ನವದೆಹಲಿ: ಭಾರತ – ಚೀನಾ ಗಡಿಯಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಅವರು, ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ.

ಕೊರೊನಾ ವೈರಸ್ ನಿರ್ವಹಣೆ ವಿಚಾರವಾಗಿ ನಡೆಯುತ್ತಿರುವ ಎಲ್ಲ ರಾಜ್ಯಗಳ ಸಿಎಂಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪಿಎಂ, ಮೊದಲು ಹುತಾತ್ಮ ಸೈನಿಕರ ಆತ್ಮಕ್ಕೆ 2 ನಿಮಿಷ ಶಾಂತಿ ಕೋರಿದರು. ಬಳಿಕ ಸೈನಿಕರ ಬಲಿದಾನದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಭಾರತವು ಎಂದಿಗೂ ಶಾಂತಿ ಬಯಸುತ್ತದೆ. ಆದರೆ, ಪ್ರಚೋದಿಸಿದಾಗ ಯಾವುದೇ ರೀತಿಯ ಪರಿಸ್ಥಿತಿ ಇರಲಿ ಭಾರತ ಅದಕ್ಕೆ ಸೂಕ್ತ ತಿರುಗೇಟು ನೀಡಲು ಸಮರ್ಥವಾಗಿದೆ ಎಂದು ಹೇಳಿದ್ದಾರೆ.

ಈ ಮೂಲಕ ನಾನು ದೇಶದ ಪ್ರಜೆಗಳಿಗೆ ಭರವಸೆ ನೀಡುತ್ತೇನೆ. ಅದೇನೆಂದರೆ ಸೈನಿಕರ ಬಲಿದಾನ ವ್ಯರ್ಥವಾಗದು. ನಮಗೆ, ದೇಶದ ಏಕತೆ ಮತ್ತು ಸಾರ್ವಭೌಮತ್ವ ಅತ್ಯಂತ ಮುಖ್ಯವಾದದ್ದು. ಅದಕ್ಕೆ ಪ್ರಚೋದಿಸಿದರೆ ಅದಕ್ಕೆ ತಕ್ಕ ಶಾಸ್ತಿ ಖಂಡಿತ ಮಾಡುತ್ತೇವೆ ಎಂದು ಗುಡುಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಾಮಾಜಿಕ, ಆರ್ಥಿಕ, ಶೈಕ್ಷಣಿಕೆ ಸಮೀಕ್ಷೆ ವರದಿ ಜಾರಿಗೊಳಿಸಿ: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯದ ಪರವಾಗಿದ್ದೇವೆ ಎಂದು ಬಾಯಿಮಾತಿನಲ್ಲಿ ಹೇಳಿದರೆ ಸಾಲದು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರನ್ನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ನಟಿಗೆ ಸಹಾಯ ಮಾಡಿದ ಮೇಕಪ್ ಮ್ಯಾನ್!

ಕಿರುತೆರೆ ನಟಿಯೊಬ್ಬರು ಆರ್ಥಿಕ ಕಷ್ಟಕ್ಕೆ ಸಿಲುಕಿದ್ದಾಗ ಮೇಕಪ್ ಮ್ಯಾನ್ ಸಹಾಯ ಮಾಡುವುದಾಗಿ ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ವಿಧೆಯಕ ಮಂಡನೆ

ಬೆಳಗಾವಿ: ಬೆಳಗಾವಿಯ ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ…

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…