ಮುಂಡರಗಿ: ಚೀನಿ ಆಪ್ ಟಿಕ್ ಟಾಕ್ ನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಮುಂಡರಗಿಯಲ್ಲಿಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಇಲ್ಲಿನ ಕೊಪ್ಪಳ ವೃತ್ತ ಬಳಿ ಜಮಾವಣೆಗೊಂಡು ಟಿಕ್ ಟಾಕ್ ಫಲಕ ಹಾಕಿದ ಚೀನಾ ಅಧ್ಯಕ್ಷರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತ ಪಡಿಸಲಾಯಿತು.

ಜಗತ್ತಿನಾದ್ಯಂತ ಕೊರೊನಾ ಹರಡಲು ಚೀನಾ ದೇಶವೇ ಮುಖ್ಯ ಕಾರಣ. ಆದರೆ ಇದೀಗ ಕಳೆದ ಹಲುವು ದಿನಗಳಿಂದ ಕಾಲ್ಕೆರೆದು ಭಾರತದ ಗಡಿ ದಾಟುವ ದುಸ್ಸಾಹಸ ಮಾಡುತ್ತಿದೆ. ಮಧ್ಯ ರಾತ್ರಿ ಲಡಾಕ್ ನ ಗಾಲ್ವಾನ್ ನಲ್ಲಿ  ನಡೆದ ಕಾಳಗದಲ್ಲಿ ಭಾರತೀಯ ಸೇನೆಯ ಓರ್ವ ಮುಖ್ಯಸ್ಥ ಸೇರಿದಂತೆ 20 ಸೈನಿಕರು ಹುತಾತ್ಮರಾಗಿದ್ದಾರೆ. ಚೀನಾದ ಈ ನರಿ ಬುದ್ದಿಯ ಚಾಳಿಯನ್ನು ವಿರೋಧಿಸಬೇಕಿದೆ. ಈ ಕಾರಣದಿಂದ ಟಿಕ್ ಟಾಕ್ ಆಪ್ ಹಾಗೂ ಚೀನಾ ಮೂಲದ ವಸ್ತುಗಳನ್ನು ಯಾರು ಕೂಡ ಬಳಸದಿರುವ ಬಗ್ಗೆ ಜನಜಾಗೃತಿಯಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಕ್ರಾಂತಿ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಮುಧೋಳ್, ತಾಲೂಕು ಅಧ್ಯಕ್ಷ ರಾಮು ದೊಣ್ಣಿ, ಉಪಾಧ್ಯಕ್ಷ ಮಹಾಂತೇಶ್ ಬಳ್ಳಾರಿ, ಮಂಜುನಾಥ್ ಇಟಗಿ, ಶಿವು ನಾಡಗೌಡ್ರ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ವಿಫಲ – ಬರಲಿದೆ ಕೇಂದ್ರ ತಂಡ!

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ ರಾಜ್ಯದಲ್ಲಿ ಮಾತ್ರ ಇದರ ಪ್ರಭಾವ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ತಂಡವು ರಾಜ್ಯಕ್ಕೆ ಆಗಮಿಸುತ್ತಿದೆ.

ಗಂಗಾಪುರ ಸಕ್ಕರೆ ಕಾರ್ಖಾನೆಯಲ್ಲಿ ಕೊಲೆ ಪ್ರಕರಣ: ಆರೋಪಿ ಬಂಧನ!

ಇತ್ತಿಚೆಗೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪುರದ ವಿಜಯನಗರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಸೆಕ್ಯೂರಿಟಿ ಗಾರ್ಡ್ ಕೊಲೆ ಪ್ರಕರಣವನ್ನು ಕೊನೆಗೂ ಮುಂಡರಗಿ ಪೊಲೀಸರು ಭೇದಿಸಿದ್ದಾರೆ.

ಮಕ್ಕಳಿಗೆ ಪ್ರೀತಿ ವಾತ್ಸಲ್ಯ ತೋರಿ-ಎಂ.ಎನ್.ಪದ್ಮಜಾ

ಚಿತ್ರವರದಿ: ಗುಲಾಬಚಂದ ಆರ್ ಜಾಧವಆಲಮಟ್ಟಿ : ಇದೀಗ ಪರೀಕ್ಷೆಗಳು ಸಮೀಪಿಸುತ್ತಿದ್ದು ಮಕ್ಕಳ ಆ ನಿಟ್ಟಿನಲ್ಲಿ ಕಠಿಣ…

ವಿರೋಧದ ನಡುವೆಯೇ ಕೃಷಿ ಉತ್ಪನ್ನ ಮಾರುಕಟ್ಟೆ ವಿಧೇಯಕ ಅಂಗೀಕಾರ!

ಬೆಂಗಳೂರು : ವಿಪಕ್ಷಗಳ ವಿರೋಧದ ನಡುವೆಯೂ ವಿವಾದಿತ 2020ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ…