ಮುಂಡರಗಿ: ಚೀನಿ ಆಪ್ ಟಿಕ್ ಟಾಕ್ ನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಮುಂಡರಗಿಯಲ್ಲಿಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಇಲ್ಲಿನ ಕೊಪ್ಪಳ ವೃತ್ತ ಬಳಿ ಜಮಾವಣೆಗೊಂಡು ಟಿಕ್ ಟಾಕ್ ಫಲಕ ಹಾಕಿದ ಚೀನಾ ಅಧ್ಯಕ್ಷರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತ ಪಡಿಸಲಾಯಿತು.

ಜಗತ್ತಿನಾದ್ಯಂತ ಕೊರೊನಾ ಹರಡಲು ಚೀನಾ ದೇಶವೇ ಮುಖ್ಯ ಕಾರಣ. ಆದರೆ ಇದೀಗ ಕಳೆದ ಹಲುವು ದಿನಗಳಿಂದ ಕಾಲ್ಕೆರೆದು ಭಾರತದ ಗಡಿ ದಾಟುವ ದುಸ್ಸಾಹಸ ಮಾಡುತ್ತಿದೆ. ಮಧ್ಯ ರಾತ್ರಿ ಲಡಾಕ್ ನ ಗಾಲ್ವಾನ್ ನಲ್ಲಿ  ನಡೆದ ಕಾಳಗದಲ್ಲಿ ಭಾರತೀಯ ಸೇನೆಯ ಓರ್ವ ಮುಖ್ಯಸ್ಥ ಸೇರಿದಂತೆ 20 ಸೈನಿಕರು ಹುತಾತ್ಮರಾಗಿದ್ದಾರೆ. ಚೀನಾದ ಈ ನರಿ ಬುದ್ದಿಯ ಚಾಳಿಯನ್ನು ವಿರೋಧಿಸಬೇಕಿದೆ. ಈ ಕಾರಣದಿಂದ ಟಿಕ್ ಟಾಕ್ ಆಪ್ ಹಾಗೂ ಚೀನಾ ಮೂಲದ ವಸ್ತುಗಳನ್ನು ಯಾರು ಕೂಡ ಬಳಸದಿರುವ ಬಗ್ಗೆ ಜನಜಾಗೃತಿಯಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಕ್ರಾಂತಿ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಮುಧೋಳ್, ತಾಲೂಕು ಅಧ್ಯಕ್ಷ ರಾಮು ದೊಣ್ಣಿ, ಉಪಾಧ್ಯಕ್ಷ ಮಹಾಂತೇಶ್ ಬಳ್ಳಾರಿ, ಮಂಜುನಾಥ್ ಇಟಗಿ, ಶಿವು ನಾಡಗೌಡ್ರ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಭಟ್ಕಳದಲ್ಲಿ ಈಗ ಕೊರೊನಾದ್ದೇ ಆಟ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದೇ ದಿನ ಬರೋಬ್ಬರಿ 12 ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಹೋಗಿದ್ದ ಕುಟುಂಬ ಸೋಂಕಿಗೆ ಬಲಿಯಾಗಿದ್ದು, ಇಡೀ ಜಿಲ್ಲೆಯ ಜನರೇ ಬೆಚ್ಚಿ ಬೀಳುವಂತೆ ಮಾಡಿದೆ.

ಮುಂದಿನ ದಿನಗಳಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಂತೆ

ಮುಂದಿನ ದಿನಗಳಲ್ಲಿ ಒಂದಿಷ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಬಹುದು. ಸಮಸ್ಯೆ ಎದುರಿಸಲು ಸರಕಾರ ಸಂಪೂರ್ಣ ಸಜ್ಜಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಹೇಳಿದರು.

ಐರನ್ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಉತ್ತರಪ್ರಭ ಪಾವಗಡ: ತುಮಕೂರು ಜಿಲ್ಲೆಯ ಗಡಿ ಪ್ರದೇಶವಾದ ಪಾವಗಡ ತಾಲ್ಲೂಕಿನ ತಮ್ಮ ಸ್ವ ಗ್ರಾಮವಾದ ಮಂಗಳವಾಡ…

ಗದಗನಲ್ಲಿ ಹೀಗಿದೆ ವಿಕೆಂಡ್ ಕರ್ಪ್ಯೂ..!

ವೀಕೆಂಡ್ ಕಫ್ಯೂ೯ ಹಿನ್ನೆಲೆಯಲ್ಲಿ ಗದುಗಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದ ವ್ಯಾಪಾರ, ವಹಿವಾಟು ಸಂಪೂರ್ಣ ಸ್ಥಬ್ದವಾಗಿದೆ.