ಬೆಂಗಳೂರು: ಲಾಕ್ ಡೌನ್ ನಿಂದಾಗಿ ಬಿಡುವು ಪಡೆದಿದ್ದ ಸೆನ್ಸಾರ್ ಮಂಡಳಿ ಸದ್ಯ ಮತ್ತೆ ಕೆಲಸ ಆರಂಭಿಸಿದೆ. ಅಲ್ಲದೇ, ಚಿತ್ರರಂಗ ಕೂಡ ತನ್ನ ಕೆಲಸ ಪ್ರಾರಂಭಿಸಿದೆ. ಕೊರೊನಾ ಹಾವಳಿಯ ಮಧ್ಯೆಯೇ srikrishna@gmail.com ಚಿತ್ರಕ್ಕೆ ಮಹೂರ್ತ ಫಿಕ್ಸ್ ಮಾಡಲಾಗಿದೆ.

ಸಂದೇಶ್ ನಾಗರಾಜ್ ಅವರು ನಿರ್ಮಿಸಿರುವ ಡಾರ್ಲಿಂಗ್ ಕೃಷ್ಣ ಅಭಿನಯದ ಚಿತ್ರ ಜೂ. 18ರಂದು ಅರ್ಜುನ್ ಜನ್ಯಾ ಅವರ ಸ್ಟುಡಿಯೋದಲ್ಲಿ ಸೆಟ್ಟೇರಲಿದೆ. ಈ ಚಿತ್ರಕ್ಕೆ ನಾಗಶೇಖರ್ ನಿರ್ದೇಶನ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಮಹೂರ್ತ ಕಾರ್ಯಕ್ರಮ ಸರಳವಾಗಿ ನೆರವೇರುತ್ತದೆ ಎಂದು ಪ್ರೊಡಕ್ಷನ್ಸ್ ಹೌಸ್ ಘೋಷಿಸಿದೆ.

ಪ್ರಮುಖ ನಟ, ನಿರ್ದೇಶಕ ಮತ್ತು ತಾಂತ್ರಿಕ ಸಿಬ್ಬಂದಿ ಉಪಸ್ಥಿತಿಯಲ್ಲಿ ಚಿತ್ರ ಪ್ರಾರಂಭಿಸಲಾಗುವುದು. ಅರ್ಜುನ್ ಜನ್ಯಾ ಅವರೊಂದಿಗೆ ನಿರ್ದೇಶಕರು ಹಾಡಿನ ಧ್ವನಿ ಮುದ್ರಣ ಪ್ರಾರಂಭಿಸಲಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಉಳಿದ ಪಾತ್ರ ವರ್ಗಗಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ಚಿತ್ರ ತಂಡ ಹೇಳಿದೆ.

ಆಕ್ಷನ್-ಲವ್ ಎಂಟರ್‌ಟೈನರ್‌ನಲ್ಲಿ ರಾಷ್ಟ್ರ ಪ್ರಶಸ್ತಿ ಜೇತ ದತ್ತಣ್ಣ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. srikrishna@gmail.com ಚಿತ್ರಕ್ಕೆ ಸತ್ಯ ಹೆಗ್ಡೆ ಕ್ಯಾಮೆರಾ ಕೆಲಸ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಂಡರಗಿ: ಸೇತುವೆ ಕುಸಿತ ಸಂಚಾರ ವ್ಯತ್ಯಯ!

ತಾಲೂಕಿನ ಕೊರ್ಲಹಳ್ಳಿ ಬಳಿಯ ಸೇತುವೆ ಇಂದು ಬೆಳಗಿನ ಜಾವ ಕುಸಿತಗೊಂಡಿದ್ದು ಬೆಳಕಿಗೆ ಬಂದಿದೆ. ಅದೃಷ್ಟವಶಾತ್​ ಈ ಸಮಯದಲ್ಲಿ ಹೆಚ್ಚಿನ ಸಂಚಾರ ಇಲ್ಲದ ಹಿನ್ನೆಲೆಯಲ್ಲಿ ದುರ್ಘಟನೆ ಸಂಭವಿಸಿಲ್ಲ. ಆದರೆ ಘಟನೆಯಿಂದ ಬೆಳಿಗ್ಗೆ ಕಾರೊಂದು ಜಖಂಗೊಂಡಿದೆ ಎನ್ನಲಾಗಿದೆ.

ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತುವಂತೆ!: ಅದರ ಮೇಲೆ ಶೇ.18 ಜಿ.ಎಸ್.ಟಿ ಏಕಂತೆ?

ಕೇಂದ್ರ ಸರ್ಕಾರ ಹ್ಯಾಂಡ್ ಸ್ಯಾನಿಟೈಸರ್ ಅಗತ್ಯ ವಸ್ತು ಎನ್ನುತ್ತದೆ . ಆದರೆ ತೆರಿಗೆ ಇಲಾಖೆಯು ಅದನ್ನು ‘ಆಲ್ಕೊಹಾಲ್’ ಕೆಟಗರಿಗೆ ಸೇರಿಸಿ ಶೇ.18 ಜಿ.ಎಸ್.ಟಿ ತೆರಿಗೆ ಹೇರಿದ್ದನ್ನು ಸಮರ್ಥಿಸುತ್ತದೆ.

ಲಾಕ್ ಡೌನ್ ತೆರವಿನಿಂದ ಕೊರೊನಾ ಪ್ರಮಾಣದಲ್ಲಿ ಹೆಚ್ಚಳ: ಕೇಜ್ರಿವಾಲ್

ಲಾಕ್ ಡೌನ್ ತೆರವಿನಿಂದಾಗಿ ದೆಹಲಿಯಲ್ಲಿ ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆರೋಪಿಸಿದರು.

ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!

ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು‌. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.