ಹೊಸದೆಹಲಿ: ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ.

ಲಡಾಖ್ ಕೇಂದ್ರಾಡಳಿತ ಪ್ರದೇಶದ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಅವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಭಾರತ – ಚೀನಾ ಗಡಿ ಪ್ರದೇಶದಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಜೂ. 19ರ ಸಂಜೆ 5ಕ್ಕೆ ಪ್ರಧಾನಿ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.

ಈ ಸಭೆಯಲ್ಲಿ ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಈ ಸಭೆಯು ಆನ್‌ಲೈನ್‌ (ವರ್ಚುವಲ್‌) ಮೂಲಕ ನಡೆಯಲಿದೆ ಎಂದು ಕಾರ್ಯಾಲಯ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಶಿಘ್ರ ಆರಂಭವಾಗಲಿವೆ ದೇವಸ್ಥಾನಗಳು?

ಮುಂದಿನ ವಾರದಿಂದ ಭಕ್ತರಿಗೆ ದೇವರು ದರ್ಶನ ಕರುಣಿಸುವ ಸಾಧ್ಯತೆ ಇದೆ. ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗುತ್ತಿದ್ದು ತೀರ್ಥ, ಪ್ರಸಾದಗಳಿಗೆ ಬ್ರೇಕ್ ಬೀಳುವ ಸಾದ್ಯತೆ ಇದೆ.

ಲಾಕ್ ಡೌನ್ : ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್ ಡೌನ್ ನಿಂದಾಗಿ ಬಡವರ ತೊಂದರೆ ನೀಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ.

ಸೇವಾ ಸಿಂಧುಗಾಗಿ ಸರತಿಯಲ್ಲಿ ಚಪ್ಪಲಿ ಇಟ್ಟು ಕಾದು ಕುಳಿತ ಕಾರ್ಮಿಕರು

ಬಿಸಿಲಿನ ತಾಪ ಹೆಚ್ಚಿದ ಹಿನ್ನೆಲೆಯಲ್ಲಿ ಜನರು ಸಾಲಿನಲ್ಲಿ ನಿಲ್ಲಲಾಗದೆ ತಮ್ಮ ಚಪ್ಪಲಿಗಳನ್ನು ಗುರುತಿಗಾಗಿ ಇಡುತ್ತಿರುವುದು ಹಾಗೂ ಭಾಷಾ ಸಮಸ್ಯೆ ಯಿಂದ ಸೇವಾ ಸಿಂಧು ಅರ್ಜಿ ಸಲ್ಲಿಸಲು ಕಾರ್ಮಿಕರು ಸುಸ್ತಾಗುತ್ತಿದ್ದಾರೆ.

800 ಕಿ.ಮೀ ದೂರ ತೆರಳಿ ದೂರು ದಾಖಲಿಸಿದ ಅತ್ಯಾಚಾರ ಸಂತ್ರಸ್ತೆ!

ಅತ್ಯಾಚಾರಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 800 ಕಿ.ಮೀ ಪ್ರಯಾಣಿಸಿ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.