ಬೆಂಗಳೂರು: ಲಾಕ್ ಡೌನ್ ನಿಂದಾಗಿ ಬಿಡುವು ಪಡೆದಿದ್ದ ಸೆನ್ಸಾರ್ ಮಂಡಳಿ ಸದ್ಯ ಮತ್ತೆ ಕೆಲಸ ಆರಂಭಿಸಿದೆ. ಅಲ್ಲದೇ, ಚಿತ್ರರಂಗ ಕೂಡ ತನ್ನ ಕೆಲಸ ಪ್ರಾರಂಭಿಸಿದೆ. ಕೊರೊನಾ ಹಾವಳಿಯ ಮಧ್ಯೆಯೇ srikrishna@gmail.com ಚಿತ್ರಕ್ಕೆ ಮಹೂರ್ತ ಫಿಕ್ಸ್ ಮಾಡಲಾಗಿದೆ.

ಸಂದೇಶ್ ನಾಗರಾಜ್ ಅವರು ನಿರ್ಮಿಸಿರುವ ಡಾರ್ಲಿಂಗ್ ಕೃಷ್ಣ ಅಭಿನಯದ ಚಿತ್ರ ಜೂ. 18ರಂದು ಅರ್ಜುನ್ ಜನ್ಯಾ ಅವರ ಸ್ಟುಡಿಯೋದಲ್ಲಿ ಸೆಟ್ಟೇರಲಿದೆ. ಈ ಚಿತ್ರಕ್ಕೆ ನಾಗಶೇಖರ್ ನಿರ್ದೇಶನ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮಹೂರ್ತ ಕಾರ್ಯಕ್ರಮ ಸರಳವಾಗಿ ನೆರವೇರುತ್ತದೆ ಎಂದು ಪ್ರೊಡಕ್ಷನ್ಸ್ ಹೌಸ್ ಘೋಷಿಸಿದೆ.

ಪ್ರಮುಖ ನಟ, ನಿರ್ದೇಶಕ ಮತ್ತು ತಾಂತ್ರಿಕ ಸಿಬ್ಬಂದಿ ಉಪಸ್ಥಿತಿಯಲ್ಲಿ ಚಿತ್ರ ಪ್ರಾರಂಭಿಸಲಾಗುವುದು. ಅರ್ಜುನ್ ಜನ್ಯಾ ಅವರೊಂದಿಗೆ ನಿರ್ದೇಶಕರು ಹಾಡಿನ ಧ್ವನಿ ಮುದ್ರಣ ಪ್ರಾರಂಭಿಸಲಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಉಳಿದ ಪಾತ್ರ ವರ್ಗಗಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ಚಿತ್ರ ತಂಡ ಹೇಳಿದೆ.

ಆಕ್ಷನ್-ಲವ್ ಎಂಟರ್‌ಟೈನರ್‌ನಲ್ಲಿ ರಾಷ್ಟ್ರ ಪ್ರಶಸ್ತಿ ಜೇತ ದತ್ತಣ್ಣ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. srikrishna@gmail.com ಚಿತ್ರಕ್ಕೆ ಸತ್ಯ ಹೆಗ್ಡೆ ಕ್ಯಾಮೆರಾ ಕೆಲಸ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೋದಿ ಸರ್ಕಾರಕ್ಕೆ ಒಂದು ವರ್ಷ: ದೇಶವಾಸಿಗಳಿಗೆ ಪ್ರಧಾನಿ ಪತ್ರ

ಕೇಂದ್ರದ ನರೇಂದ್ರ ಮೋದಿ ನರೆತೃತ್ವದ ಸರ್ಕಾರ ಒಂದು ವರ್ಷ ಅವಧಿ ಪೂರ್ಣಗೊಳಿಸಿದೆ. ಈ ಹಿನ್ನೆಲೆ ಪ್ರಧಾನಿ…

ಸ್ಕೈಪ್ ಮೂಲಕ ಅಂತಿಮ ಕ್ರಿಯೇ: ಮನ ಮಿಡಿಯುವ ಘಟನೆ ವಿವರಿಸಿದ ಶಿಕ್ಷಣ ಸಚಿವ

ಪ್ರಾಥಮಿಕ ಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕೊರೊನಾ ತಂದ ಸಂಕಷ್ಟದ ಎರಡು ಮನಮಿಸಿಯುವ ಘಟನೆಗಳನ್ನು ಹೇಳಿದ್ದಾರೆ.

ನೀವು ಸರ್ಕಾರಿ ಜಮೀನು ಲೀಜ್ ಪಡೆದಿದ್ದಿರಾ? ಆ ಜಮೀನು ನಿಮ್ಮದಾಗಲಿದೆ..!

ಬೆಂಗಳೂರು: ಗುತ್ತಿಗೆಯಡಿಯಲ್ಲಿ ನೀಡಿದ್ದ ಸರ್ಕಾರಿ ಜಮೀನನ್ನು ಖಾಯಂ ಆಗಿ ಅವರ ಹೆಸರಿಗೆ ಮಾರ್ಪಡಿಸಲು ರಾಜ್ಯ ಸರ್ಕಾರ…

ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್!

ಲಾಕ್‌ಡೌನ್‌ ತೆರವಾದ ನಂತರ, ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಯಂತೆ ಹೆಚ್ಚುತ್ತಿಲ್ಲ. ಅದಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಸೆಳೆಯಲು, ದೈನಂದಿನ ಹಾಗೂ ಮಾಸಿಕ ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಯೋಜನೆ ಹಮ್ಮಿಕೊಂಡಿದೆ.