ನವದೆಹಲಿ: ಲಡಾಖ್ ನ ಗಡಿಯಲ್ಲಿ ಚೀನಾ – ಭಾರತದ ಸಂಬಂಧ ಉದ್ವಿಗ್ನ ಪರಿಸ್ಥಿತಿಗೆ ಬಂದು ನಿಂತಿದೆ. ಹೀಗಾಗಿ ಗಡಿ ಪ್ರದೇಶದ ಮುಂಚೂಣಿ ಪ್ರದೇಶಗಳಲ್ಲಿ ಭೂಸೇನೆ, ವಾಯುಪಡೆ, ನೌಕಾಪಡೆಗಳು ಸನ್ನದ್ಧ ಸ್ಥಿತಿಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಇದರೊಂದಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಕೂಡ ಹೆಚ್ಚಿನ ಸೇನೆ ರವಾನಿಸಲಾಗಿದೆ. ಹಿಂದು ಮಹಾಸಾಗರ ಪ್ರದೇಶದಲ್ಲಿ ಚೀನಾ ನೌಕಾಪಡೆ ಬಂದು ಹೋಗುತ್ತಿದ್ದು, ಈ ಪ್ರದೇಶಗಳಲ್ಲಿ ನೌಕಾಪಡೆಗೆ ಸನ್ನದ್ಧವಾಗಿ ನಿಲ್ಲುವಂತೆ ಸೂಚಿಸಲಾಗಿದೆ.

ರಕ್ಷಣಾ ಸಚಿವ ರಾಜನಾಥ್ ಮತ್ತು ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಡುವಣ ಉನ್ನತ ಮಟ್ಟದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅರುಣಾಚಲಪ್ರದೇಶ, ಹಿಮಾಚಲಪ್ರದೇಶ, ಉತ್ತರಾಖಂಡ ಮತ್ತು ಲಡಾಖ್ ನಲ್ಲಿನ ಮುಂಚೂಣಿ ಸೇನಾ ಪ್ರದೇಶಗಳಿಗೆ ಹೆಚ್ಚಿನ ಯೋಧರನ್ನು ರವಾನಿಸುವ ಮೂಲಕ ಪರಿಸ್ಥಿತಿ ಎದುರಿಸಲು ಸೇನೆ ಸಿದ್ಧತೆ ನಡೆಸಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಯ ಅಂಧಾ ದರ್ಬಾರ್…!

ಜಿಲ್ಲೆಯ ಜೀವನಾಡಿಯಾಗಿರುವ ತುಂಗಭದ್ರೆ ಮರಳು ಗಣಿಗಾರಿಕೆಗೆ ಸಿಲುಕಿ ನರಳುವಂತಾಗಿದೆ. ನಿತ್ಯ ಲೆಕ್ಕವಿಲ್ಲದಷ್ಟು ತುಂಗಭದ್ರೆಯ ಒಡಲು ಬಗೆಯುತ್ತಿದ್ದರೂ ತುಂಗವ್ವಾ ಮರಳು ಗಣಿಗಳ್ಳರ ದಾಯಕ್ಕೆ ಅಸಹಾಯಕಳಾಗಿ ಮೈಯೊಡ್ಡಿದ್ದಾಳೆ.

ಅಬ್ಬಾ…! ಮಹಾರಾಷ್ಟ್ರದಲ್ಲಿ ಎಷ್ಟು ಜನ ಪೊಲೀಸರಿಗೆ ಕೊರೊನಾ ಬಂದಿದೆ ಗೊತ್ತಾ?

ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಹಾವಳಿ ಮಿತಿ ಮೀರುತ್ತಿದೆ. ಕೊರೊನಾ ವಾರಿಯರ್ಸ್ ನ್ನು ಅದು…

ವಿಶ್ವ ಬ್ಯಾಂಕ್ ನಿಂದ ದೇಶಕ್ಕೆ 1 ಬಿಲಿಯನ್ ಯುಎಸ್ಡಿ ಡಾಲರ್ ನೆರವು

ಭಾರತ ಸರ್ಕಾರದ ಹಲವು ಯೋಜನೆಗಳನ್ನು ಪರಾಮರ್ಶಿಸಿ ಕೊರೋನಾ ಸಂಕಷ್ಟ ಕಾಲದಲ್ಲಿ ಇದೀಗ ವಿಶ್ವ ಬ್ಯಾಂಕ್ ಭಾರತದ ನೆರವಿಗೆ ಧಾವಿಸಿದೆ.

ದೇಶದ ಜನರಿಗೆ ಉಚಿತ ಲಸಿಕೆ, ಆಹಾರಧಾನ್ಯ ವಿತರಣೆ : ನರೇಂದ್ರ ಮೋದಿ ಘೋಷಣೆ

ಜೂನ್ 21ರಿಂದ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ. 18 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರವೇ ಲಸಿಕೆ ವಿತರಣೆ ಮಾಡಲಿದೆ