ಮುಂಡರಗಿ: ಚೀನಿ ಆಪ್ ಟಿಕ್ ಟಾಕ್ ನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಮುಂಡರಗಿಯಲ್ಲಿಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಇಲ್ಲಿನ ಕೊಪ್ಪಳ ವೃತ್ತ ಬಳಿ ಜಮಾವಣೆಗೊಂಡು ಟಿಕ್ ಟಾಕ್ ಫಲಕ ಹಾಕಿದ ಚೀನಾ ಅಧ್ಯಕ್ಷರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತ ಪಡಿಸಲಾಯಿತು.

ಜಗತ್ತಿನಾದ್ಯಂತ ಕೊರೊನಾ ಹರಡಲು ಚೀನಾ ದೇಶವೇ ಮುಖ್ಯ ಕಾರಣ. ಆದರೆ ಇದೀಗ ಕಳೆದ ಹಲುವು ದಿನಗಳಿಂದ ಕಾಲ್ಕೆರೆದು ಭಾರತದ ಗಡಿ ದಾಟುವ ದುಸ್ಸಾಹಸ ಮಾಡುತ್ತಿದೆ. ಮಧ್ಯ ರಾತ್ರಿ ಲಡಾಕ್ ನ ಗಾಲ್ವಾನ್ ನಲ್ಲಿ  ನಡೆದ ಕಾಳಗದಲ್ಲಿ ಭಾರತೀಯ ಸೇನೆಯ ಓರ್ವ ಮುಖ್ಯಸ್ಥ ಸೇರಿದಂತೆ 20 ಸೈನಿಕರು ಹುತಾತ್ಮರಾಗಿದ್ದಾರೆ. ಚೀನಾದ ಈ ನರಿ ಬುದ್ದಿಯ ಚಾಳಿಯನ್ನು ವಿರೋಧಿಸಬೇಕಿದೆ. ಈ ಕಾರಣದಿಂದ ಟಿಕ್ ಟಾಕ್ ಆಪ್ ಹಾಗೂ ಚೀನಾ ಮೂಲದ ವಸ್ತುಗಳನ್ನು ಯಾರು ಕೂಡ ಬಳಸದಿರುವ ಬಗ್ಗೆ ಜನಜಾಗೃತಿಯಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಕ್ರಾಂತಿ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಮುಧೋಳ್, ತಾಲೂಕು ಅಧ್ಯಕ್ಷ ರಾಮು ದೊಣ್ಣಿ, ಉಪಾಧ್ಯಕ್ಷ ಮಹಾಂತೇಶ್ ಬಳ್ಳಾರಿ, ಮಂಜುನಾಥ್ ಇಟಗಿ, ಶಿವು ನಾಡಗೌಡ್ರ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ದಾಸರ ಕೀರ್ತನೆಗೆ ತಲೆಬಾಗಿದ ಶಿವರತ್ನ, ರಾಮನಿಂದ ಬಿಜೆಪಿಗೆ ಪಟ್ಟಾಭೀಷೆಕ: ‘ಕೈ’ ಗೆ ನಿರಾಶೆ

ಉತ್ತರಪ್ರಭ ಗದಗ: ಗದಗ ಬೆಟಗೇರಿ ನಗರ ಸಭೆಯ 35 ವಾರ್ಡಗಳಲ್ಲಿ 18 ವಾರ್ಡಗಳಲ್ಲಿ ಬಿಜೆಪಿ, 15…

ಪಕ್ಷದ ಬಲವರ್ಧನೆಗೆ ಸರ್ವರೂ ಶ್ರಮಿಸಿ: ಲಮಾಣಿ

ಕಾರ್ಯಕರ್ತರ ಉತ್ತಮ ಕಾರ್ಯದಿಂದ ಪಕ್ಷ ಉತ್ತುಂಗಕ್ಕೆರಿದ್ದು, ನೂತನ ಪದಾಧಿಕಾರಿಗಳು ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದರ ಮೂಲಕ ಪಕ್ಷದ ಸಂಪೂರ್ಣ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿ ಕಳಪೆ ಕಾಮಗಾರಿಗೆ ತಡೆ

ಉತ್ತರ ಪ್ರಭ ಸುದ್ದಿರೋಣ : ಪಟ್ಟಣದ ಸಿದ್ದಾರೊಡ ಮಠದ ಮುಂದಿನ ರಸ್ತೆ ದುರಸ್ಥಿಯನ್ನು ಅತ್ಯಂತ ಕಳಪೆ…

ಮಡದಿ ಮಾಂಗಲ್ಯ ಸರ ಮಾರಿ ಕುಡಿದ ಆತ ಮಾಡಿದ್ದೇನು?

ಚಿಕ್ಕಬಳ್ಳಾಪುರ: ಕುಡಿದ ಮತ್ತಿನಲ್ಲಿದ್ದ ಪಾಪಿ ಪತಿಯೊಬ್ಬ ಮಡದಿಯನ್ನೇ ಕೊಲೆ ಮಾಡಿರುವ ಘಟನೆ ಚೇಳೂರು ಪೊಲೀಸ್‌ ಠಾಣೆ…