ಹರಪನಹಳ್ಳಿ: ನಿನ್ನೆಯಷ್ಟೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಲಕ್ಷ್ಮಿಪುರದಲ್ಲಿ ನಡೆದಿತ್ತು. ಮದುವೆ ಸಮಾರಂಭದಲ್ಲಿ ಕೋವಿಡ್ 19 ನಿಯಮಗಳು ಉಲ್ಲಂಘಿಸಲಾಗಿತ್ತು ಹೀಗಾಗಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ್ ವಿರುದ್ಧ ಕೋವಿಡ್19 ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ದೂರು ದಾಖಲಾಗಿದೆ. 50ಕ್ಕಿಂತ ಹೆಚ್ಚು ಜನರು ಮದುವೆಯಲ್ಲಿ ಪಾಲ್ಗೊಳ್ಳಬಾರದು ಎಂಬ ಎಸ್ಒಪಿ ನಿಯಮವನ್ನು ಅವರು ಉಲ್ಲಂಘಿಸಿದ್ದಾರೆ. ಅಲ್ಲದೆ ಯಾವುದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ, ಮಾಸ್ಕ್ ಧರಿಸದೇ ಮದುವೆಗೆ ಸಾವಿರಾರು ಜನರು ಆಗಮಿಸಿದ್ದರು. ಈ ಬಗ್ಗೆ ಉತ್ತರಪ್ರಭ ವರದಿ ಮಾಡಿತ್ತು.

1 comment
Leave a Reply

Your email address will not be published. Required fields are marked *

You May Also Like

ಕೋವಿಡ್ ಮೊದಲ ಸಾವು : ಕೈ ಸೇರದ ಪಾಸಿಟಿವ್ ವರದಿ

ದೇಶದಲ್ಲೇ ಮೊದಲಬಾರಿಗೆ ಕೋರೊನಾ ಸಂಕಿನಿಂದ ಮೃತಪಟ್ಟ ಮೊಹಮದ್ದ ಹುಸೇನ್ ಸಿದ್ದಿಕ (76) ಅವರ ಕೊವಿಡ್ ಪಾಸಿಟಿವ್ ವರದಿ ಇನ್ನೂ ಅವರ ಕುಟುಂಬದ ಕೈಗೆ ತಲುಪಿಲ್ಲ.

ಕುಡಿದ ಮತ್ತಿನಲ್ಲಿ ಮಹಿಳೆಯ ಜೀವಕ್ಕೆ ಕುತ್ತು ತಂದ ಪೊಲೀಸ್!

ನವದೆಹಲಿ : ಕುಡಿದ ಮತ್ತಿನಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ವೇಗವಾಗಿ ಕಾರು ಚಲಾಯಿಸಿ…

ಪಾಕ್ ರೂಪದರ್ಶಿಗೆ ಟ್ರೋಲ್ ಮಾಡುತ್ತಿರುವ ಕಿಡಿಗೇಡಿಗಳು!

ಕರಾಚಿ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಪಾಕ್ ರೂಪದರ್ಶಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

ಗದಗನಲ್ಲಿ ಗುಣಮುಖನಾಗಿ ಮನೆಗೆ ಮರಳಿದ ಸೋಂಕಿತ

ಗದಗ:ಕೊರೋನಾ ಸೋಂಕಿತ 62 ವರ್ಷದ ವ್ಯಕ್ತಿ ಇಂದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ನಗರದ ಜಿಮ್ಸ್ ಆಸ್ಪತ್ರೆಯಿಂದ…