ನವದೆಹಲಿ: ಭಾರತ – ಚೀನಾ ಗಡಿಯಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಅವರು, ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

ಕೊರೊನಾ ವೈರಸ್ ನಿರ್ವಹಣೆ ವಿಚಾರವಾಗಿ ನಡೆಯುತ್ತಿರುವ ಎಲ್ಲ ರಾಜ್ಯಗಳ ಸಿಎಂಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಿಎಂ, ಮೊದಲು ಹುತಾತ್ಮ ಸೈನಿಕರ ಆತ್ಮಕ್ಕೆ 2 ನಿಮಿಷ ಶಾಂತಿ ಕೋರಿದರು. ಬಳಿಕ ಸೈನಿಕರ ಬಲಿದಾನದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಭಾರತವು ಎಂದಿಗೂ ಶಾಂತಿ ಬಯಸುತ್ತದೆ. ಆದರೆ, ಪ್ರಚೋದಿಸಿದಾಗ ಯಾವುದೇ ರೀತಿಯ ಪರಿಸ್ಥಿತಿ ಇರಲಿ ಭಾರತ ಅದಕ್ಕೆ ಸೂಕ್ತ ತಿರುಗೇಟು ನೀಡಲು ಸಮರ್ಥವಾಗಿದೆ ಎಂದು ಹೇಳಿದ್ದಾರೆ.

ಈ ಮೂಲಕ ನಾನು ದೇಶದ ಪ್ರಜೆಗಳಿಗೆ ಭರವಸೆ ನೀಡುತ್ತೇನೆ. ಅದೇನೆಂದರೆ ಸೈನಿಕರ ಬಲಿದಾನ ವ್ಯರ್ಥವಾಗದು. ನಮಗೆ, ದೇಶದ ಏಕತೆ ಮತ್ತು ಸಾರ್ವಭೌಮತ್ವ ಅತ್ಯಂತ ಮುಖ್ಯವಾದದ್ದು. ಅದಕ್ಕೆ ಪ್ರಚೋದಿಸಿದರೆ ಅದಕ್ಕೆ ತಕ್ಕ ಶಾಸ್ತಿ ಖಂಡಿತ ಮಾಡುತ್ತೇವೆ ಎಂದು ಗುಡುಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಮದುವೆಯ ಸಂಭ್ರಮ ಕಸಿದುಕೊಂಡ ಕೊರೊನಾ!

ಭೋಪಾಲ್: ಮದುವೆ ಸಂಭ್ರಮದಲ್ಲಿ ಹಾಜರಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ನವ ದಂಪತಿ ಸೇರಿದಂತೆ…

ಹಸಿರು ವಲಯದಲ್ಲಿದ್ದ ಚಾಮರಾಜನಗರದಲ್ಲಿ ಮನೆ ಮಾಡಿದ ಆತಂಕ!

ಇಲ್ಲಿಯವರೆಗೂ ಹಸಿರು ವಲಯದಲ್ಲಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ಕೊರೊನಾ ಸೋಂಕಿತ ಪೊಲೀಸ್ ಪೇದೆ ಚಾಮರಾಜನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 22 ಜನರನ್ನು ಜನರನ್ನು ಕ್ವಾರಂಟೈನ್ ಮಾಡಲಾಗಿದೆ.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಸಿಕ್ಕ ಭರ್ಜರಿ ಗಿಫ್ಟ್!

ನವದೆಹಲಿ : ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಮತ್ತೊಂದು ಜವಾಬ್ದಾರಿ ನೀಡಿದೆ.