ದೆಹಲಿ/ಬೆಂಗಳೂರು: ಜೂ. 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಕೊರೋನಾ ಪಿಡುಗಿನ ಕಾರಣ ಸಮಯದಲ್ಲಿ ಪರೀಕ್ಷೆ ನಡೆಸುವುದು ಬೇಡ ಎಂದು ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ದೇಶಾದ್ಯಂತ ಕೊರೊನಾ ಹರಡುತ್ತಿರುವಂತೆಯೇ ರಾಜ್ಯದಲ್ಲಿ ಕೂಡಾ ವ್ಯಾಪಕವಾಗಿತ್ತು. ಈ ವಿಷಯವನ್ನು ಉಲ್ಲೇಖಿಸಿದ್ದ ಅವರು, ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದು ಬೇಡ ಎಂದು ವಾದಿಸಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿದೆ. ಈ ಮೂಲಕ ರಾಜ್ಯ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿದಿದ್ದು, ನಿಗದಿತ ದಿನಾಂಕಗಳಂದೇ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ.
ಶಿಕ್ಷಣ ಇಲಾಖೆ ಜೂನ್ 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ನಿಗದಿಗೊಳಿಸಿದೆ. ನಿಗದಿತ ದಿನಾಂಕಗಳಂದು ಪರೀಕ್ಷೆ ನಡೆಸದಂತೆ ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ. ನಾಗೇಶ್ವರ್ ರಾವ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತ್ತು.
ಹೈಕೋರ್ಟ್ನಲ್ಲಿ ಅರ್ಜಿ ವಜಾಗೊಂಡ ನಂತರ ಕೂಡ ಪಟ್ಟು ಬಿಡದ ರಾಜಶ್ರೀ ನಾಗರಾಜ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕಡೆಗೆ ಸುಪ್ರೀಂ ಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿದೆ.

Leave a Reply

Your email address will not be published. Required fields are marked *

You May Also Like

ಕಳ್ಳತನ ಪ್ರಕರಣ ಇಬ್ಬರ ಬಂಧನ.

ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಕಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ, ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 5.18 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ

ಅಬ್ಯರ್ಥಿ ಗೆದ್ದಿದ್ದಾರೆ ಆದರೆ ಗೆಲುವು ಸಂಭ್ರಮಿಸಲು ಅವರೆ ಇಲ್ಲ

ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿ ಇನ್ನೇನು ಫಲಿತಾಂಶ ಹೊರಬರುವುದು ಬಾಕಿ ಇತ್ತು. ಆದರೆ ಫಲಿತಾಂಶ ನಾಯಿತು ಎಂದು ನೋಡಲು, ಕೇಳಲು ನಿಂತ ವ್ಯಕ್ತಿಯೇ ಇಲ್ಲ.

ನರಗುಂದ: ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು

ನರಗುಂದ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ನರಗುಂದ…

Актуальное работающее зеркало БК Леон Рабочее зеркало официального сайта букмекерской конторы Леон

Актуальное работающее зеркало БК Леон Рабочее зеркало официального сайта букмекерской конторы Леон…