ನವದೆಹಲಿ: ಲಡಾಖ್ ನ ಗಡಿಯಲ್ಲಿ ಚೀನಾ – ಭಾರತದ ಸಂಬಂಧ ಉದ್ವಿಗ್ನ ಪರಿಸ್ಥಿತಿಗೆ ಬಂದು ನಿಂತಿದೆ. ಹೀಗಾಗಿ ಗಡಿ ಪ್ರದೇಶದ ಮುಂಚೂಣಿ ಪ್ರದೇಶಗಳಲ್ಲಿ ಭೂಸೇನೆ, ವಾಯುಪಡೆ, ನೌಕಾಪಡೆಗಳು ಸನ್ನದ್ಧ ಸ್ಥಿತಿಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಇದರೊಂದಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಕೂಡ ಹೆಚ್ಚಿನ ಸೇನೆ ರವಾನಿಸಲಾಗಿದೆ. ಹಿಂದು ಮಹಾಸಾಗರ ಪ್ರದೇಶದಲ್ಲಿ ಚೀನಾ ನೌಕಾಪಡೆ ಬಂದು ಹೋಗುತ್ತಿದ್ದು, ಈ ಪ್ರದೇಶಗಳಲ್ಲಿ ನೌಕಾಪಡೆಗೆ ಸನ್ನದ್ಧವಾಗಿ ನಿಲ್ಲುವಂತೆ ಸೂಚಿಸಲಾಗಿದೆ.

ರಕ್ಷಣಾ ಸಚಿವ ರಾಜನಾಥ್ ಮತ್ತು ಮೂರು ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ನಡುವಣ ಉನ್ನತ ಮಟ್ಟದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅರುಣಾಚಲಪ್ರದೇಶ, ಹಿಮಾಚಲಪ್ರದೇಶ, ಉತ್ತರಾಖಂಡ ಮತ್ತು ಲಡಾಖ್ ನಲ್ಲಿನ ಮುಂಚೂಣಿ ಸೇನಾ ಪ್ರದೇಶಗಳಿಗೆ ಹೆಚ್ಚಿನ ಯೋಧರನ್ನು ರವಾನಿಸುವ ಮೂಲಕ ಪರಿಸ್ಥಿತಿ ಎದುರಿಸಲು ಸೇನೆ ಸಿದ್ಧತೆ ನಡೆಸಿದೆ.

Leave a Reply

Your email address will not be published. Required fields are marked *

You May Also Like

ಆಂಧ್ರಪ್ರದೇಶ: ಎಸ್.ಎಸ್.ಎಲ್ಸಿ ಪರೀಕ್ಷೆ ರದ್ದುಗೊಳಿಸಿ ಆದೇಶ

ಆಂಧ್ರಪ್ರದೇಶ : ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

4 ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಮುಂದೇನಾಯ್ತು?

ಲಕ್ನೋ : ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ನಾಲ್ಕು ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಅವಳನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬೆಳಿಗ್ಗೆ 4ಕ್ಕೆ ಕಾರ್ ತೊಳೆಯುವ ಕೆಲಸ: 12ನೆ ತರಗತಿಯಲ್ಲಿ ಶೇ.91.7 ಸ್ಕೋರ್ ಸಾಹಸ

ಅದು ಸ್ಲಮ್ಮೊಂದರಲ್ಲಿನ ಮನೆ. ಹೆಸರಿಗಷ್ಟೇ ಮನೆ. ಇರುವುದೇ ಎರಡು ಕೋಣೆ ಮಾತ್ರ. ಇದರಲ್ಲಿ ಒಂಭತ್ತು ಜನರ ಕುಟುಂಬ ವಾಸಿಸುತ್ತಿದೆ. ಮನೆಯ ಹಿರಿಯನಿಗೆ ಹೃದಯ ಕಾಯಿಲೆ. ಉಳಿದ ಸಹೋದರರಿಗೆ ನಿಶ್ಚಿತ ಉದ್ಯೋಗವಿಲ್ಲ. ಅಲ್ಲಿ ಹಸಿವು ಖಾಯಂ ಅತಿಥಿಯಾಗಿರುವಾಗ ವಿದ್ಯಾಭ್ಯಾಸದ ಖರ್ಚು ನಿಭಾಯಿಸುವುದೇ ಅಸಾಧ್ಯ.

ದೇಶದಲ್ಲಿ 2ನೇ ಬಾರಿಗೆ ಪತ್ತೆಯಾಯ್ತು ನಿಗೂಢ ಏಕಶಿಲೆ..!

ಜಗತ್ತಿನ ಹಲವೆಡೆ ಪತ್ತೆಯಾಗಿ ಬೆರಗು ಮೂಡಿಸಿದ್ದ ನಿಗೂಢ ಏಕಶಿಲೆ ಇದೀಗ ಭಾರತದಲ್ಲೂ ಎರಡನೇ ಬಾರಿಗೆ ಕಾಣಿಸಿಕೊಂಡಿದ್ದು, ಮುಂಬೈನ ಉಪನಗರ ಬಾಂದ್ರಾದ ಜಾಗ್ಗರ್ಸ್ ಪಾರ್ಕ್ನಲ್ಲಿ ನಿಗೂಢ ಏಕಶಿಲೆ ಪತ್ತೆಯಾಗಿರುವ ಬಗ್ಗೆ ಸ್ಥಳೀಯ ಕಾರ್ಪೋರೇಟರ್ ಆಸಿಫ್​ ಝಕೆರಿಯಾ ಇಂದು ಬೆಳಗ್ಗೆ ಟ್ವೀಟ್​ ಮಾಡಿ ತಿಳಿಸಿದ್ದಾರೆ.