ಬೆಂಗಳೂರು: ಮೇಲ್ಮನೆಗೆ ನಡೆಯುವ ಚುನಾವಣೆಗೆ ಬಿಜೆಪಿ ತಡರಾತ್ರಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಇಂದು ನಾಲ್ವರು ನಾಮಪತ್ರ ಸಲ್ಲಿಸಲಿದ್ದಾರೆ. ಆದರೆ, ಹಳ್ಳಿ ಹಕ್ಕಿ ಎಚ್. ವಿಶ್ವನಾಥ್ ಗೆ ಪಕ್ಷ ಕೈ ಕೊಟ್ಟಿದೆ.

ಎಂಟಿಬಿ ನಾಗರಾಜ್, ಆರ್.ಶಂಕರ್, ಸುನಿಲ್ ವಲ್ಯಾಪುರೆ ಮತ್ತು ಪ್ರತಾಪ್ ಸಿಂಹ ನಾಯಕ್ ಗೆ ಟಿಕೆಟ್ ಸಿಕ್ಕಿದೆ. ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಎಂಟಿಬಿ ನಾಗರಾಜ್, ಆರ್.ಶಂಕರ್ ಗೆ ನೀಡಿದ ಮಾತನ್ನು ಸಿಎಂ ಯಡಿಯೂರಪ್ಪ ಉಳಿಸಿಕೊಂಡಿದ್ದಾರೆ. ಆದರೆ ವಿಶ್ವನಾಥ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸಿಎಂ ವಿಫಲವಾಗಿದ್ದಾರೆ.

ಹೊಸಕೋಟೆಯ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಹೊರಬಂದ ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದರು. ಹೀಗಾಗಿ ಎಂಟಿಬಿ ನಾಗರಾಜ್ ಅವರಿಗೆ ಟಿಕೆಟ್ ಸಿಕ್ಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆರ್.ಶಂಕರ್ ಉಪಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಕ್ಷೇತ್ರವನ್ನು ಬಿಜೆಪಿಯ ಹೈಕಮಾಂಡ್ ಆದೇಶದಂತೆ ಅರುಣ್ ಕುಮಾರ್ ಅವರಿಗೆ ತ್ಯಾಗ ಮಾಡಿದ ಪ್ರತಿಫಲವಾಗಿ ಟಿಕೆಟ್ ಲಭ್ಯವಾಗಿದೆ.

ಸಿಎಂ ಯಡಿಯೂರಪ್ಪ ಆಪ್ತ ಸುನಿಲ್ ವಲ್ಯಾಪುರೆ ಸಹ ಸಂಸದ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಗಾಗಿ ಚಿಂಚೋಳಿ ಕ್ಷೇತ್ರ ತ್ಯಾಗ ಮಾಡಿದ್ದರು. ಈ ಹಿನ್ನೆಲೆ ಟಿಕೆಟ್ ಸಿಕ್ಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಪ್ತ, ದಕ್ಷಿಣ ಕನ್ನಡದ ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ್ ಸಿಂಹ ನಾಯಕ್ ಅವರಿಗೆ ಟಿಕೆಟ್ ಲಭ್ಯವಾಗಿದೆ. ಪ್ರತಾಪ್ ಸಿಂಹ ನಾಯಕ್ ಆರ್.ಎಸ್.ಎಸ್ ಹಿನ್ನೆಲೆ ಹೊಂದಿದ್ದಾರೆ. ಆದರೆ, ಸದ್ಯ ವಿಶ್ವನಾಥ್ ಅವರಿಗೆ ಟಿಕೆಟ್ ಸಿಗದ ಕಾರಣ ಬಿಜೆಪಿ ಪಾಳಯದಲ್ಲಿ ಹಾಗೂ ಪಕ್ಷ ತೊರೆದು ಬಂದ ನಾಯಕರಲ್ಲಿ ಸಹಜವಾಗಿ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

You May Also Like

ರೋಣ ತಾಲೂಕಿನಲ್ಲಿ ವಿಸ್ಟೇನ್ ಕಂಪನಿ ಕಾರ್ಯಕ್ಕೆ ಮೆಚ್ಚುಗೆ

ವಿಸ್ಟೇನ್ ಟೆಕ್ನಿಕಲ್ ಆಂಡ್ ಸರ್ವಿಸಸ್ ಸೆಂಟರ್ ಪ್ರೈವೇಟ್ ಲಿಮಿಟೆಡ್ ಇಂಡಿಯಾ ವತಿಯಿಂದ ಶನಿವಾರ ತಾಲೂಕು ಮಾಡಲಗೇರಿ ಗ್ರಾಮದಲ್ಲಿ ಜಿಲ್ಲೆಯ 25 ಜನರಿಗ ಕೃತಕ ಕಾಲು, ಕೃತಕ ಕೈ, ವೀಲ್ ಚೇರ್, ವಾಕಿಂಗ್ ಸ್ಟಾಂಡ್, ವಾಕಿಂಗ್ ಸ್ಟಿಕ್, ಕಾಲಿಪರ್, ಶೂಸ್, ನೀ ಕ್ಯಾಪ್ ಇತ್ಯಾದಿ ಸಾಮಗ್ರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.

ಗದಗ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ ಕ್ವಾರಂಟೈನ್ ಕೇಂದ್ರ..!

ನಿನ್ನೆಯಷ್ಟೆ ರಾಜ್ಯದ ಉಡುಪಿ ಜಿಲ್ಲೆಯ ಕೊರೋನಾ ಸೋಂಕು ವ್ಯಾಪಕವಾಗುವುದರಲ್ಲಿ ಕ್ವಾರಂಟೈನ್ ಕೇಂದ್ರಗಳ ಪಾತ್ರ ಹಾಗೂ ಅವ್ಯವಸ್ಥೆ ಕುರಿತು ಉತ್ತರಪ್ರಭ ವಿಶೇಷ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೆ ಇದೀಗ ಗದಗ ಜಿಲ್ಲೆಯಲ್ಲಿನ ನಿನ್ನೆಯ ಪ್ರಕರಣದ ಟ್ರಾವೆಲ್ ಹಿಸ್ಟರಿ ಬೆನ್ನತ್ತಿದಾಗ ತಾಲೂಕು ಆಡಳಿತದ ನಿರ್ಲಕ್ಷ್ಯ ಎದ್ದು ತೋರುತ್ತಿದೆ.

ದೇಶದಲ್ಲಿ 11,458 ಹೊಸ ಕೊರೊನಾ ಪ್ರಕರಣ: 3 ಲಕ್ಷ ದಾಟಿದ ಸೋಂಕಿತರು

ದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಸತತವಾಗಿ 10…

ರಾಜ್ಯದಲ್ಲಿ ಇಂದು 22 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಕೋವಿಡ್ ಸೋಂಕಿನ ಅಂಕಿ ಅಂಶಗಳಲ್ಲಿ ಮಾರ್ಚ್ ನಲ್ಲಿ ಮೂರನೇ ಸ್ಥಾನದಲ್ಲಿದ್ದ ಕರ್ನಾಟಕ, ಇಂದು ಹದಿಮೂರನೇ ಸ್ಥಾನದಲ್ಲಿದೆ ಶೇ.5.97 ನ ರಾಷ್ಟ್ರೀಯ ಸರಾಸರಿಗೆ ಹೋಲಿಸಿದಲ್ಲಿ‌ ರಾಜ್ಯದ ‌ಸರಾಸರಿ ಶೇ.3.13 ಇದೆ.