ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಮತ್ತು ನಾಳೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಿಎಂಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ದೇಶಾದ್ಯಂತ ಕೊರೊನಾ ತೀವ್ರವಾಗುತ್ತಿದ್ದು, ಸಾಂಕ್ರಮಿಕವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಡಿಯೋ ಸಂವಾದದಲ್ಲಿ ಚರ್ಚಿಸುವ ಸಾಧ್ಯತೆ ಇದೆ.
ಇದರೊಂದಿಗೆ ದೇಶದ ವಿವಿಧ ರಾಜ್ಯಗಳ ಸಿಎಂಗಳು ಆರ್ಥಿಕ ನೆರವು ನೀಡುವಂತೆ ಮತ್ತು ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಈಗಾಗಲೇ ಘೋಷಿಸಿರುವ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ ನ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಳ್ಳುವ ಸಾಧ್ಯೇತೆ ಇದೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಕೇರಳ ಸಿಎಂ ಪಿಣರಾಯಿ ವಿಜಯನ್, ಪಂಜಾಬ್ ಸಿಎಂ ಅಮರಿಂದರ್ ಸಿಂಗ್, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಪುದುಚೆರಿ ಸಿಎಂ ವಿ.ನಾರಾಯಣಸ್ವಾಮಿ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮೊದಲಾದವರು ವಿಡಿಯೋ ಸಂವಾದಲ್ಲಿ ಭಾಗವಹಿಸುತ್ತಾರೋ ಅಥವಾ ಇಲ್ಲವೋ ಮತ್ತು ಭಾಗವಹಿಸಿದರೆ, ಅವರ ಬೇಡಿಕೆಗಳು ಮತ್ತು ಸಲಹೆಗಳೇನು ಎಂಬುದು ಕುತೂಹಲ ಕೆರಳಿಸಿದೆ.

Leave a Reply

Your email address will not be published. Required fields are marked *

You May Also Like

ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕನ್ನಡಿಗನ್ನು ರಕ್ಷಿಸಿದ ನಟ!

ಕೊರೊನಾ ಲಾಕ್ ಡೌನ್ ನಿಂದಾಗಿ ಮಹಾರಾಷ್ಟ್ರದಲ್ಲಿ ಸಿಲುಕಿದ್ದ ಕರ್ನಾಟಕದ ನೂರಾರು ವಲಸೆ ಕಾರ್ಮಿಕರಿಗೆ ಅವರ ಊರುಗಳಿಗೆ ತಲುಪಿಸಲು ಬಾಲಿವುಡ್ ನಟ ಸೋನು ಸೂದ್ ಮುಖ್ಯ ಪಾತ್ರ ವಹಿಸಿದ್ದರು.

ಬಾಗಲಕೋಟೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಬಾಗಲಕೋಟೆ: ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ‌ 137 ಏರಿಕೆಯಾಗಿದೆ.…

ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಿಮಾನ-ರೈಲು ಸೇವೆ ರದ್ದು

ನವದೆಹಲಿ : ಲಾಕ್ ಡೌನ್ ಮೇ. 17ರ ವರೆಗೆ ಮುಂದುವರೆದ ಹಿನ್ನೆಲೆಯಲ್ಲಿ ಲಾಕ್ ಡೌನ್ ತೆರುವುಗೊಳ್ಳುವವರೆಗೂ…

ನಟ ಸುಶಾಂತ್ ಆತ್ಮಹತ್ಯೆ – 8 ಜನ ಸೆಲೆಬ್ರಿಟಿಗಳ ಮೇಲೆ ದೂರು ದಾಖಲು!

ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಸೆಲೆಬ್ರಿಟಿಗಳ…