ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ನಿಯಂತ್ರಿಸುವಲ್ಲಿ ಗುಜರಾತ್ ಸರ್ಕಾರ ಎಡವಿದೆ. ದೇಶದಲ್ಲಿಯೇ ಗುಜರಾತ್ ನಲ್ಲಿ ಸತ್ತವರ ಸಂಖ್ಯೆ ಹೆಚ್ಚಾಗಿದೆ. ಅಲ್ಲಿ ಸತ್ತವರ ಪ್ರಮಾಣ ಶೇ. 6.25 ರಷ್ಟಿದೆ. ಗುಜರಾತ್ ಗೆ ಹೋಲಿಕೆ ಮಾಡಿದರೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಉತ್ತಮ ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಶೇ. 3.73, ರಾಜಸ್ಥಾನದಲ್ಲಿ ಶೇ. 2.32, ಪಂಜಾಬ್ ನಲ್ಲಿ ಶೇ. 2.17, ಪುದುಚೇರಿಯಲ್ಲಿ ಶೇ. 1.98, ಜಾರ್ಖಂಡ್ ನಲ್ಲಿ ಶೇ. 0.5, ಪುದುಚೇರಿಯಲ್ಲಿ ಶೇ. 1.98, ಜಾರ್ಖಂಡ್ ನಲ್ಲಿ ಶೇ. 0.5ರಷ್ಟು ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ಗುಜರಾತ್ ನ ಮಾಡೆಲ್ ಸದ್ಯ ವಿಶ್ವದ ಮುಂದೆ ಬೆತ್ತಲಾಗಿ ನಿಂತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮರ್ಯಾದೆಗೇಡು ಹತ್ಯೆ: ಮರ್ಡರ್ ಸಿನಿಮಾ ಪೋಸ್ಟರ್ ರಿಲೀಜ್ ಮಾಡಿದ RGV

ಮರ್ಯಾದೆಗೇಡು ಹತ್ಯೆ ಕುರಿತ ಸಿನಿಮಾ ಮರ್ಡರ್ ನ ಪೋಸ್ಟರ್ ಬಿಡುಗಡೆ ಮಾಡಿದ ರಾಮ್ ಗೋಪಾಲ್ ವರ್ಮಾ.…

ಗದಗ ಜಿಲ್ಲೆಯ 9 ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಭಂಧ ತೆರವು

ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 9 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಇದೀಗ 9 ಪ್ರದೇಶಗಳ ನಿರ್ಭಂಧವನ್ನು ಜಿಲ್ಲಾಡಳಿತ ತೆರವುಗೊಳಿಸಲಾಗಿದೆ.

ಕೋರಾನಾ: ಭಾರತೀಯ ಔಷಧಿಗೆ ತಡೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ!

ಜಿನೆವಾ: ಕೊರೊನಾ ವೈರಸ್ ಗೆ ಪರಿಣಾಮಕಾರಿ ಮದ್ದು ಎನ್ನಲಾಗುತ್ತಿದ್ದ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧದ ವೈದ್ಯಕೀಯ ಪ್ರಯೋಗಕ್ಕೆ ವಿಶ್ವ…

ಖಾಸಗಿ ವೈದ್ಯರು ವೃತ್ತಿ ಪರತೆ ಮರೆತರೆ ಶಿಕ್ಷೆ ಕಟ್ಟಿಟ್ಟ ಬುತ್ತಿ!

ಖಾಸಗಿ ವೈದ್ಯರು ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು. ಒಂದು ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.