ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!
ಬೆಂಗಳೂರು : ರಾಜ್ಯದಲ್ಲಿ ಕೂಡ ಕೊರೊನಾ ಅಬ್ಬರ ಜೋರಾಗುತ್ತಿದೆ. ಅಲ್ಲದೇ, ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಇಂದು ಕೂಡ ಕೊರೊನಾಗೆ ಮೂವರು ಬಲಿಯಾಗಿದ್ದಾರೆ.
39 ವರ್ಷದ ವ್ಯಕ್ತಿ, 65 ವರ್ಷದ ವೃದ್ಧ ಮತ್ತು 85 ವರ್ಷದ ವೃದ್ಧೆ ಇಂದು ಸಾವನ್ನಪ್ಪಿದ್ದಾರೆ. 85 ವರ್ಷದ ವೃದ್ಧೆ ಶನಿವಾರ ರಾತ್ರಿ ಜಯನಗರ ಜನರಲ್ ಆಸ್ಪತ್ರೆಯಿಂದ ಶಿಫ್ಟ್ ಆಗಿದ್ದರು. 65 ವರ್ಷದ ವೃದ್ಧ ಇಎಸ್ಐದ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಟ್ ಜಾನ್ ಆಸ್ಪತ್ರೆಯಿಂದ 39 ವರ್ಷದ ವ್ಯಕ್ತಿ ಶಿಫ್ಟ್ ಆಗಿದ್ದರು. ಮೂವರು ನಾನಾ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಬ್ಬರು ಮೃತಪಟ್ಟ ಬಳಿಕ ಕೋವಿಡ್ ಪರೀಕ್ಷೆ ಮಾಡಿದಾಗ ಪಾಸಿಟಿವ್ ಬಂದಿದೆ.
ವೃದ್ಧೆ ಮತ್ತು ವೃದ್ಧ ಜ್ವರ, ಕೆಮ್ಮು, ಬಿಪಿ, ಶುಗರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳುತ್ತಿದ್ದರು. ಈ ನಿಟ್ಟಿನಲ್ಲಿ ನಗರದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 32ಕ್ಕೆ ಏರಿಕೆ ಕಂಡಿದೆ. ಲಾಕ್ಡೌತನ್ ಸಮಯದಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದಲ್ಲಿತ್ತು. ಆದರೆ ಅನ್ಲಾಕಕ್ ಆಗುತ್ತಿದ್ದಂತೆ ಜನರ ಓಡಾಟದ ಜಾಸ್ತಿಯಾಗಿದ್ದು, ಅಂತರಾಜ್ಯ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಹೀಗಾಗಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಬೇಡಿಕೆ ಪೆಟ್ಟಿಗೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ವಿರುದ್ಧ ಕನಕಶ್ರೀ ಆಕ್ರೋಶ

ಸಾರಾಯಿ ಮಾರಾಟ ಮತ್ತೆ ಪ್ರಾರಂಭಿಸಿರುವ ಕಾರನ ರಾಜ್ಯ ಸರ್ಕಾರದ ವಿರುದ್ಧ ಕನಕ ಶ್ರೀಗಳು ಕಿಡಿಕಾರಿದ್ದಾರೆ.

ಆಮರಣ ಉಪವಾಸ ಸತ್ಯಾಗ್ರಹ 3ನೇ ದಿನದತ್ತ : ಧರಣಿ ನಿರತರ ಆರೋಗ್ಯ ತಪಾಸಣೆ

ಉತ್ತರಪ್ರಭಆಲಮಟ್ಟಿ: ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿನ ಜಿಲ್ಲೆಯ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಕೆರೆಗಳನ್ನು ತುಂಬಬೇಕು ಎಂದು…

ಎಸ್ಸೆಸ್ಸೆಲ್ಸಿ ಪರೀಕ್ಷೆ ಅವಕಾಶ, ಆರ್‌ಟಿಇ ಶುಲ್ಕ ಮರುಪಾವತಿ ನಿಯಮಗಳ ಸಡಿಲಿಕೆ

ಕೋವಿಡ್-19 ಸೋಂಕು ಪ್ರಸರಣ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾಗಿರುವುದರಿಂದ ಪ್ರಸ್ತುತ ವರ್ಷಕ್ಕೆ ಸೀಮಿತಗೊಳಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮತ್ತು ಆರ್ ಟಿ ಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತ ನಿಯಮಗಳಲ್ಲಿ ವಿನಾಯ್ತಿ ನೀಡಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.