ನವದೆಹಲಿ: ಲಡಾಖ್ ನ ಗಡಿಯಲ್ಲಿ ಚೀನಾ – ಭಾರತದ ಸಂಬಂಧ ಉದ್ವಿಗ್ನ ಪರಿಸ್ಥಿತಿಗೆ ಬಂದು ನಿಂತಿದೆ. ಹೀಗಾಗಿ ಗಡಿ ಪ್ರದೇಶದ ಮುಂಚೂಣಿ ಪ್ರದೇಶಗಳಲ್ಲಿ ಭೂಸೇನೆ, ವಾಯುಪಡೆ, ನೌಕಾಪಡೆಗಳು ಸನ್ನದ್ಧ ಸ್ಥಿತಿಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಇದರೊಂದಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಕೂಡ ಹೆಚ್ಚಿನ ಸೇನೆ ರವಾನಿಸಲಾಗಿದೆ. ಹಿಂದು ಮಹಾಸಾಗರ ಪ್ರದೇಶದಲ್ಲಿ ಚೀನಾ ನೌಕಾಪಡೆ ಬಂದು ಹೋಗುತ್ತಿದ್ದು, ಈ ಪ್ರದೇಶಗಳಲ್ಲಿ ನೌಕಾಪಡೆಗೆ ಸನ್ನದ್ಧವಾಗಿ ನಿಲ್ಲುವಂತೆ ಸೂಚಿಸಲಾಗಿದೆ.

ರಕ್ಷಣಾ ಸಚಿವ ರಾಜನಾಥ್ ಮತ್ತು ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಡುವಣ ಉನ್ನತ ಮಟ್ಟದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅರುಣಾಚಲಪ್ರದೇಶ, ಹಿಮಾಚಲಪ್ರದೇಶ, ಉತ್ತರಾಖಂಡ ಮತ್ತು ಲಡಾಖ್ ನಲ್ಲಿನ ಮುಂಚೂಣಿ ಸೇನಾ ಪ್ರದೇಶಗಳಿಗೆ ಹೆಚ್ಚಿನ ಯೋಧರನ್ನು ರವಾನಿಸುವ ಮೂಲಕ ಪರಿಸ್ಥಿತಿ ಎದುರಿಸಲು ಸೇನೆ ಸಿದ್ಧತೆ ನಡೆಸಿದೆ.

Leave a Reply

Your email address will not be published. Required fields are marked *

You May Also Like

ದೇಶದಲ್ಲಿ 11,458 ಹೊಸ ಕೊರೊನಾ ಪ್ರಕರಣ: 3 ಲಕ್ಷ ದಾಟಿದ ಸೋಂಕಿತರು

ದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಸತತವಾಗಿ 10…

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಯಾವ ಯಾವ ದೇಶದಲ್ಲಿ ಕೊರೊನಾ ಸ್ಥಿತಿ ಹೇಗಿದೆ ಗೊತ್ತಾ?

ಕೊರೊನಾ ವೈರಸ್ ಇಡೀ ವಿಶ್ವವನ್ನೇ ಕಂಗಾಲಾಗುವಂತೆ ಮಾಡಿದೆ. ಇಲ್ಲಿಯವರೆಗೂ 2.48 ಲಕ್ಷ ಜನರನ್ನು ಇಲ್ಲಿಯವರೆಗೂ ವೈರಸ್ ಬಲಿ ಪಡೆದಿದೆ. ನಮ್ಮ ದೇಶವೂ ಇದಕ್ಕೆ ಹೊರತಲ್ಲ. ಭಾರತದಲ್ಲಿ ಪಾಸಿಟಿವ್ ಪ್ರಕರಣ 62 ಸಾವಿರ ದಾಟಿದೆ.

ಕಾನೂನು ಲೆಕ್ಕಕ್ಕಿಲ್ಲ ಲಕ್ಕುಂಡಿ ಗ್ರಾಮ ಪಂಚಾಯತಿಗೆ..?: ಜನರ ಆರೋಗ್ಯ ಒತ್ತೆ ಇಡಲು ಹೊರಟಿತ್ತಾ ಗ್ರಾಪಂ..!

ಗದಗ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕಿದ್ದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಗ್ರಾಮವನ್ನೆ ಮಾರಾಟ ಮಾಡಲು ಹಿಂಜರಿಯುವುದಿಲ್ಲ…