ಬೆಂಗಳೂರು: ಇತ್ತಿಚಿಗಷ್ಟೆ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ  ಅಧಿಕಾರ ಅವಧಿ ಮುಗಿದಿದ್ದು.ಕೊರೊನಾ ಕಾರಣದಿಂದ ಗ್ರಾಮ ಪಂಚಾಯತಿಗಳ ಸಾರ್ವತ್ರಿಕ  ಚುನಾವಣೆಗಳು ನಡೆಯದ ಕಾರಣ, 5 ವರ್ಷ ಅವಧಿಯನ್ನು ಮುಗಿಸಿದ ನಂತರ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,1993ರ ಪ್ರಕರಣ 8(1)ಬಿ(2)ರಡಿ ಕಲಂ 321ರ ಅಡಿಯಲ್ಲಿ ಆಡಳಿತಾಧಿಕಾರಿಗಳನ್ನು  ನೇಮಿಸಲು ರಾಜ್ಯದ  ಎಲ್ಲ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ  ಉಮಾ ಮಹಾದೇವನ್ ಆದೇಶ ಹೊರಡಿಸಿದ್ದಾರೆ.

ಆದೇಶ ಪ್ರತಿ
Leave a Reply

Your email address will not be published. Required fields are marked *

You May Also Like

ಪತ್ರ ಚಳುವಳಿಗೆ ಕರೆ ನೀಡಿದ ಭೋವಿ ಶ್ರೀಗಳು

ಚಿತ್ರದುರ್ಗ: ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರ ಈ ಸಮುದಾಯಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ರಾಜ್ಯ ಸರ್ಕಾರದ ವಿವರಣೆ ಹೀಗಿದೆ: “ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವ ವಿಚಾರವಾಗಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ‘ಸೂಕ್ತ ಪ್ರಾಧಿಕಾರದ (NCSC) ಮುಂದೆ ಹಾಜರಾಗಲು’ ಸೂಚನೆ ನೀಡಿ, ಸರ್ವೋಚ್ಛ ನ್ಯಾಯಾಲಯ ಸದರಿ ಅರ್ಜಿಯನ್ನು 14-2-2020ರಂದು ವಿಲೇವಾರಿ ಮಾಡಿದೆ” ಎಂದು ಹೇಳಲಾಗಿದೆ. ಜೊತೆಗೆ, “ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ, ದೆಹಲಿ, ಇವರ ಅರ್ಜಿಯನ್ನು ಸ್ವೀಕರಿಸಿ, NCSC ಇಂದ, ಮುಖ್ಯ ಕಾರ್ಯದರ್ಶಿ, ಕರ್ನಾಟಕ ಸರ್ಕಾರ, ಬೆಂಗಳೂರು. ಇವರಿಗೆ ಬರೆದ ಪತ್ರ ಸಂಖ್ಯೆ 36/inclusion & exclusion-3/2020/ssw ದಿನಾಂಕ:12-3-2020ರಲ್ಲಿ ಎಲ್ಲಿಯೂ ಕರ್ನಾಟಕ ರಾಜ್ಯದ ಭೋವಿ, ಲಂಬಾಣಿ, ಕೊರಮ ಹಾಗೂ ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಟ್ಟಿರುವ ಬಗ್ಗೆ ತಿಳಿಸಿಲ್ಲ” ಎಂದು ಹೇಳಿದೆ.

ನರೇಗಲ್ಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರಿದ್ದು ಇದರಿಂದ ಬಡ ಹಾಗೂ ಮಧ್ಯಮ ವರ್ಗದವರ ಬದುಕು ಬೀದಿಗೆ ಬರುತ್ತದೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

ಹನುಮನ ದೇವಸ್ಥಾನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ನೆಲಮಂಗಲ : ತಾಲೂಕಿನ ವಿಶ್ವೇಶ್ವರಪುರ ಹತ್ತಿರದ ಆಂಜನೇಯ ದೇಗುಲಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಇದಕ್ಕೆ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಹೊಸೂರ ಗ್ರಾಮದ ಮನೆಗಳ ಅಡಿಪಾಯದಲ್ಲಿ ಉಕ್ಕಿಹರಿಯುತ್ತಿದೆ ಅಂತರ್ಜಲ

ಮುಳಗುಂದ: ಸಮೀಪದ ಹೊಸೂರ ಗ್ರಾಮದ ದೇಶಪಾಂಡೆ ವಾಡೆಯ ಸುತ್ತಮುತ್ತಲಿನ ನೂರಾರು ಮನೆಗಳ ಅಡಿಪಾಯ, ಅಂಗಳದಲ್ಲಿ ಅತಿವೃಷ್ಟಿಯಿಂದ ಅಂತರ್ಜಲ ಹೆಚ್ಚಾಗಿ ನೀರು ಉಕ್ಕಿಹರಿಯುತ್ತಿದೆ.