ನವದೆಹಲಿ: ಲಡಾಖ್ ನ ಗಡಿಯಲ್ಲಿ ಚೀನಾ – ಭಾರತದ ಸಂಬಂಧ ಉದ್ವಿಗ್ನ ಪರಿಸ್ಥಿತಿಗೆ ಬಂದು ನಿಂತಿದೆ. ಹೀಗಾಗಿ ಗಡಿ ಪ್ರದೇಶದ ಮುಂಚೂಣಿ ಪ್ರದೇಶಗಳಲ್ಲಿ ಭೂಸೇನೆ, ವಾಯುಪಡೆ, ನೌಕಾಪಡೆಗಳು ಸನ್ನದ್ಧ ಸ್ಥಿತಿಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಇದರೊಂದಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಕೂಡ ಹೆಚ್ಚಿನ ಸೇನೆ ರವಾನಿಸಲಾಗಿದೆ. ಹಿಂದು ಮಹಾಸಾಗರ ಪ್ರದೇಶದಲ್ಲಿ ಚೀನಾ ನೌಕಾಪಡೆ ಬಂದು ಹೋಗುತ್ತಿದ್ದು, ಈ ಪ್ರದೇಶಗಳಲ್ಲಿ ನೌಕಾಪಡೆಗೆ ಸನ್ನದ್ಧವಾಗಿ ನಿಲ್ಲುವಂತೆ ಸೂಚಿಸಲಾಗಿದೆ.

ರಕ್ಷಣಾ ಸಚಿವ ರಾಜನಾಥ್ ಮತ್ತು ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಡುವಣ ಉನ್ನತ ಮಟ್ಟದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅರುಣಾಚಲಪ್ರದೇಶ, ಹಿಮಾಚಲಪ್ರದೇಶ, ಉತ್ತರಾಖಂಡ ಮತ್ತು ಲಡಾಖ್ ನಲ್ಲಿನ ಮುಂಚೂಣಿ ಸೇನಾ ಪ್ರದೇಶಗಳಿಗೆ ಹೆಚ್ಚಿನ ಯೋಧರನ್ನು ರವಾನಿಸುವ ಮೂಲಕ ಪರಿಸ್ಥಿತಿ ಎದುರಿಸಲು ಸೇನೆ ಸಿದ್ಧತೆ ನಡೆಸಿದೆ.

Leave a Reply

Your email address will not be published. Required fields are marked *

You May Also Like

ಇಂದು ಕೂಡ ಶತಕ ಬಾರಿಸಿದ ಸೋಂಕಿತರ ಸಂಖ್ಯೆ!: ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು..?

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಶತಕ ಬಾರಿಸಿದೆ. ಇಂದು ಬರೋಬ್ಬರಿ 122…

ಶೈಕ್ಷಣಿಕ ವರ್ಷ ಯಾವಾಗ ಅಂತಾ ಸೂಕ್ತ ತೀರ್ಮಾನ

ಮುಂದಿನ ಶೈಕ್ಷಣಿಕ ವರ್ಷದ ಅವಧಿ ಎಷ್ಟಿರಬೇಕು ಎಂಬ ಕುರಿತು ತಜ್ಞರು ಮತ್ತು ಇಲಾಖಾ ಅಧಿಕಾರಿಗಳ ಸಭೆ ಕರೆದು ಸೂಕ್ತ ತೀರ್ಮಾನದ ಬಗ್ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

ಸೋಂಕಿನ ಮೂಲಗಳೇ ತಿಳಿಯುತ್ತಿಲ್ಲ! ರಾಜ್ಯದಲ್ಲಿ ಹೆಚ್ಚಿದೆ ಜನರಲ್ಲಿ ಕೊರೊನಾ ಆತಂಕ!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೇಗ ಹೆಚ್ಚಾಗುತ್ತಿದೆ. ಸೋಂಕಿತರ ಸಂಖ್ಯೆಯೊಂದಿಗೆ ಸಾವಿನ ಸಂಖ್ಯೆಯೂ…