ಕೋಲ್ಕತ್ತಾ: ಕೇಂದ್ರ ಸರ್ಕಾರದ ವಿರುದ್ಧ ಸದಾ ಕಾಲ ಗುಡುಗುತ್ತಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದ ಸಂವಾದದಿಂದ ದೂರ ಉಳಿದಿದ್ದಾರೆ.

ದೇಶದ 21 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಎರಡು ದಿನ ಸಭೆ ಕರೆದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಲಹೆ ಸೂಚನೆಗಳನ್ನು ಸಂಗ್ರಹಿಸಲಿದ್ದಾರೆ.

ಮೊದಲ ಭಾಗವಾಗಿ ಜೂ. 16ರ ಮಂಗಳವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಪಂಜಾಬ್, ಜಾರ್ಖಂಡ್, ಛತ್ತೀಸ್ ಗಢ್, ತ್ರಿಪುರಾ, ಹಿಮಾಚಲ ಪ್ರದೇಶ, ಚಂಡೀಗರ್, ಗೋವಾ, ಅಸ್ಸಾಂ, ಕೇರಳ, ಉತ್ತರಾಖಂಡ್, ಮಣಿಪುರ, ಲಡಾಖ್, ಪುದುಚೇರಿ, ಅರುಣಾಚಲ ಪ್ರದೇಶ, ಮೇಘಾಲಯ, ಮೀಜೋರಾಂ, ದಾದರ್ ನಗರ್, ಹವೇಲಿ ದಿಯು ಮತ್ತು ದಮನ್, ಸಿಕ್ಕಿಂ, ಲಕ್ಷದ್ವೀಪ ರಾಜ್ಯಗಳ ಸಿಎಂ ಹಾಗೂ ಲೆಫ್ಟಿನೆಂಟ್ ಗವರ್ನರ್ ಜೊತೆಗೆ ಚರ್ಚೆ ನಡೆಸಿದ್ದಾರೆ.

ಭಾರತ ಲಾಕ್ ಡೌನ್ ನಂತರದಲ್ಲಿ ಆರನೇ ಬಾರಿ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ವಿಡಿಯೋ ಸಂವಾದ ನಡೆಸಿದ್ದಾರೆ. ಒಂದು ದಿನಕ್ಕೆ 13 ರಾಜ್ಯಗಳ ಸಿಎಂಗಳಿಗೆ ಮಾತ್ರ ಮಾತನಾಡುವುದಕ್ಕೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಭೆಗೆ ಹಾಜರಾಗಲಿಲ್ಲ.

Leave a Reply

Your email address will not be published. Required fields are marked *

You May Also Like

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸರ್ಕಾರಿ ನೌಕರರು ಆರೋಗ್ಯ ವಿಮಾ ಸೌಲಭ್ಯವನ್ನು ಪಡೆಯಬಹುದು- ಸುಪ್ರೀಂ

ಕೇಂದ್ರ ಸರ್ಕಾರದ ನೌಕರರು ತುರ್ತು ಸಮಯದಲ್ಲಿ ಸಿಜಿಹೆಚ್‌ಎಸ್‌ ಅಂದರೆ ಕೇಂದ್ರ ಸರ್ಕಾರ ಸೂಚಿಸಿರುವ ಆಸ್ಪತ್ರೆಗಳ ಹೊರತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ನೌಕರರ ಹಕ್ಕಿನ ಅನ್ವಯ ಸರ್ಕಾರದಿಂದ ಮೆಡಿಕ್ಲೇಮ್‌ ಪಡೆಯಬುದು ಎಂದು ಹೇಳುವ ಮೂಲಕ ಸರ್ಕಾರಿ ನೌಕರರಿಗೆ ಸುಪ್ರೀಂ ಸಿಹಿ ಸುದ್ದಿ ನೀಡಿದೆ.

ಮಗನಿಗೆ ‌ಪರೀಕ್ಷೆಗೆ ಕರೆದೊಯ್ಯುವಾಗ ಅಪಘಾತ: ಸ್ಥಳದಲ್ಲೆ ತಂದೆ ಸಾವು.!

ರಾಯಚೂರು: ಮಗನನ್ನು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿ ತಂದೆ ಸ್ಥಳದಲ್ಲೇ…

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.