಿದು ನಂತರ ಭಾರತ ತಲುಪಲಿವೆ. ಎವಿಯೇಷನ್ ಕಂಪನಿ ಡಸಾಲ್ಟ್ ನಿರ್ಮಿಸಿರುವ ಈ ಅತ್ಯಾಧುನಿಕ ಫೈಟರ್ ಜೆಟ್ಸ್ ದಕ್ಷಿಣ ಫ್ರಾನ್ಸಿನ ಬ್ರೊಡಾಕ್ಸ್ ನಗರದಿಂದ ಪ್ರಯಾಣ ಬೆಳೆಸಿವೆ. 2016ರಲ್ಲಿ ಭಾರತವು ಫ್ರಾನ್ಸ್ ಕಂಪನಿ ಡಸಾಲ್ಟ್ ಕಂಪನಿಯಿಂದ ಇಂತಹ 36 ವಿಮಾನಗಳನ್ನು ಖರೀದಿಸಲು 59 ಸಾವಿರ ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿತ್ತು. ಅದರ ಮೊದಲ ಭಾಗವಾಗಿ ಈಗ 5 ವಿಮಾನಗಳು ದೇಶದ ಸೇನೆಯ ಭಾಗವಾಗಲಿವೆ.