ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಸೆಲೆಬ್ರಿಟಿಗಳ ವಿರುದ್ಧ ವಕೀಲ ಸುಧಿರ್ ಕುಮಾರ್ ಓಜಾ ದೂರು ದಾಖಲಿಸಿದ್ದಾರೆ.

ಇಲ್ಲಿಯ ಮುಜಾಫರ್ಪುರ್ ನ್ಯಾಯಾಲಯದಲ್ಲಿ ದೂರು ದಾಖಲಸಿದ್ದಾರೆ. ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಅಲ್ಲದೇ, ಅವರ ಹಲವು ಸಿನಿಮಾಗಳು ಬಿಡುಗಡೆ ಹೊಂದಿರಲಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದವು. ಹೀಗಾಗಿ ಅವರು ಇಂತಹ ನಿರ್ಧರ ಕೈಗೊಂಡಿದ್ದಾರೆ ಎಂದು ವಕೀಲ ಓಜಾ ಆರೋಪಿಸಿದ್ದಾರೆ.

ಬಾಲಿವುಡ್ ಸಿನಿಮಾ ನಿರ್ದೇಶಕರಾದ ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ನಟ ಸಲ್ಮಾನ್ ಖಾನ್ ಸೇರಿದಂತೆ ಎಂಟು ಜನರ ವಿರುದ್ಧ ಐಪಿಸಿ ಸೆಕ್ಸನ್ 306, 109, 504 ಮತ್ತು 506 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಭಾನುವಾರ ಬೆಳಿಗ್ಗೆ 9.30ಕ್ಕೆ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದರು. ಮಾನಸಿಕ ಖಿನ್ನತೆಗೊಳಗಾಗಿದ್ದರಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೈ ಪೋ ಚೆ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಸುಶಾಂತ್ ಗೆ ಧೋನಿ ಸಿನಿಮಾ ದೊಡ್ಡ ಬ್ರೇಕ್ ನೀಡಿತ್ತು. 10ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಸುಶಾಂತ್ ಅವರನ್ನು ಬಾಲಿವುಡ್ ತಾರತಮ್ಯದಿಂದ ನೋಡಲಾಗುತ್ತಿತ್ತು ಎಂಬ ಸುದ್ದಿ ಹರಿದಾಡಿತ್ತು. ಸದ್ಯ ಈ ಕುರಿತು ಹಲವರು ಹಲವು ವ್ಯಾಖ್ಯಾನಗಳನ್ನು ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಸೂಪರ್ ಸ್ಟಾರ್ ಚಿತ್ರ ತಂಡದ ಗಿಫ್ಟ್ ಏನು ಗೊತ್ತಾ?

ಸೂಪರ್ ಸ್ಟಾರ್ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದ ಚಿತ್ರಕ್ಕೆ ನಟ ಯಶ್ ಸಾಥ್ ನೀಡಿದ್ದಾರೆ. ನಿರಂಜನ್ ಅಭಿನಯದ ಸೂಪರ್ ಸ್ಟಾರ್ ಚಿತ್ರದ ಟೀಸರ್ ಗೆ ರಾಕಿಂಗ್ ಸ್ಟಾರ್ ಧ್ವನಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಸೂಪರ್ ಸ್ಟಾರ್ ಚಿತ್ರದ ಶೀರ್ಷಿಕೆ ಬಿಡುಗಡೆಯಾಗಿತ್ತು. ಈ ಸಮಾರಂಭದಲ್ಲಿ ನಟ ಉಪೇಂದ್ರ ಹಾಗೂ ಪ್ರಿಯಾಂಕ್ ಉಪೇಂದ್ರ ಭಾಗಿಯಾಗಿದ್ದರು.

ಮಹಿಳಾ ಸಚಿವೆ ಕುರಿತು ಹೇಳಿದ ಹೇಳಿಕೆಗೆ ಮಾಜಿ ಸಿಎಂ ಹೇಳಿದ್ದೇನು?

ಭೋಪಾಲ್ : ಬಿಜೆಪಿ ಜನರು, ಮತದಾರರನ್ನು ತಪ್ಪು ದಾರಿಗೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರಿಗೆ ಮಾಜಿ ಸಿಎಂ ಕಮಲ್ ನಾಥ್ ಪತ್ರ ಬರೆದಿದ್ದಾರೆ.

ಮಟಕಾ ದೊರೆ ರತನ್ ಲಾಲ್ ಖತ್ರಿಯ ಓಪನ್ ಟು ಕ್ಲೋಸ್ ಕಥೆ ಇದು…!

ರತನ್ ಲಾಲ್ ಖತ್ರಿ.. ಈ ಹೆಸರು ದೇಶದ ಮಟಕಾ ಪ್ರೇಮಿಗಳಿಗೆ ಖಂಡಿತಾ ಚಿರಪರಿಚಿತವಾಗಿರತ್ತೆ. ಬೇಕಿದ್ದರೆ ನೀವು ದೇಶದ ಗ್ರಾಮದ ಯಾವುದೇ ಅನಕ್ಷರಸ್ಥನಿಗೆ ಕೇಳಿ ನೋಡಿ, ರತನ್ ಲಾಲ್ ಖತ್ರಿ ಎಂದರೆ ಓ!

ಹುಚ್ಚ ವೆಂಕಟ್ ಗೆ ಸಹಾಯ ಹಸ್ತ ಚಾಚಿದ ಕಿಚ್ಚ ಸುದೀಪ್..!

ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ.…