ಬೆಂಗಳೂರು: ಮೇಲ್ಮನೆಗೆ ನಡೆಯುವ ಚುನಾವಣೆಗೆ ಬಿಜೆಪಿ ತಡರಾತ್ರಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇಂದು ನಾಲ್ವರು ನಾಮಪತ್ರ ಸಲ್ಲಿಸಲಿದ್ದಾರೆ. ಆದರೆ, ಹಳ್ಳಿ ಹಕ್ಕಿ ಎಚ್. ವಿಶ್ವನಾಥ್ ಗೆ ಪಕ್ಷ ಕೈ ಕೊಟ್ಟಿದೆ.

ಎಂಟಿಬಿ ನಾಗರಾಜ್, ಆರ್.ಶಂಕರ್, ಸುನಿಲ್ ವಲ್ಯಾಪುರೆ ಮತ್ತು ಪ್ರತಾಪ್ ಸಿಂಹ ನಾಯಕ್ ಗೆ ಟಿಕೆಟ್ ಸಿಕ್ಕಿದೆ. ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಎಂಟಿಬಿ ನಾಗರಾಜ್, ಆರ್.ಶಂಕರ್ ಗೆ ನೀಡಿದ ಮಾತನ್ನು ಸಿಎಂ ಯಡಿಯೂರಪ್ಪ ಉಳಿಸಿಕೊಂಡಿದ್ದಾರೆ. ಆದರೆ ವಿಶ್ವನಾಥ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸಿಎಂ ವಿಫಲವಾಗಿದ್ದಾರೆ.

ಹೊಸಕೋಟೆಯ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಹೊರಬಂದ ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದರು. ಹೀಗಾಗಿ ಎಂಟಿಬಿ ನಾಗರಾಜ್ ಅವರಿಗೆ ಟಿಕೆಟ್ ಸಿಕ್ಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆರ್.ಶಂಕರ್ ಉಪಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕ್ಷೇತ್ರವನ್ನು ಬಿಜೆಪಿಯ ಹೈಕಮಾಂಡ್ ಆದೇಶದಂತೆ ಅರುಣ್ ಕುಮಾರ್ ಅವರಿಗೆ ತ್ಯಾಗ ಮಾಡಿದ ಪ್ರತಿಫಲವಾಗಿ ಟಿಕೆಟ್ ಲಭ್ಯವಾಗಿದೆ.

ಸಿಎಂ ಯಡಿಯೂರಪ್ಪ ಆಪ್ತ ಸುನಿಲ್ ವಲ್ಯಾಪುರೆ ಸಹ ಸಂಸದ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಗಾಗಿ ಚಿಂಚೋಳಿ ಕ್ಷೇತ್ರ ತ್ಯಾಗ ಮಾಡಿದ್ದರು. ಈ ಹಿನ್ನೆಲೆ ಟಿಕೆಟ್ ಸಿಕ್ಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಪ್ತ, ದಕ್ಷಿಣ ಕನ್ನಡದ ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಹ ನಾಯಕ್ ಅವರಿಗೆ ಟಿಕೆಟ್ ಲಭ್ಯವಾಗಿದೆ. ಪ್ರತಾಪ್ ಸಿಂಹ ನಾಯಕ್ ಆರ್.ಎಸ್.ಎಸ್ ಹಿನ್ನೆಲೆ ಹೊಂದಿದ್ದಾರೆ. ಆದರೆ, ಸದ್ಯ ವಿಶ್ವನಾಥ್ ಅವರಿಗೆ ಟಿಕೆಟ್ ಸಿಗದ ಕಾರಣ ಬಿಜೆಪಿ ಪಾಳಯದಲ್ಲಿ ಹಾಗೂ ಪಕ್ಷ ತೊರೆದು ಬಂದ ನಾಯಕರಲ್ಲಿ ಸಹಜವಾಗಿ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You May Also Like

ಈರುಳ್ಳಿ ಬೆಳೆದ ರೈತನ ಬದುಕು ಬೀದಿಗೆ…ಈರುಳ್ಳಿ ಕಂಡರೆ ಓಡುತ್ತಿರುವ ಗ್ರಾಹಕ!

ಬೆಂಗಳೂರು : ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಹೀಗಾಗಿ ಈರುಳ್ಳಿಯನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ! ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳೇನು?

ಈಗಾಗಲೇ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಲಾಕ್ ಡೌನ್ ಮಾದರಿಯಲ್ಲೆ ರಾಜ್ಯ ಸರ್ಕಾರ ಕೋವಿಡ್ ಕರ್ಪ್ಯೂ ಘೋಷಿಸಿದೆ. ಸಚಿವ ಸಂಪುಟದಲ್ಲಿ ಈ ನಿರ್ಧಾರ ತೆಗೆದುಕೊಂಡು ಇನ್ನು ಹಲವು ನಿರ್ಧಾರಗಳನ್ನು ಸಂಪುಟ ಸಭೆಯಲ್ಲಿ ಸರ್ಕಾರ ತೆಗೆದುಕೊಂಡಿದೆ.

ದೆಹಲಿಯಲ್ಲಿ ಸಮುದಾಯದ ಹಂತ ತಲುಪಿದ ಕೊರೊನಾ – ಘೋಷಣೆಗೆ ಕೇಂದ್ರದ ಮೀನಮೇಷ!

ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ಸಮುದಾಯ ಹಂತ ತಲುಪಿದೆ. ಆದರೆ, ಕೇಂದ್ರ ಸರ್ಕಾರದ ಘೋಷಣೆಗಾಗಿ ಕಾಯುತ್ತಿದ್ದೇವೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ತಿಳಿಸಿದ್ದಾರೆ.

ಪಶ್ಚಿಮ ಪದವೀಧರರ ಮತಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಶೆಟ್ಟರ್

ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.