ದೆಹಲಿ: ಚೀನಾ ಮತ್ತು ಭಾರತೀಯ ಯೋಧರ ನಡುವಿನ ಮುಖಾಮುಖಿಯಲ್ಲಿ ಲಡಾಖ್ ನ ಗಾಲ್ವಾನ್ ನಲ್ಲಿ ಒಬ್ಬ ಭಾರತೀಯ ಸೇನಾಧಿಕಾರಿ ಮತ್ತು ಇಬ್ಬರು ಸೈನಿಕರು ಬಲಿಯಾಗಿದ್ದಾರೆ. ಈ ವಿಷಯವನ್ನು ಭಾರತೀಯ ಸೇನಾಪಡೆಯ ಅಧಿಕಾರಿಗಳು ಹೇಳಿದ್ದು, ಚೀನಾದ ನಾಲ್ವರು ಯೋಧರು ಬಲಿಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಚೀನಾ-ಭಾರತದ ಲಡಾಖ್ ಗಡಿಯಲ್ಲಿ ಕಳೆದ ಒಂದು ವಾರದಿಂದ ಭಾರತೀಯ ಸೇನೆ ಮತ್ತು ಚೀನಾ ಸೇನೆ ಮುಖಾಮುಖಿಯಾಗುತ್ತಿದ್ದ ವರದಿಗಳು ಬರುತ್ತಿದ್ದವು. ಇಂದು ಇದು ಅತಿರೇಕಕ್ಕೆ ತಿರುಗಿದ್ದು, ಎರಡೂ ರಾಷ್ಟ್ರಗಳು ಗಡಿಯಲ್ಲಿ ನಿಯೋಜಿಸಿದ್ದ ಸೇನೆಗಳನ್ನು ಗಡಿಯಿಂದ ವಾಪಸ್ ಕರೆಸಿಕೊಳ್ಳುವ ಸಮಯದಲ್ಲಿ ಈ ಅಚಾತುರ್ಯ ನಡೆದಿದೆ.
ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮನೆಗೆ ಮೂರೂ ಸೇನೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಆಗಮಿಸಿ ಚರ್ಚಿಸಿದರು. ಜೊತೆಗೆ, ರಕ್ಷಣಾ ಸಚಿವರ ನಿವಾಸದಲ್ಲಿ ಹೈ ಲೆವೆಲ್ ಮೀಟಿಂಗ್ ನಡೆಸಲಾಯಿತು. ಗಾಲ್ವಾನ್ ಕಣಿವೆಯಲ್ಲಿ ಭಾರತ ಚೀನಾ ಯೋಧರ ಕಾಳಗ ವಿಷಯದ ಸಂಬಂಧ ಸೇನಾ ಮುಖ್ಯಸ್ಥರ ಜೊತೆ ರಾಜನಾಥ್ ಸಿಂಗ್ ಚರ್ಚಿಸಿದರು. ಗಡಿಯಲ್ಲಿ ಪರಿಸ್ಥಿತಿ ಕುರಿತು ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಮಾಹಿತಿ ನೀಡಿದರು.
ಈ ಕುರಿತು ಟ್ವೀಟರ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಗಾಲ್ವಾನ್ ಕಣಿವೆಯಿಂದ ಬರುವ ವರದಿಗಳು ಗೊಂದಲಮಯವಾಗಿವೆ. ಉಲ್ಬಣಿಸುವ ಬಿಕ್ಕಟ್ಟಿನಿಂದ ನಮ್ಮ ಸೈನಿಕರು ಯಾಕೆ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಜೊತೆಗೆ, ರಾಷ್ಟ್ರೀಯ ಹಿತದೃಷ್ಟಿಯಿಂದ, ಪ್ರಧಾನಿ ಮತ್ತು ರಕ್ಷಣಾ ಸಚಿವರು ಚೀನಾ ಜೊತೆಗಿನ ಗಡಿ ವಿಷಯದಲ್ಲಿ ರಾಷ್ಟ್ರಕ್ಕೆ ಸ್ಪಷ್ಟ ಚಿತ್ರಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 7 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 210…

ಕೊರೊನಾ ಹಿನ್ನೆಲೆ : ಆ.31ರವರೆಗೆ ಪರಿಹಾರ ಸಾಮಗ್ರಿಗಳ ಆಮದಿನ ಮೇಲಿನ ತೆರಿಗೆ ವಿನಾಯಿತಿ ವಿಸ್ತರಣೆ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ತನ್ನ ಸಭೆಯಲ್ಲಿ ಕೊರೊನಾ ವೈರಸ್ ಪರಿಹಾರ ಸಾಮಗ್ರಿಗಳ ಆಮದಿಗೆ ಆಗಸ್ಟ್ 31ರವರೆಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಘೋಷಿಸಿದರು. ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ 43ನೇ ಜಿಎಸ್ಟಿ ಕೌನ್ಸಿಲ್ ಸಭೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಿತು. ಕೌನ್ಸಿಲ್ ಸುಮಾರು ಎಂಟು ತಿಂಗಳಲ್ಲಿ ಮೊದಲ ಬಾರಿಗೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

2 ಅಪರೂಪದ ಆಮೆ ಪತ್ತೆ: ಒಂದು ಹಳದಿ ಬಣ್ಣದ್ದು, ಇನ್ನೊಂದು ಮೃದು ಚಿಪ್ಪಿನದ್ದು!

ಕಪ್ಪು, ದಟ್ಟ ಕಂದು ಬಣ್ಣದ ಆಮೆಗಳನ್ನು ನೋಡಿದ್ದೇವೆ. ಆದರೆ ಒರಿಸ್ಸಾದಲ್ಲೊಂದು ಅಪರೂಪದ ಆಮೆ ಸಿಕ್ಕಿದೆ. ಅದರ ಬಣ್ಣ ಹಳದಿ. ಇಡೀ ದೇಹ, ಚಿಪ್ಪು ಎಲ್ಲವೂ ಸಂಪೂರ್ಣ ಹಳದಿ.

ವಾರಂಟಿಯೇ ಇಲ್ಲದ ಮೇಲೆ ಗ್ಯಾರಂಟಿ ಹೇಗೆ ?
ಕಾಂಗೈ ಕಾಡ್೯ ಠುಸ್ಸು ಪರಸ್ಥಿತಿ ಈಗ ಬಲು ದುಸ್ಥಿತಿ ಸಿ.ಟಿ.ರವಿ ವ್ಯಂಗ್ಯ

ಆಲಮಟ್ಟಿ: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಭರಪೂರ ಸುಳ್ಳು ಭರವಸೆ ನೀಡುತ್ತಿದ್ದು, ಆ ಪಕ್ಷದ ವಾರಂಟಿಯೇ…