ಹೈದರಾಬಾದ್ : ಇರುವ ಒಬ್ಬನೇ ಮಗನನ್ನು ಕಳೆದುಕೊಂಡಿರುವುದಕ್ಕೆ ನಮಗೆ ತುಂಬಾ ದುಃಖವಾಗುತ್ತಿದೆ. ಆದರೆ ನನ್ನ ಮಗ ದೇಶಕ್ಕಾಗಿ ತನ್ನ ಪ್ರಾಣಾರ್ಪಣೆ ಮಾಡಿದ್ದಕ್ಕೆ ಹೆಮ್ಮೆ ಇದೆ ಎಂದು ಗಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಬಲಿಯಾದ ಕರ್ನಲ್ ಸಂತೋಷ್ ಬಾಬಿ ಪೋಷಕರು ಹೇಳಿದ್ದಾರೆ.
ಭಾನುವಾರವಷ್ಟೇ ನನ್ನ ಜೊತೆಗೆ ಫೋನ್ ನಲ್ಲಿ ಮಾತನಾಡಿದ್ದ. ಗಡಿ ವಿವಾದ ಕುರಿತು ಮಾಧ್ಯಮದಲ್ಲಿ ಬರುವುದಕ್ಕೂ ವಾಸ್ತವಕ್ಕೂ ವ್ಯತ್ಯಾಸವಿದೆ ಎಂದಿದ್ದ. ಹೈದರಾಬಾದ್’ಗೆ ಆತ ವರ್ಗವಾಗಿದ್ದ. ಆದರೆ, ಲಾಕ್’ಡೌನ್ ಕಾರಣ ವರ್ಗ ತಡವಾಯಿತು. ಮುಂದಿನ ತಿಂಗಳು ಬರುವುದಾಗಿ ಹೇಳಿದ್ದೆ ಎಂದು ಕಣ್ಣೀರಿಟ್ಟಿದ್ದಾರೆ.
ಯೋಧನ ತಂದೆ ಮಾತನಾಡಿ, ನಾನು ಯೋಧ ಆಗಬೇಕೆಂದುಕೊಂಡಿದ್ದೆ. ಆದರೆ, ಆಗಲಿಲ್ಲ. ನಮ್ಮಮಗ ಸೇನೆ ಸೇರುವ ತನ್ನ ಕನಸು ಈಡೇರಿಸಿಕೊಂಡಿದ್ದ. ಆತ ಯಾವಾಗಲೂ ಚಿನ್ನದ ಪದಕ ಗೆಲ್ಲುತ್ತಿದ್ದ. ತನಗೆ ಏನಾದರೂ ಆದರೆ, ಅದನ್ನು ಅರಗಿಸಿಕೊಳ್ಳುವ ಶಕ್ತಿ ತಂದುಕೊಳ್ಳಿ ಎಂದು ಮಗ ಹೇಳುತ್ತಿದ್ದ ಎಂದು ಕಣ್ಣೀರು ಸುರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 918 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11923…

ಜಾನಪದ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ ಸಾಹಿತ್ಯ -ಡಾ.ಎಸ್ ಬಾಲಾಜಿ

ಗದಗ: ವಿಶ್ವವಿದ್ಯಾಲಯಗಳು ಜಾನಪದಕ್ಕೆ ಸಂಬಂಧಿಸಿದ ಕ್ಷೇತ್ರಕಾರ್ಯ ಹಾಗೂ ದಾಖಲೀಕರಣದ ಕಾರ್ಯಗಳನ್ನು ನಿಲ್ಲಿಸಿರುವುದು ವಿಷಾದನೀಯ ಎಂದು ರಾಜ್ಯಾಧ್ಯಕ್ಷ…

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!

ದೇಶದಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದೆ ಮಹಾಮಾರಿ!

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ ಆತಂಕ ಮಾತ್ರ ಇನ್ನೂ ನಿಂತಿಲ್ಲ.