ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾಲ ಮಾಡಿ ರೂ.67 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣದಡಿ ಬಿಜೆಪಿ ನಾಯಕ ಮೋಹಿತ್ ಕಾಂಬೋಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ರೂ.67 ಕೋಟಿ ಮೊತ್ತದ ಸಾಲ ಮಾಡಿ ವಂಚನೆ ಮಾಡಿರುವ ಆರೋಪದಡಿ ಬಿಜೆಪಿ ನಾಯಕ ಮೋಹಿತ್ ಕಾಂಬೋಜ್ ಅಷ್ಟೇ ಅಲ್ಲದೇ ಈ ಹಿಂದಿನ ಅವ್ಯಾನ್ ಓವರ್ಸೀಸ್ ಪ್ರೈವೆಟ್ ಲಿಮಿಟೆಡ್ ಹಾಗೂ ಕೆಬಿಜೆ ಹೊಟೆಲ್ಸ್ ಗೋವಾ ಸಂಸ್ಥೆಗಳನ್ನೂ ಎಫ್ಐಆರ್ ನಲ್ಲಿ ಹೆಸರಿಸಲಾಗಿದೆ.

ಆದರೆ, ನನ್ನ ಮೇಲಿನ ಆರೋಪ ಶುದ್ಧ ಸುಳ್ಳು ಎಂದು ಮೋಹಿತ್ ಕಾಂಬೋಜ್ ನಿರಾಕರಿಸಿದ್ದಾರೆ. ಸಂಸ್ಥೆಯ ಜೊತೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2018 ರಲ್ಲೇ ಒನ್ ಟೈಮ್ ಸೆಟಲ್ಮೆಂಟ್ ಮಾಡಿಕೊಂಡಿದ್ದು, ಆಗಲೇ ರೂ. 30 ಕೋಟಿ ನೀಡಲಾಗಿದೆ. ಬಾಕಿ ಉಳಿಸಿಕೊಂಡಿಲ್ಲ ಎಂಬ ಪ್ರಮಾಣಪತ್ರ ನೀಡಿದ ಬಳಿಕ ಎರಡು ವರ್ಷಗಳ ನಂತರ ಬ್ಯಾಂಕ್ ಈ ಆರೋಪ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕಾಂಬೋಜ್ ಅವರು ಗ್ಯಾರೆಂಟರ್ ಹಾಗೂ ಹ್ಯಾಂಡ್ ಕ್ರಾಫ್ಟ್ ಚಿನ್ನಾಭರಣಗಳನ್ನು ದುಬೈ, ಸಿಂಗಪೂರ್, ಹಾಂಕ್ ಕಾಂಗ್ ಹಾಗೂ ಇತರ ರಾಷ್ಟ್ರಗಳಿಗೆ ರಫ್ತು ಮಾಡವ ಅವ್ಯಾನ್ ಓವರ್ ಸೀಸ್ ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದರು ಎಂದು ಬ್ಯಾಂಕ್ ಆರೋಪಿಸಿದೆ. ಈ ವಂಚನೆ, ಫೋರ್ಜರಿ, ಕ್ರಿಮಿನಲ್ ಷಡ್ಯಂತ್ರಗಳ ಆರೋಪದ ಆಧಾರದಲ್ಲಿ ಸಿಬಿಐ ಕಾಂಬೋಜ್ ಸೇರಿದಂತೆ ಇತರ ಆರೋಪಿಗಳ ಕಚೇರಿಯ ಪ್ರದೇಶಗಳಲ್ಲಿ ಶೋಧಕಾರ್ಯ ನಡೆಸಿದೆ.

Leave a Reply

Your email address will not be published. Required fields are marked *

You May Also Like

ಹೆಚ್ಚಿದ ಕಾಂಗ್ರೆಸ್ ಆಕಾಂಕ್ಷಿಗಳ ಸಂಖ್ಯೆ: ಮುಂದೂಡಿದ ಅರ್ಜಿ ಸಲ್ಲಿಕೆ

ಉತ್ತರಪ್ರಭಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಮುಂದಿನ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ…

ರಾಜ್ಯದಲ್ಲಿಂದು 299 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 299 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3221ಕ್ಕೆ ಏರಿಕೆಯಾದಂತಾಗಿದೆ.

ಕೊರೋನಾ ಕಾವ್ಯ-4

ಇವತ್ತಿನ ಕೊರೋನಾ ಕಾವ್ಯ ಸರಿಣಿಗೆ ಕವನ ಕಳುಹಿಸಿದವರು ಮಂಗಳಗೌರಿ ಹಿರೇಮಠ, ಮಂಗಳಗೌರಿ ಹಿರೇಮಠ ಇವರು ಗದಗನ ಬಸವೇಶ್ವರ ನಗರದವರು, ಸಾಹಿತ್ತಿಕವಾಗಿ ಅಭಿರುಚಿ ಉಳ್ಳ ಮಂಗಳಗೌರಿ ಅವರು ಸಾಕಷ್ಟು ಕವತೆಗಳನ್ನು ರಚಿಸಿದ್ದಾರೆ. ಊಹಿಸದೇ ಬಂದ ಘಳಿಗೆಯನ್ನು ಕೊರೋನಾದ ಈ ಸಂಕಷ್ಟ ಕಾಲದಲ್ಲಿ ಹದವಾಗಿ ಕಟ್ಟಿಕೊಟ್ಟಿದ್ದಾರೆ.

ಮಹಾಮಾರಿಗೆ ತತ್ತರಿಸಿದ ಮಹಾರಾಷ್ಟ್ರ- ನಿನ್ನೆ ಒಂದೇ ದಿನ ಎಷ್ಟು ಕೇಸ್ ಗಳು ಗೊತ್ತಾ?

ಮುಂಬಯಿ : ಕೊರೊನಾ ಹಾಟ್ ಸ್ಪಾಟ್ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ…