ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಅವಶ್ಯಕತೆ ಒದಗಿ ಬಂದಿಲ್ಲ. ಹೀಗಾಗಿ ಲಾಕ್ ಡೌನ್ ಘೋಷಣೆ ಮಾಡುವುದಿಲ್ಲ. ನಾಳೆ ಪ್ರಧಾನಿ ಮೋದಿ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಇದೆ. ಜನರು ಜೀವನ ನಡೆಸಲು ಅನುಕೂಲ ಮಾಡಿ ಕೊಡಲು ಹಾಗೂ ಆರ್ಥಿಕ ಸುಧಾರಣೆಗೆ ಅವಕಾಶ ಮಾಡಿಕೊಡುವಂತೆ ಪ್ರಧಾನಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕೊರೊನಾದಿಂದ ರಾಜ್ಯ ಮುಕ್ತವಾಗಬೇಕು. ಎಲ್ಲ ಸಂಗತಿಯಿಂದ ಜನರು ಮುಕ್ತವಾಗಿ ನೆಮ್ಮದಿಯ ಜೀವನ ನಡೆಸಬೇಕು. ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ಸರಿ ಇಲ್ಲ. ಆದರೂ ರೂ. 1000 ಕೋಟಿ ಬಿಡುಗಡೆ ಮಾಡಿದ್ದೇನೆ. ರೈತರಿಗೆ ರೂ. 2000 ಕೊಡುವ ಯೋಜನೆಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಿಂದ ರಾಜ್ಯದ 50 ಲಕ್ಷ ರೈತರಿಗೆ ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಗಂಗಾಮತ ಸಮಾಜದ ವಧು-ವರರ ಸಮಾವೇಶ

ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದಿಂದ ವಧು-ವರರ ಸಮಾವೇಶ ಜ.31 ರಂದು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಪೂಜ್ಯಶ್ರೀ ಷ.ಬ್ರ. ಫಕೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜರುಗಲಿದೆ.

ಮಹಾಮಾರಿಗೆ ಬೆಚ್ಚಿ ಬಿದ್ದ ಮಹಾರಾಷ್ಟ್ರ!

ಮುಂಬಯಿ: ಕೊರೊನಾ ಮಹಾಮಾರಿಗೆ ಇಡೀ ಮಹಾರಾಷ್ಟ್ರವೇ ಕಂಗಾಲಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41 ಸಾವಿರ ಗಡಿ…

ಗದಗ, ರೋಣ, ಮುಂಡರಗಿ, ತಾಲೂಕಿನ ಕೆಲವು ಕಡೆ ಕಂಟೇನ್ಮೆಂಟ್ ಘೋಷಣೆ

ಗದಗ: ಜಿಲ್ಲೆಯ ಕೆಲವು ತಾಲೂಕಿನ ಪ್ರದೇಶಗಳನ್ನು ಕಂಟೇನ್ಮೆಂಟ್ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಅದರ ವಿವರ ಈ…

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಆದ್ಯತೆ ನೀಡಿ- ಗಜಾನನ ಮನ್ನಿಕೇರಿ

ನಿಡಗುಂದಿ: ಕೋವಿಡ್ ಲಾಕ್ ಡೌನ್ ನಂತರ ಭೌತಿಕ ತರಗತಿಯ ಬಳಿಕ ಎಸ್ ಎಸ್ ಎಲ್ ಸಿ…