ದೆಹಲಿ/ಬೆಂಗಳೂರು: ಜೂ. 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಿಗದಿಯಂತೆ ನಡೆಯಲಿದೆ. ಕೊರೋನಾ ಪಿಡುಗಿನ ಕಾರಣ ಸಮಯದಲ್ಲಿ ಪರೀಕ್ಷೆ ನಡೆಸುವುದು ಬೇಡ ಎಂದು ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ದೇಶಾದ್ಯಂತ ಕೊರೊನಾ ಹರಡುತ್ತಿರುವಂತೆಯೇ ರಾಜ್ಯದಲ್ಲಿ ಕೂಡಾ ವ್ಯಾಪಕವಾಗಿತ್ತು. ಈ ವಿಷಯವನ್ನು ಉಲ್ಲೇಖಿಸಿದ್ದ ಅವರು, ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದು ಬೇಡ ಎಂದು ವಾದಿಸಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿದೆ. ಈ ಮೂಲಕ ರಾಜ್ಯ ಹೈಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನೇ ಎತ್ತಿ ಹಿಡಿದಿದ್ದು, ನಿಗದಿತ ದಿನಾಂಕಗಳಂದೇ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ.
ಶಿಕ್ಷಣ ಇಲಾಖೆ ಜೂನ್ 25 ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ SSLC ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ನಿಗದಿಗೊಳಿಸಿದೆ. ನಿಗದಿತ ದಿನಾಂಕಗಳಂದು ಪರೀಕ್ಷೆ ನಡೆಸದಂತೆ ಖಾಸಗಿ ಶಿಕ್ಷಣ ಸಂಸ್ಥೆ ಮುಖ್ಯಸ್ಥೆ ರಾಜಶ್ರೀ ನಾಗರಾಜ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾ. ನಾಗೇಶ್ವರ್ ರಾವ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿತ್ತು.
ಹೈಕೋರ್ಟ್ನಲ್ಲಿ ಅರ್ಜಿ ವಜಾಗೊಂಡ ನಂತರ ಕೂಡ ಪಟ್ಟು ಬಿಡದ ರಾಜಶ್ರೀ ನಾಗರಾಜ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕಡೆಗೆ ಸುಪ್ರೀಂ ಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿದೆ.

Leave a Reply

Your email address will not be published. Required fields are marked *

You May Also Like

ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ಕೊರೊನಾ ಹಬ್ಬಿದ್ದು – ಕಾಂಗ್ರೆಸ್

ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ರಾಜ್ಯದಲ್ಲಿ ಕೊರೊನಾ ಹಬ್ಬಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ತಾಲೂಕಾಸ್ಪತ್ರೆಗೆ ಜಿಲ್ಲಾಧಿಕಾರಿ ಸುಂದರೇಶ ಬಾಬು ಭೇಟಿ

ಜಿಲ್ಲಾ‌ ವರಿಷ್ಠಾಧಿಕಾರಿ ಯತೀಶ್ ಎನ್, ತಹಸೀಲ್ದಾರ್ ಜೆ.ಬಿ.ಜಕ್ಕನಗೌಡ, ಹೊಳೆ ಆಲೂರ ಕಂದಾಯ ನಿರೀಕ್ಷಕ ರವಿ ಬಾರಕೇರ, ಸಿಡಿಪಿಒ ಬಿ.ಎಂ.ಮಾಳೇಕೊಪ್ಪ, ಭೀಮಸೇನ್ ಜೋಶಿ ಆಸ್ಪತ್ರೆಯ ವೈದ್ಯಾಧಿಕಾರಿ ಎಚ್.ಎಲ್.ಗಿರಡ್ಡಿ, ಸಿಪಿಐ ಸುನೀಲ್ ಸವದಿ, ಪಿಎಸ್ ಐ ವಿನೋದ ಪೂಜಾರಿ ಮುಂತಾದವರಿದ್ದರು.

ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ ಅಂತಿಮವಾಗಿ ಚುನಾವಣಾ ಕಣದಲ್ಲುಳಿದ ಅಭ್ಯರ್ಥಿಗಳ ಹಾಗೂ ಚಿಹ್ನೆ ಹಂಚಿಕೆ ವಾರ್ಡವಾರು ವಿವರ

ಗದಗ :ಗದಗ-ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆಗೆ ಅಂತಿಮವಾಗಿ  ಕಣದಲ್ಲಿ ಉಳಿದ ಅಭ್ಯರ್ಥಿಗಳ ವಿವರ ಇಂತಿದೆ: ವಾರ್ಡ…

ಸಿದ್ದರಾಮಯ್ಯ, ಗುಂಡೂರಾವ್ ವಿರುದ್ಧ ಗುಡುಗಿದ ನಳೀನ್ ಕುಮಾರ್!

ಮಂಗಳೂರು : ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರ ಪಾಡು ನಾಯಿಪಾಡಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.