ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಸೆಲೆಬ್ರಿಟಿಗಳ ವಿರುದ್ಧ ವಕೀಲ ಸುಧಿರ್ ಕುಮಾರ್ ಓಜಾ ದೂರು ದಾಖಲಿಸಿದ್ದಾರೆ.

ಇಲ್ಲಿಯ ಮುಜಾಫರ್ಪುರ್ ನ್ಯಾಯಾಲಯದಲ್ಲಿ ದೂರು ದಾಖಲಸಿದ್ದಾರೆ. ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಅಲ್ಲದೇ, ಅವರ ಹಲವು ಸಿನಿಮಾಗಳು ಬಿಡುಗಡೆ ಹೊಂದಿರಲಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದವು. ಹೀಗಾಗಿ ಅವರು ಇಂತಹ ನಿರ್ಧರ ಕೈಗೊಂಡಿದ್ದಾರೆ ಎಂದು ವಕೀಲ ಓಜಾ ಆರೋಪಿಸಿದ್ದಾರೆ.

ಬಾಲಿವುಡ್ ಸಿನಿಮಾ ನಿರ್ದೇಶಕರಾದ ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ನಟ ಸಲ್ಮಾನ್ ಖಾನ್ ಸೇರಿದಂತೆ ಎಂಟು ಜನರ ವಿರುದ್ಧ ಐಪಿಸಿ ಸೆಕ್ಸನ್ 306, 109, 504 ಮತ್ತು 506 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಭಾನುವಾರ ಬೆಳಿಗ್ಗೆ 9.30ಕ್ಕೆ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಶರಣಾಗಿದ್ದರು. ಮಾನಸಿಕ ಖಿನ್ನತೆಗೊಳಗಾಗಿದ್ದರಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಕೈ ಪೋ ಚೆ ಸಿನಿಮಾ ಮೂಲಕ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಸುಶಾಂತ್ ಗೆ ಧೋನಿ ಸಿನಿಮಾ ದೊಡ್ಡ ಬ್ರೇಕ್ ನೀಡಿತ್ತು. 10ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಸುಶಾಂತ್ ಅವರನ್ನು ಬಾಲಿವುಡ್ ತಾರತಮ್ಯದಿಂದ ನೋಡಲಾಗುತ್ತಿತ್ತು ಎಂಬ ಸುದ್ದಿ ಹರಿದಾಡಿತ್ತು. ಸದ್ಯ ಈ ಕುರಿತು ಹಲವರು ಹಲವು ವ್ಯಾಖ್ಯಾನಗಳನ್ನು ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಮಿತ್ ಶಾ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಪ್ರಕಾಶ್ ರೈ

ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಹುಭಾಷಾ ನಟ ಪ್ರಕಾಶ್ ರೈ, ಎಂತಹ ಅವಮಾನ ಸುಳ್ಳಿಗೇ ಸುಳ್ಳು ಹೇಳಲಾಗುತ್ತಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಫೆಬ್ರವರಿಯಲ್ಲಿ ಬ್ಯಾಂಕುಗಳ ಸೇವೆಯಲ್ಲಿ ವ್ಯತ್ಯಯ

ಮೊದಲೆಲ್ಲ ಬ್ಯಾಂಕ್ಗಳಿಗೆ ರಜೆ ಅಂದರೆ ತಲೆ ಕೆಟ್ಟು ಹೋಗ್ತಿತ್ತು. ಆದರೆ ಈಗ ಹಾಗಲ್ಲ ನೆಟ್ ಬ್ಯಾಂಕಿAಗ್ ಮೂಲಕ ಅವಶ್ಯಕ ವ್ಯವಹಾರಗಳನ್ನ ನಾವೇ ನಡೆಸಬಹುದಾಗಿದೆ. ಹಾಗಂತ ನಾವು ಬ್ಯಾಂಕ್ಗಳನ್ನೂ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ. ಲಾಕರ್ ವ್ಯವಸ್ಥೆ, ಸಾಲದ ಬಗ್ಗೆ ಮಾಹಿತಿ ಹೀಗೆ ಮುಖ್ಯ ಕೆಲಸ ಆಗಬೇಕು ಅಂದರೆ ನಾವು ಬ್ಯಾಂಕ್ಗೆ ತೆರಳಲೇಬೇಕು.

ಕರಿನಾ-ಸೈಫ್ ಅಲಿ ಖಾನ್ ದಂಪತಿಗೆ ಮತ್ತೊಂದು ಮಗು

ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ದಂಪತಿಗೆ ಮತ್ತೊಂದು ಮಗು ಜನಿಸಿದ್ದು ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ.