ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಮತ್ತೊಮ್ಮೆ ಲಾಕ್ ಡೌನ್ ಆಗಬಹುದೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಅವಶ್ಯಕತೆ ಒದಗಿ ಬಂದಿಲ್ಲ. ಹೀಗಾಗಿ ಲಾಕ್ ಡೌನ್ ಘೋಷಣೆ ಮಾಡುವುದಿಲ್ಲ. ನಾಳೆ ಪ್ರಧಾನಿ ಮೋದಿ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಇದೆ. ಜನರು ಜೀವನ ನಡೆಸಲು ಅನುಕೂಲ ಮಾಡಿ ಕೊಡಲು ಹಾಗೂ ಆರ್ಥಿಕ ಸುಧಾರಣೆಗೆ ಅವಕಾಶ ಮಾಡಿಕೊಡುವಂತೆ ಪ್ರಧಾನಿಗಳಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಕೊರೊನಾದಿಂದ ರಾಜ್ಯ ಮುಕ್ತವಾಗಬೇಕು. ಎಲ್ಲ ಸಂಗತಿಯಿಂದ ಜನರು ಮುಕ್ತವಾಗಿ ನೆಮ್ಮದಿಯ ಜೀವನ ನಡೆಸಬೇಕು. ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ಸರಿ ಇಲ್ಲ. ಆದರೂ ರೂ. 1000 ಕೋಟಿ ಬಿಡುಗಡೆ ಮಾಡಿದ್ದೇನೆ. ರೈತರಿಗೆ ರೂ. 2000 ಕೊಡುವ ಯೋಜನೆಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಿಂದ ರಾಜ್ಯದ 50 ಲಕ್ಷ ರೈತರಿಗೆ ಅನುಕೂಲ ಆಗಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿಮ್ಮ ಡೇಟಾ ಇದ್ದರೆ ಕೂಡಲೇ ಸೇವ್ ಮಾಡಿಕೊಳ್ಳಿ

ಫೆ.24 ರಿಂದ ಆಚೆಗೆ ತನ್ನ ಪ್ಲೇ ಮ್ಯೂಸಿಕ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸುವುದಾಗಿ ತನ್ನ ಬಳಕೆದಾರರಿಗೆ ಇ-ಮೇಲ್ ಮುಖಾಂತರ ಈಗಾಗಲೇ ತಿಳಿಸಿದೆ.

ನರೆಗಲ್ ಗಾರ್ಡನ್ ಕಥೆ: ಅಭಿವೃದ್ಧಿ ಹೆಸರಲ್ಲಿ ಹಣ ಲೂಟಿ?

ಗದಗ: ಪಟ್ಟಣ ಪಂಚಾಯತಿ ಕಾಂಪೌಂಡ್ ಪಕ್ಕದಲ್ಲಿಯೇ ಉದ್ಯಾನವನ ಇದ್ದರು. ಸಹ ಇಲ್ಲಿನ ಮುಖ್ಯಾಧಿಕಾರಿ , ಸಿಬ್ಬಂದಿಗಳ…

ನಂಬಿದ್ರ ನಂಬ್ರಿ-ಬಿಟ್ರಬಿಡ್ರಿ: 66 ವರ್ಷದ ಹೆಣ್ಮಗಳಿಗೆ 18 ತಿಂಗಳದಾಗ 8 ಮಕ್ಕಳು ಹುಟ್ಟ್ಯಾವು!

ಸತ್ತವ್ರು ಬದಕಿದ್ದು, ಬದುಕಿದವರು ಸತ್ತಿದ್ದು ಇಂಥ ಅದೆಷ್ಟ್ ಘಟನಾ ನಾವು ಕೇಳಿವಿ, ನೋಡಿವಿ. ಆದ್ರ ಎಂತೆಂಥ ಚಿತ್ರ-ವಿಚಿತ್ರ ಘಟನೆನಾ ನಾವು ಕೇಳಿವಿ, ನೋಡಿವಿ. ಆದ್ರ ಈ ಘಟನಾ ಮಾತ್ರ ನಾವು ಎಂದು ಕಾಣದ್ದು, ಕೇಳದ್ದು ಅಂದ್ರು ತಪ್ಪಾಗ್ಲಿಕ್ಕಿಲ್ಲ.

ಬಾಗೇಪಲ್ಲಿ: ತಾಲೂಕಿನ ದುಗ್ಗಿನಾಕನಪಲ್ಲಿ ಗ್ರಾಮದ ಕೆರೆ ಕಾಲುವೆ ಪ್ರದೇಶದ ಒತ್ತುವರಿ ತೆರವುಗೆ ದೂರು

ಉತ್ತರಪ್ರಭ ಸುದ್ದಿ ಬಾಗೇಪಲ್ಲಿ: ತಾಲೂಕಿನ ದುಗ್ಗಿನಾಕನಪಲ್ಲಿ ಗ್ರಾಮದ ಕೆರೆ ಕಾಲುವೆ ಪ್ರದೇಶದ ಒತ್ತುವರಿ ತೆರವುಗೆ ದೂರು…