ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ನಿಯಂತ್ರಿಸುವಲ್ಲಿ ಗುಜರಾತ್ ಸರ್ಕಾರ ಎಡವಿದೆ. ದೇಶದಲ್ಲಿಯೇ ಗುಜರಾತ್ ನಲ್ಲಿ ಸತ್ತವರ ಸಂಖ್ಯೆ ಹೆಚ್ಚಾಗಿದೆ. ಅಲ್ಲಿ ಸತ್ತವರ ಪ್ರಮಾಣ ಶೇ. 6.25 ರಷ್ಟಿದೆ. ಗುಜರಾತ್ ಗೆ ಹೋಲಿಕೆ ಮಾಡಿದರೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಉತ್ತಮ ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಶೇ. 3.73, ರಾಜಸ್ಥಾನದಲ್ಲಿ ಶೇ. 2.32, ಪಂಜಾಬ್ ನಲ್ಲಿ ಶೇ. 2.17, ಪುದುಚೇರಿಯಲ್ಲಿ ಶೇ. 1.98, ಜಾರ್ಖಂಡ್ ನಲ್ಲಿ ಶೇ. 0.5, ಪುದುಚೇರಿಯಲ್ಲಿ ಶೇ. 1.98, ಜಾರ್ಖಂಡ್ ನಲ್ಲಿ ಶೇ. 0.5ರಷ್ಟು ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ಗುಜರಾತ್ ನ ಮಾಡೆಲ್ ಸದ್ಯ ವಿಶ್ವದ ಮುಂದೆ ಬೆತ್ತಲಾಗಿ ನಿಂತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕು: ದಿಗಿಲು ಮೂಡಿಸಿದ WHO ಸಂದೇಶ..!

ಕರೋನಾ ಸೋಂಕು ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ವಿಶ್ವಕ್ಕೆ ಕಳುಹಿಸಿರುವ ಸಂದೇಶ ಜಗತ್ತಿಗೆ ಧಿಗಿಲು ಮೂಡಿಸುವಂತಿದೆ.

ಗದಗ ನಗರ ಸಭೆ ಮತ ಎಣಿಕೆ ಮುಕ್ತಾಯ :15 ಕಾಂಗ್ರೇಸ್,18 ಬಿಜೆಪಿ 2 ಪಕ್ಷೇತರರು

ಗದಗ: ನಗರ ಸಭೆ ಮತ ಎಣಿಕೆ ಮುಕ್ತಾಯ ವಾಗಿದ್ದು ಒಟ್ಟು 15 ಕಾಂಗ್ರೇಸ್  18  ಬಿಜೆಪಿ …

ಸಂಕಷ್ಟದಲ್ಲೂ ಪರೋಪಕಾರಿ ಈ ಆಟೋ ಚಾಲಕ

ಲಾಕ್ ಡೌನ್ ಹಿನ್ನಲೆ ದುಡಿಮೆಯನ್ನೆ ನಂಬಿದ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇನ್ನು ತನಗೆಷ್ಟೆ ಸಂಕಷ್ಟ ಎದುರಾದರೂ ಆಟೋ ಚಾಲಕನೊಬ್ಬ ಜನಸೇವೆಗೆ ನಿಂತಿದ್ದಾನೆ.

ಗದಗ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 228 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು ಈವರೆಗೆ 128 ಕೇಸ್ ಗಳು. 96 ಸಕ್ರೀಯ ಪ್ರಕರಣಗಳಿವೆ. ಇದರಲ್ಲಿ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ಥ್ ಬುಲೆಟಿನ್ ತಿಳಿಸಿದೆ