ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!
ಬೆಂಗಳೂರು : ರಾಜ್ಯದಲ್ಲಿ ಕೂಡ ಕೊರೊನಾ ಅಬ್ಬರ ಜೋರಾಗುತ್ತಿದೆ. ಅಲ್ಲದೇ, ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಇಂದು ಕೂಡ ಕೊರೊನಾಗೆ ಮೂವರು ಬಲಿಯಾಗಿದ್ದಾರೆ.
39 ವರ್ಷದ ವ್ಯಕ್ತಿ, 65 ವರ್ಷದ ವೃದ್ಧ ಮತ್ತು 85 ವರ್ಷದ ವೃದ್ಧೆ ಇಂದು ಸಾವನ್ನಪ್ಪಿದ್ದಾರೆ. 85 ವರ್ಷದ ವೃದ್ಧೆ ಶನಿವಾರ ರಾತ್ರಿ ಜಯನಗರ ಜನರಲ್ ಆಸ್ಪತ್ರೆಯಿಂದ ಶಿಫ್ಟ್ ಆಗಿದ್ದರು. 65 ವರ್ಷದ ವೃದ್ಧ ಇಎಸ್ಐದ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಟ್ ಜಾನ್ ಆಸ್ಪತ್ರೆಯಿಂದ 39 ವರ್ಷದ ವ್ಯಕ್ತಿ ಶಿಫ್ಟ್ ಆಗಿದ್ದರು. ಮೂವರು ನಾನಾ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಬ್ಬರು ಮೃತಪಟ್ಟ ಬಳಿಕ ಕೋವಿಡ್ ಪರೀಕ್ಷೆ ಮಾಡಿದಾಗ ಪಾಸಿಟಿವ್ ಬಂದಿದೆ.
ವೃದ್ಧೆ ಮತ್ತು ವೃದ್ಧ ಜ್ವರ, ಕೆಮ್ಮು, ಬಿಪಿ, ಶುಗರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳುತ್ತಿದ್ದರು. ಈ ನಿಟ್ಟಿನಲ್ಲಿ ನಗರದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 32ಕ್ಕೆ ಏರಿಕೆ ಕಂಡಿದೆ. ಲಾಕ್ಡೌತನ್ ಸಮಯದಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದಲ್ಲಿತ್ತು. ಆದರೆ ಅನ್ಲಾಕಕ್ ಆಗುತ್ತಿದ್ದಂತೆ ಜನರ ಓಡಾಟದ ಜಾಸ್ತಿಯಾಗಿದ್ದು, ಅಂತರಾಜ್ಯ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಹೀಗಾಗಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಆಡಿಯೋ ಕ್ಲಿಪ್ ಲೀಕ್ ಮಾಡಿದ್ದು ನಾನಲ್ಲ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಮತ್ತು ನವರಸನಾಯಕ ಜಗ್ಗೇಶ್ ನಡುವಿನ ವಾಗ್ವಾದ ತಾರಕಕ್ಕೇರಿದೆ. ಇದಕ್ಕೆಲ್ಲ ಕಾರಣವಾಗಿದ್ದು ಒಂದು ಆಡಿಯೋ ಕ್ಲಿಪ್.

ಪರೀಕ್ಷೆ ಬರೆಯುವ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ!

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ.…

ಮಗಳ ಮದುವೆಗೆ ಕೂಡಿಟ್ಟ ಹಣ ಆಕ್ಸಿಜನ್ ಖರಿದಿಗೆ ದೇಣಿಗೆ ನೀಡಿದ ರೈತ

ಕೊರೋನಾ ಲಾಕ್ ಡೌನ್ ಸಮಯದಲ್ಲಿ ಎಲ್ಲರೂ ಕೈಚೆಲ್ಲಿ ಕೂತಿರುವಾಗ, ಇಲ್ಲೊಬ್ಬ ರೈತ ತನ್ನ ಮಗಳ ಮದುವೆಗಾಗಿ ಕೂಡಿಟ್ಟಿರುವ ಹಣವನ್ನು ಆಕ್ಸಿಜನ‌ ಖರೀದಿ ಮಾಡಲು ದೇಣಿಗೆ ನೀಡಿದ್ದಾನೆ.

ಗ್ರಾಪಂ ಚುನಾವಣೆ ಯಾವಾಗ ನಡೆಯಲಿವೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಗ್ರಾಪಂಗೆ ಡಿಸೆಂಬರ್ ಸಮಯದಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಸದ್ಯ ಈ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗುತ್ತಿದೆ.