ಹೈದರಾಬಾದ್ : ಇರುವ ಒಬ್ಬನೇ ಮಗನನ್ನು ಕಳೆದುಕೊಂಡಿರುವುದಕ್ಕೆ ನಮಗೆ ತುಂಬಾ ದುಃಖವಾಗುತ್ತಿದೆ. ಆದರೆ ನನ್ನ ಮಗ ದೇಶಕ್ಕಾಗಿ ತನ್ನ ಪ್ರಾಣಾರ್ಪಣೆ ಮಾಡಿದ್ದಕ್ಕೆ ಹೆಮ್ಮೆ ಇದೆ ಎಂದು ಗಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಬಲಿಯಾದ ಕರ್ನಲ್ ಸಂತೋಷ್ ಬಾಬಿ ಪೋಷಕರು ಹೇಳಿದ್ದಾರೆ.
ಭಾನುವಾರವಷ್ಟೇ ನನ್ನ ಜೊತೆಗೆ ಫೋನ್ ನಲ್ಲಿ ಮಾತನಾಡಿದ್ದ. ಗಡಿ ವಿವಾದ ಕುರಿತು ಮಾಧ್ಯಮದಲ್ಲಿ ಬರುವುದಕ್ಕೂ ವಾಸ್ತವಕ್ಕೂ ವ್ಯತ್ಯಾಸವಿದೆ ಎಂದಿದ್ದ. ಹೈದರಾಬಾದ್’ಗೆ ಆತ ವರ್ಗವಾಗಿದ್ದ. ಆದರೆ, ಲಾಕ್’ಡೌನ್ ಕಾರಣ ವರ್ಗ ತಡವಾಯಿತು. ಮುಂದಿನ ತಿಂಗಳು ಬರುವುದಾಗಿ ಹೇಳಿದ್ದೆ ಎಂದು ಕಣ್ಣೀರಿಟ್ಟಿದ್ದಾರೆ.
ಯೋಧನ ತಂದೆ ಮಾತನಾಡಿ, ನಾನು ಯೋಧ ಆಗಬೇಕೆಂದುಕೊಂಡಿದ್ದೆ. ಆದರೆ, ಆಗಲಿಲ್ಲ. ನಮ್ಮಮಗ ಸೇನೆ ಸೇರುವ ತನ್ನ ಕನಸು ಈಡೇರಿಸಿಕೊಂಡಿದ್ದ. ಆತ ಯಾವಾಗಲೂ ಚಿನ್ನದ ಪದಕ ಗೆಲ್ಲುತ್ತಿದ್ದ. ತನಗೆ ಏನಾದರೂ ಆದರೆ, ಅದನ್ನು ಅರಗಿಸಿಕೊಳ್ಳುವ ಶಕ್ತಿ ತಂದುಕೊಳ್ಳಿ ಎಂದು ಮಗ ಹೇಳುತ್ತಿದ್ದ ಎಂದು ಕಣ್ಣೀರು ಸುರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಗದಗ: ಮದುಮೇಹ ಮತ್ತು ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ 44 ವರ್ಷದ ಲಕ್ಕುಂಡಿ ಗ್ರಾಮದ ಪುರುಷ ಗದಗ…

ರಾಜ್ಯದಲ್ಲಿಂದು 1272 ಕೊರೊನಾ ಪಾಸಿಟಿವ್! : ಒಟ್ಟು ಸೋಂಕಿತರ ಸಂಖ್ಯೆ 16514ಕ್ಕೆ ಏರಿಕೆ!

ರಾಜ್ಯದಲ್ಲಿಂದು 1272 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 16514 ಕ್ಕೆ ಏರಿಕೆಯಾದಂತಾಗಿದೆ.

ಕೊರೋನಾ ಸೊಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಫಿ

ಕೊರೋನಾ ಸೋಂಕಿಗೆ ಯಾವುದೇ ಔಷಧಿ ಕಂಡು ಹಿಡಿಯಲಾಗಿಲ್ಲ. ಆದರೆ ರಾಜ್ಯದಲ್ಲಿ ಈ ಸೋಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಫಿ ಚಿಕಿತ್ಸೆಗೆ ರಾಜ್ಯದ ವೈದ್ಯರು ಮುಂದಾಗಿದ್ದು ಇಬ್ಬರು ಪ್ಲಾಸ್ಮಾ ದಾನ ಮಾಡುವ ಮೂಲಕ ಇತರರಿಗೂ ಪ್ರೇರಣೆಯಾಗಿದ್ದಾರೆ.

ಆಹಾರ ಸಾಮಾಗ್ರಿಗಾಗಿ ಶೀಲ್ ಡೌನ್ ಪ್ರದೇಶದ ಜನರ ಧರಣಿ

ಹಾವೇರಿ: ಆಹಾರ ಸಾಮಗ್ರಿ ನೀಡುತ್ತಿಲ್ಲವೆಂದು ಸೀಲ್ ಡೌನ್ ಪ್ರದೇಶ ಜನರು ಧರಣಿ ನಡೆಸಿದ ಘಟನೆ ಹಾವೇರಿ…