ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಅವಶ್ಯಕತೆ ಒದಗಿ ಬಂದಿಲ್ಲ. ಹೀಗಾಗಿ ಲಾಕ್ ಡೌನ್ ಘೋಷಣೆ ಮಾಡುವುದಿಲ್ಲ. ನಾಳೆ ಪ್ರಧಾನಿ ಮೋದಿ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ಇದೆ. ಜನರು ಜೀವನ ನಡೆಸಲು ಅನುಕೂಲ ಮಾಡಿ ಕೊಡಲು ಹಾಗೂ ಆರ್ಥಿಕ ಸುಧಾರಣೆಗೆ ಅವಕಾಶ ಮಾಡಿಕೊಡುವಂತೆ ಪ್ರಧಾನಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕೊರೊನಾದಿಂದ ರಾಜ್ಯ ಮುಕ್ತವಾಗಬೇಕು. ಎಲ್ಲ ಸಂಗತಿಯಿಂದ ಜನರು ಮುಕ್ತವಾಗಿ ನೆಮ್ಮದಿಯ ಜೀವನ ನಡೆಸಬೇಕು. ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ಸರಿ ಇಲ್ಲ. ಆದರೂ ರೂ. 1000 ಕೋಟಿ ಬಿಡುಗಡೆ ಮಾಡಿದ್ದೇನೆ. ರೈತರಿಗೆ ರೂ. 2000 ಕೊಡುವ ಯೋಜನೆಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಿಂದ ರಾಜ್ಯದ 50 ಲಕ್ಷ ರೈತರಿಗೆ ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.