ದೆಹಲಿ/ಬೆಂಗಳೂರು: ಜೂ. 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಕೊರೋನಾ ಪಿಡುಗಿನ ಕಾರಣ ಸಮಯದಲ್ಲಿ ಪರೀಕ್ಷೆ ನಡೆಸುವುದು ಬೇಡ ಎಂದು ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ದೇಶಾದ್ಯಂತ ಕೊರೊನಾ ಹರಡುತ್ತಿರುವಂತೆಯೇ ರಾಜ್ಯದಲ್ಲಿ ಕೂಡಾ ವ್ಯಾಪಕವಾಗಿತ್ತು. ಈ ವಿಷಯವನ್ನು ಉಲ್ಲೇಖಿಸಿದ್ದ ಅವರು, ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದು ಬೇಡ ಎಂದು ವಾದಿಸಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿದೆ. ಈ ಮೂಲಕ ರಾಜ್ಯ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿದಿದ್ದು, ನಿಗದಿತ ದಿನಾಂಕಗಳಂದೇ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ.
ಶಿಕ್ಷಣ ಇಲಾಖೆ ಜೂನ್ 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ನಿಗದಿಗೊಳಿಸಿದೆ. ನಿಗದಿತ ದಿನಾಂಕಗಳಂದು ಪರೀಕ್ಷೆ ನಡೆಸದಂತೆ ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ. ನಾಗೇಶ್ವರ್ ರಾವ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತ್ತು.
ಹೈಕೋರ್ಟ್ನಲ್ಲಿ ಅರ್ಜಿ ವಜಾಗೊಂಡ ನಂತರ ಕೂಡ ಪಟ್ಟು ಬಿಡದ ರಾಜಶ್ರೀ ನಾಗರಾಜ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕಡೆಗೆ ಸುಪ್ರೀಂ ಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿದೆ.

Leave a Reply

Your email address will not be published. Required fields are marked *

You May Also Like

ರೈತರನ್ನು ರಾಸ್ಕಲ್ ಎಂದ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಮಾನ ಉಳಿಸಿಕೊಳ್ಳಿ: ಸಿದ್ದರಾಮಯ್ಯ

ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಅವರು ತಕ್ಷಣ ಆ ರೈತ ಮಹಿಳೆಯ ಕ್ಷಮೆ‌ ಯಾಚಿಸುವಂತೆ‌‌ ಮಾಡಿ, ಅವರನ್ನು‌ ಸಂಪುಟದಿಂದ ಕೈ ಬಿಟ್ಟು‌‌ ಸರ್ಕಾರದ ಮಾನ‌ ಉಳಿಸಬೇಕು

ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಿ: ನೆಲಗುಡ್ಡದ

ಉತ್ತರಪ್ರಭ ಸುದ್ದಿಶಿರಹಟ್ಟಿ : ರೈತರ ಉತ್ಪನ್ನುಗಳಿಗೆ ಲಾಭದಾಯಕ ಬೆಲೆ ಘೋಷಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ…

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಬೆಳಗಾವಿ : ರಾಯಬಾಗ ರೈಲ್ವೆ ನಿಲ್ದಾಣದ ಬಳಿ ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವಿಕ್ಯಾಂಡ ಕರ್ಪ್ಯೂಗೆ ರೋಣದಲ್ಲಿ ಬೆಂಬಲ

ನಗರಾದ್ಯಂತ ವಿಕೆಂಡ್ ಕರ್ಪ್ಯೂಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಯಾರೊಬ್ಬರೂ ಅನಗತ್ಯವಾಗಿ ಹೊರಗಡೆ ಬರದೇ ಮನೆಯಲ್ಲಿಯೇ ಕುಳಿತಿರುವುದು ಕಂಡು ಬಂದಿತು.