ನವದೆಹಲಿ: ಭಾರತ – ಚೀನಾ ಗಡಿಯಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಅವರು, ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

ಕೊರೊನಾ ವೈರಸ್ ನಿರ್ವಹಣೆ ವಿಚಾರವಾಗಿ ನಡೆಯುತ್ತಿರುವ ಎಲ್ಲ ರಾಜ್ಯಗಳ ಸಿಎಂಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಿಎಂ, ಮೊದಲು ಹುತಾತ್ಮ ಸೈನಿಕರ ಆತ್ಮಕ್ಕೆ 2 ನಿಮಿಷ ಶಾಂತಿ ಕೋರಿದರು. ಬಳಿಕ ಸೈನಿಕರ ಬಲಿದಾನದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಭಾರತವು ಎಂದಿಗೂ ಶಾಂತಿ ಬಯಸುತ್ತದೆ. ಆದರೆ, ಪ್ರಚೋದಿಸಿದಾಗ ಯಾವುದೇ ರೀತಿಯ ಪರಿಸ್ಥಿತಿ ಇರಲಿ ಭಾರತ ಅದಕ್ಕೆ ಸೂಕ್ತ ತಿರುಗೇಟು ನೀಡಲು ಸಮರ್ಥವಾಗಿದೆ ಎಂದು ಹೇಳಿದ್ದಾರೆ.

ಈ ಮೂಲಕ ನಾನು ದೇಶದ ಪ್ರಜೆಗಳಿಗೆ ಭರವಸೆ ನೀಡುತ್ತೇನೆ. ಅದೇನೆಂದರೆ ಸೈನಿಕರ ಬಲಿದಾನ ವ್ಯರ್ಥವಾಗದು. ನಮಗೆ, ದೇಶದ ಏಕತೆ ಮತ್ತು ಸಾರ್ವಭೌಮತ್ವ ಅತ್ಯಂತ ಮುಖ್ಯವಾದದ್ದು. ಅದಕ್ಕೆ ಪ್ರಚೋದಿಸಿದರೆ ಅದಕ್ಕೆ ತಕ್ಕ ಶಾಸ್ತಿ ಖಂಡಿತ ಮಾಡುತ್ತೇವೆ ಎಂದು ಗುಡುಗಿದ್ದಾರೆ.

Leave a Reply

Your email address will not be published. Required fields are marked *

You May Also Like

ದಲಿತ ಯುವಕನನ್ನು ಸುಟ್ಟು ಹಾಕಿದ ಮಾಲೀಕ!

ಅಲ್ವಾರ್ : ದಲಿತ ಯುವಕನನ್ನು ಉದ್ಯೋಗದಾತನೇ ಸುಟ್ಟು ಹಾಕಿರುವ ಅಮಾನವೀಯ ಘಟನೆ ರಾಜಸ್ಥಾನದ ಅಲ್ವಾರ್ ನಲ್ಲಿ ನಡೆದಿದೆ.

ಗದಗ ಜಿಲ್ಲೆಯಲ್ಲಿಂದು 4 ಕೊರೊನಾ ಪಾಸಿಟಿವ್! : 200 ಗಡಿ ಸಮೀಪಿಸುತ್ತಿದೆ ಸೋಂಕಿತರ ಸಂಖ್ಯೆ

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.

ಉಪ ಚುನಾವಣೆ – ಹಲವೆಡೆ ಮುನ್ನಡೆ ಸಾಧಿಸುತ್ತಿರುವ ಬಿಜೆಪಿ!

ನವದೆಹಲಿ : ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಬೆಳಿಗ್ಗೆ 4ಕ್ಕೆ ಕಾರ್ ತೊಳೆಯುವ ಕೆಲಸ: 12ನೆ ತರಗತಿಯಲ್ಲಿ ಶೇ.91.7 ಸ್ಕೋರ್ ಸಾಹಸ

ಅದು ಸ್ಲಮ್ಮೊಂದರಲ್ಲಿನ ಮನೆ. ಹೆಸರಿಗಷ್ಟೇ ಮನೆ. ಇರುವುದೇ ಎರಡು ಕೋಣೆ ಮಾತ್ರ. ಇದರಲ್ಲಿ ಒಂಭತ್ತು ಜನರ ಕುಟುಂಬ ವಾಸಿಸುತ್ತಿದೆ. ಮನೆಯ ಹಿರಿಯನಿಗೆ ಹೃದಯ ಕಾಯಿಲೆ. ಉಳಿದ ಸಹೋದರರಿಗೆ ನಿಶ್ಚಿತ ಉದ್ಯೋಗವಿಲ್ಲ. ಅಲ್ಲಿ ಹಸಿವು ಖಾಯಂ ಅತಿಥಿಯಾಗಿರುವಾಗ ವಿದ್ಯಾಭ್ಯಾಸದ ಖರ್ಚು ನಿಭಾಯಿಸುವುದೇ ಅಸಾಧ್ಯ.