ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!
ಬೆಂಗಳೂರು : ರಾಜ್ಯದಲ್ಲಿ ಕೂಡ ಕೊರೊನಾ ಅಬ್ಬರ ಜೋರಾಗುತ್ತಿದೆ. ಅಲ್ಲದೇ, ಸಾವಿನ ಸಂಖ್ಯೆಯೂ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಇಂದು ಕೂಡ ಕೊರೊನಾಗೆ ಮೂವರು ಬಲಿಯಾಗಿದ್ದಾರೆ.
39 ವರ್ಷದ ವ್ಯಕ್ತಿ, 65 ವರ್ಷದ ವೃದ್ಧ ಮತ್ತು 85 ವರ್ಷದ ವೃದ್ಧೆ ಇಂದು ಸಾವನ್ನಪ್ಪಿದ್ದಾರೆ. 85 ವರ್ಷದ ವೃದ್ಧೆ ಶನಿವಾರ ರಾತ್ರಿ ಜಯನಗರ ಜನರಲ್ ಆಸ್ಪತ್ರೆಯಿಂದ ಶಿಫ್ಟ್ ಆಗಿದ್ದರು. 65 ವರ್ಷದ ವೃದ್ಧ ಇಎಸ್ಐದ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಟ್ ಜಾನ್ ಆಸ್ಪತ್ರೆಯಿಂದ 39 ವರ್ಷದ ವ್ಯಕ್ತಿ ಶಿಫ್ಟ್ ಆಗಿದ್ದರು. ಮೂವರು ನಾನಾ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಬ್ಬರು ಮೃತಪಟ್ಟ ಬಳಿಕ ಕೋವಿಡ್ ಪರೀಕ್ಷೆ ಮಾಡಿದಾಗ ಪಾಸಿಟಿವ್ ಬಂದಿದೆ.
ವೃದ್ಧೆ ಮತ್ತು ವೃದ್ಧ ಜ್ವರ, ಕೆಮ್ಮು, ಬಿಪಿ, ಶುಗರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳುತ್ತಿದ್ದರು. ಈ ನಿಟ್ಟಿನಲ್ಲಿ ನಗರದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 32ಕ್ಕೆ ಏರಿಕೆ ಕಂಡಿದೆ. ಲಾಕ್ಡೌತನ್ ಸಮಯದಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದಲ್ಲಿತ್ತು. ಆದರೆ ಅನ್ಲಾಕಕ್ ಆಗುತ್ತಿದ್ದಂತೆ ಜನರ ಓಡಾಟದ ಜಾಸ್ತಿಯಾಗಿದ್ದು, ಅಂತರಾಜ್ಯ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಹೀಗಾಗಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

Leave a Reply

Your email address will not be published. Required fields are marked *

You May Also Like

ಟ್ವೀಟರ್ ನಟ ರಜನಿಕಾಂತ ಟ್ವೀಟ್ ಅಳಿಸಿ ಹಾಕಿದ್ದು ಯಾಕೆ?

ಖ್ಯಾತ ನಟ ರಜನಿಕಾಂತ್ ಮಾಡಿದ ಟ್ವೀಟ್ ನ್ನು ಸ್ವತಃ ಟ್ವೀಕರ್ ಅಳಿಸಿ ಹಾಕಿದೆ. ಅವರ ಟ್ವೀಟ್ ಜಾಗದಲ್ಲೀಗ ಟ್ವೀಟರ್ ನಿಯಮ ಉಲ್ಲಂಘಿಸಿರುವುದರಿಂದ ಈ ಟ್ವೀಟ್ ಲಭ್ಯವಿಲ್ಲ ಎಂದು ಸೂಚಿಸಿದೆ. ಟ್ವೀಟ್ ಅಳಿಸಿ ಹಾಕಲಿ ಕಾರಣ ಏನು ಗೊತ್ತೆ?

ಗದಗ ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 116 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3894 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಗುಣಮುಖರಾಗಿ ಇಂದು 121 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಬಿಡುಗಡೆ ಹೊಂದಿದವರ ಸಂಖ್ಯೆ 2756.

ಮುಳಗುಂದ: ಮಳೆಯಿಂದ ಬೆಳೆ ಜಲಾವೃತ

ಮುಳಗುಂದ: ಶನಿವಾರ ರಾತ್ರಿ ಪಟ್ಟಣ ಸೇರಿದಂತೆ ಚಿಂಚಲಿ, ಕಲ್ಲೂರ ಹಾಗೂ ನೀಲಗುಂದ ಗ್ರಾಮಗಳ ವ್ಯಾಪ್ತಿಯಲ್ಲಿ ಒಂದು ಗಂಟೆಗೂ ಹೆಚ್ಚುಕಾಲ ಬಿರುಸಿನ ಮಳೆ ಸುರಿದಿದೆ.

ಗದಗನಲ್ಲಿಂದು 4 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಪಿ-7386(26 ವರ್ಷ), ಪಿ-7387(11ವರ್ಷ), ಪಿ-7388(3 ವರ್ಷ),…