ಬೆಂಗಳೂರು: ಲಾಕ್ ಡೌನ್ ನಿಂದಾಗಿ ಬಿಡುವು ಪಡೆದಿದ್ದ ಸೆನ್ಸಾರ್ ಮಂಡಳಿ ಸದ್ಯ ಮತ್ತೆ ಕೆಲಸ ಆರಂಭಿಸಿದೆ. ಅಲ್ಲದೇ, ಚಿತ್ರರಂಗ ಕೂಡ ತನ್ನ ಕೆಲಸ ಪ್ರಾರಂಭಿಸಿದೆ. ಕೊರೊನಾ ಹಾವಳಿಯ ಮಧ್ಯೆಯೇ srikrishna@gmail.com ಚಿತ್ರಕ್ಕೆ ಮಹೂರ್ತ ಫಿಕ್ಸ್ ಮಾಡಲಾಗಿದೆ.

ಸಂದೇಶ್ ನಾಗರಾಜ್ ಅವರು ನಿರ್ಮಿಸಿರುವ ಡಾರ್ಲಿಂಗ್ ಕೃಷ್ಣ ಅಭಿನಯದ ಚಿತ್ರ ಜೂ. 18ರಂದು ಅರ್ಜುನ್ ಜನ್ಯಾ ಅವರ ಸ್ಟುಡಿಯೋದಲ್ಲಿ ಸೆಟ್ಟೇರಲಿದೆ. ಈ ಚಿತ್ರಕ್ಕೆ ನಾಗಶೇಖರ್ ನಿರ್ದೇಶನ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮಹೂರ್ತ ಕಾರ್ಯಕ್ರಮ ಸರಳವಾಗಿ ನೆರವೇರುತ್ತದೆ ಎಂದು ಪ್ರೊಡಕ್ಷನ್ಸ್ ಹೌಸ್ ಘೋಷಿಸಿದೆ.

ಪ್ರಮುಖ ನಟ, ನಿರ್ದೇಶಕ ಮತ್ತು ತಾಂತ್ರಿಕ ಸಿಬ್ಬಂದಿ ಉಪಸ್ಥಿತಿಯಲ್ಲಿ ಚಿತ್ರ ಪ್ರಾರಂಭಿಸಲಾಗುವುದು. ಅರ್ಜುನ್ ಜನ್ಯಾ ಅವರೊಂದಿಗೆ ನಿರ್ದೇಶಕರು ಹಾಡಿನ ಧ್ವನಿ ಮುದ್ರಣ ಪ್ರಾರಂಭಿಸಲಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಉಳಿದ ಪಾತ್ರ ವರ್ಗಗಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ಚಿತ್ರ ತಂಡ ಹೇಳಿದೆ.

ಆಕ್ಷನ್-ಲವ್ ಎಂಟರ್‌ಟೈನರ್‌ನಲ್ಲಿ ರಾಷ್ಟ್ರ ಪ್ರಶಸ್ತಿ ಜೇತ ದತ್ತಣ್ಣ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. srikrishna@gmail.com ಚಿತ್ರಕ್ಕೆ ಸತ್ಯ ಹೆಗ್ಡೆ ಕ್ಯಾಮೆರಾ ಕೆಲಸ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಉಡುಪಿಯಲ್ಲಿ ಆತಂಕ ಹೆಚ್ಚಿಸಿದ ಕೊರೊನಾ!

ಉಡುಪಿ ಜನರಿಗೆ ಕೊರೊನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ಬಂದು ಕ್ವಾರಂಟೈನ್ನಿಲ್ಲಿ ಇರುವವರಲ್ಲಿ ಹೆಚ್ಚು ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ಇಂದು ಕೂಡ ಬರೋಬ್ಬರಿ 25 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಆಸ್ತಿ ಕಲಹ: ಪತ್ನಿ ಎದುರೆ ಪತಿಯ ಹತ್ಯೆ!

ಆಸ್ತಿ ವಿವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೇ. 15ರಂದು ಈ ಕೊಲೆ ನಡೆದಿದ್ದು, ಕೊಲೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಉಮೇಶ್ ಬಾಳಗಿ (39) ಕೊಲೆಯಾದ ವ್ಯಕ್ತಿ. ಚೆನ್ನಬಸಪ್ಪ ಬಾಳಗಿ ಮತ್ತು ಬಸಪ್ಪ ಬಾಳಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಲಾಕ್ ಡೌನ್ : ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.

ರೋಣ: ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಧರಣಿ; ಐಷಾರಾಮಿ ವಾಹನದಲ್ಲಿ ಓಡಾಡುವವರಿಗೆ ನಮ್ಮ ಕಷ್ಟ ಗೊತ್ತಾಗೋದು ಹೇಗೆ?

ಸಾರ್ವಜನಿಕರು ಪ್ರತಿನಿತ್ಯ ಪರದಾಡುತ್ತಿರುವಾಗ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಐಷಾರಾಮಿ ವಾಹನದಲ್ಲಿ ಅಡ್ಡಾಡುತ್ತಿರುವಾಗ ನಮ್ಮಂತವರ ಕಷ್ಟ ನಿಮಗೆ ಹೇಗೆ ಗೊತ್ತಾಗುತ್ತದೆ ಎಂದು ತಾಲೂಕು ದಲಿತ ಸಂಘಟನೆಯ ಮುಖಂಡ ವೀರಪ್ಪ ತೆಗ್ಗಿನಮನಿ ಆಕ್ರೋಶ ವ್ಯಕ್ತಪಡಿಸಿದರು.