ಮುಂಡರಗಿ: ಚೀನಿ ಆಪ್ ಟಿಕ್ ಟಾಕ್ ನ್ನು ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಮುಂಡರಗಿಯಲ್ಲಿಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಇಲ್ಲಿನ ಕೊಪ್ಪಳ ವೃತ್ತ ಬಳಿ ಜಮಾವಣೆಗೊಂಡು ಟಿಕ್ ಟಾಕ್ ಫಲಕ ಹಾಕಿದ ಚೀನಾ ಅಧ್ಯಕ್ಷರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತ ಪಡಿಸಲಾಯಿತು.

ಜಗತ್ತಿನಾದ್ಯಂತ ಕೊರೊನಾ ಹರಡಲು ಚೀನಾ ದೇಶವೇ ಮುಖ್ಯ ಕಾರಣ. ಆದರೆ ಇದೀಗ ಕಳೆದ ಹಲುವು ದಿನಗಳಿಂದ ಕಾಲ್ಕೆರೆದು ಭಾರತದ ಗಡಿ ದಾಟುವ ದುಸ್ಸಾಹಸ ಮಾಡುತ್ತಿದೆ. ಮಧ್ಯ ರಾತ್ರಿ ಲಡಾಕ್ ನ ಗಾಲ್ವಾನ್ ನಲ್ಲಿ  ನಡೆದ ಕಾಳಗದಲ್ಲಿ ಭಾರತೀಯ ಸೇನೆಯ ಓರ್ವ ಮುಖ್ಯಸ್ಥ ಸೇರಿದಂತೆ 20 ಸೈನಿಕರು ಹುತಾತ್ಮರಾಗಿದ್ದಾರೆ. ಚೀನಾದ ಈ ನರಿ ಬುದ್ದಿಯ ಚಾಳಿಯನ್ನು ವಿರೋಧಿಸಬೇಕಿದೆ. ಈ ಕಾರಣದಿಂದ ಟಿಕ್ ಟಾಕ್ ಆಪ್ ಹಾಗೂ ಚೀನಾ ಮೂಲದ ವಸ್ತುಗಳನ್ನು ಯಾರು ಕೂಡ ಬಳಸದಿರುವ ಬಗ್ಗೆ ಜನಜಾಗೃತಿಯಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಕ್ರಾಂತಿ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಮುಧೋಳ್, ತಾಲೂಕು ಅಧ್ಯಕ್ಷ ರಾಮು ದೊಣ್ಣಿ, ಉಪಾಧ್ಯಕ್ಷ ಮಹಾಂತೇಶ್ ಬಳ್ಳಾರಿ, ಮಂಜುನಾಥ್ ಇಟಗಿ, ಶಿವು ನಾಡಗೌಡ್ರ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಸಂವಿಧಾನದ ಸಮಗ್ರತೆ ಎತ್ತಿ ಹಿಡಿಯೋಣ: ಶಾಸಕ ಆರ್.‌ಬಸನಗೌಡ ತುರವಿಹಾಳ

ವರದಿ:ವಿಠ್ಠಲ ಕೇಳುತ್ ಮಸ್ಕಿ: ಜಾತ್ಯತೀತ, ಸಮಾನತೆಯ ಸಮಾಜ ನಿರ್ಮಾಣ ಗಣರಾಜ್ಯದ ಆಶಯವಾಗಿದ್ದು, ಇದನ್ನು ಸಕಾರಗೊಳಿಸುವ ಜವಬ್ದಾರಿ…

ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಬೇಡಿಕೆ ಪೆಟ್ಟಿಗೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.

ಎಪಿಎಂಸಿ ಕಾಯ್ದೆ ಬದಲಾವಣೆ ಕಳ್ಳ ಸಂತೆಗೆ ಅನುಕೂಲ: ಶಾಸಕ ಎಚ್.ಕೆ.ಪಾಟೀಲ್

ಈಗಾಗಲೇ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಇದಕ್ಕೆ ವಿರೋಧ ಪಕ್ಷ ಹಾಗೂ ರೈತಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಉಸಿರಾಟ ತೊಂದರೆಯಿಂದ ನಟ ಚಿರಂಜೀವಿ ಸರ್ಜಾ ಸಾವು..!

ನಟ ಚಿರಂಜೀವಿ ಸರ್ಜಾ ಉಸಿರಾಟದ ತೊಂದರೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದರು.