ಹರಪನಹಳ್ಳಿ: ಕೊರೊನಾ ಹಿನ್ನೆಲೆ ಲಾಕ್ ಡೌನ್ ಸಡಿಲಿಸಿದರೂ ಸಾಕಷ್ಟು ಕಟ್ಟುನಿಟ್ಟಿನ ನಿಯಮ ಸರ್ಕಾರ ಸೂಚಿಸಿದೆ. ಆದರೆ ಜನಸಾಮಾನ್ಯರಿಗೆ ಒಂದು ನ್ಯಾಯ ಜನಪ್ರತಿನಿಧಿಗಳಿಗೆ ಒಂದು ನ್ಯಾಯ ಎನ್ನುವಂತಾಗಿದೆ. ಇತ್ತಿಚೆಗಷ್ಟೆ ಸ್ವತ: ಆರೋಗ್ಯ ಸಚಿವ ಶ್ರೀರಾಮುಲು ಅದ್ಧೂರಿ ಮೆರವಣಿಗೆ ಮೂಲಕ ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ದರು. ಇದರ ಬೆನ್ನಲ್ಲೆ ಇದೀಗ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯಕ ಈ ಸಾಲಿಗೆ ಸೇರಿದ್ದಾರೆ.
ಹೌದು ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ತಮ್ಮ ಪುತ್ರನ ಅದ್ಧೂರಿ ಮದುವೆ ಮಾಡುವ ಮೂಲಕ ಇಂಥದ್ದೊಂದು ಟೀಕೆಗೆ ಗುರಿಯಾಗಿದ್ದಾರೆ.

ಸಾಮಾಜಿಕ ಅಂತರ ಇವರಿಗೆ ಸಂಬಂಧವೇ ಇರಲಿಲ್ಲ
ಲಾಕ್ ಡೌನ್ ಸಡಿಲಗೊಳಿಸಿದಾಗ್ಯೂ ಮದುವೆ ಸಮಾರಂಭಗಳಲ್ಲಿ ಕೇವಲ 50 ಜನ ಮಾತ್ರ ಭಾಗವಹಿಸಲು ಅವಕಾಶವಿದೆ. ಆದರೆ ಮಾಜಿ ಸಚಿವ ಪಿಟಿ ಪರಮೇಶ್ವರ ನಾಯ್ಕ್ ಅವರ ಮಗನ ಮದುವೆಯಲ್ಲಿ ಈ ನಿಯಮ ಗಾಳಿಗೆ ತೂರಲಾಗಿತ್ತು.
ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರ ತಾಂಡದಲ್ಲಿ ನಡೆದ ಪಿಟಿಪಿ ಪುತ್ರನ ಮದುವೆ ಇದೀಗ ಟೀಕೆಗೂ ಗುರಿಯಾಗಿದೆ. ಮುಖ್ಯವಾಗಿ ಮದುವೆ ಸಮಾರಂಭದಲ್ಲಿ ಸಾಮಾಜಿಕ ಅಂತರ ಇವರಿಗೆ ಸಂಬಂಧವೇ ಇಲ್ಲದಂತಿತ್ತು.

ಹಲವು ಮುಖಂಡರು ಭಾಗಿ
ಮದುವೆ ಸಮಾರಂಭದಲ್ಲಿ ಹಲವು ಮುಖಂಡರು ಭಾಗಿಯಾಗಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಹಾಲಿ, ಮಾಜಿ ಸಚಿವರು ಶಾಸಕರು ಸೇರಿದಂತೆ ಹಲವು ಮುಖಂಡರು ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಮದುವೆಗೆ ಆಗಮಿಸಿದ್ದರಿಂದ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರು ಅಸಹಾಯಕರಾಗಿದ್ದರು. ಜನಸಾಮಾನ್ಯರು ಒಂದು ಸಣ್ಣ ತಪ್ಪು ಮಾಡಿದರೂ ಕ್ರಮ ಕೈಗೊಳ್ಳುವ ಆಡಳಿತ ವ್ಯವಸ್ಥೆ ಜನಪ್ರತಿನಿಧಅಸಹಾಯಕವಾಗಿದೆಆಡಳಿತಆಡಳಿತ ವ್ಯವಸ್ಥೆ ಕ್ರಮ ಕೈಗೊಳ್ಳಲು ಅಸಹಾಯಕವಾಗಿದೆಯಾ ಎಂದು ಜನರು ಮಾತಾಡಿಕೊಳ್ಳುವಂತಾಗಿದೆ.

Leave a Reply

Your email address will not be published. Required fields are marked *

You May Also Like

ಸಿನಿಮಾ ಮಂದಿರದಲ್ಲಿ ಪ್ರೇಕ್ಷಕರ ಕಡಿತವಿಲ್ಲ

ಕೊರೊನಾ ಸಂಖ್ಯೆ ಮತ್ತೆ ಹೆಚ್ಚಾಗುತ್ತಿರುವುದರಿಂದ ರಾಜ್ಯದಲ್ಲಿ ಸಿನಿಮಾ ಮಂದಿರಗಳು ಶೇ.50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಿಎಂ ಯಡಿಯೂರಪ್ಪ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಟ್ವೀಟ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ.

ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ

ಉತ್ತರಪ್ರಭ ದಿನಪತ್ರಿಕೆ, ವೆಬ್ ಪೋರ್ಟಲ್ ಹಾಗೂ ಯೂಟ್ಯೂಬ್ ಚಾನಲ್ ಈಗಾಗಲೇ ಗದಗ ಜಿಲ್ಲೆಯ ಜನರ ಮನೆ-ಮನ ತಲುಪಿದ್ದು, ಜನರಿಂದ ಸಿಗುತ್ತಿರುವ ವ್ಯಾಪಕ ಬೆಂಬಲದಿಂದ ನಮ್ಮ ತಂಡ ಇನ್ನಷ್ಟು ಕ್ರೀಯಾಶೀಲವಾಗಿದೆ.

ನರೇಗಲ್ಲ್ ನಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹಾಗು ದೇಶದ ಬಹುದೊಡ್ಡ ಆಸ್ತಿ ಎಂದು ನರೆಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಕ್ಕಮ್ಮ ಯ ಮಣೋಡ್ಡರ ಹೇಳಿದರು.

ಇನ್ನೇನು ಊರು ತಲುಪಬಹುದು ಎನ್ನುವಷ್ಟರಲ್ಲಿಯೇ 200 ಕಿ.ಮೀ ನಡೆದ ಮಹಿಳೆ ಸಾವು!

ಲಾಕ್ ಡೌನ್ ನಿಂದಾಗಿ ಹಲವರು ಊರು ತಲುಪಲು ಇನ್ನೂ ಹೆಣಗಾಡುತ್ತಿದ್ದಾರೆ. ಹೀಗೆ ಊರು ತಲುಪಲು ಕಾಲ್ನಡಿಗೆಯಲ್ಲಿಯೇ ತೆರಳಿದ್ದ ಮಹಿಳೆಯೊಬ್ಬರು ಬರೋಬ್ಬರಿ 200 ಕಿ.ಮೀ ನಡೆದು ಸಾವನ್ನಪ್ಪಿದ್ದಾರೆ.