ನ್ಯೂಯಾರ್ಕ್‌: ಚೀನಾದೊಂದಿಗೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲಿಯೇ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ತಾತ್ಕಾಲಿಕ ಸದಸ್ಯತ್ವ ಸಿಕ್ಕಿದೆ.

ಈ ಕುರಿತು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ಟಿ.ಎಸ್‌. ತಿರುಮೂರ್ತಿ ತಿಳಿಸಿದ್ದಾರೆ. 192 ಮತಗಳ ಪೈಕಿ ಭಾರತಕ್ಕೆ 184 ಮತಗಳು ಸಿಕ್ಕಿವೆ. ಈ ನಿಟ್ಟಿನಲ್ಲಿ ಭಾರತ 2021ರಿಂದ 22ರ ವರೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯತ್ವ ಹೊಂದಿರಲಿದೆ.
ವಿಶ್ವಂಸ್ಥೆಯ ವಿವಿಧ ಸದಸ್ಯ ರಾಷ್ಟ್ರಗಳೊಂದಿಗಿನ ಉತ್ತಮ ಸಂಬಂಧವು ಐತಿಹಾಸಿಕ ವಿಜಯಕ್ಕೆ ಕಾರಣವಾಗಿದೆ ಎಂದು ತಿರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ವಿಶ್ವಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವ ಪಡೆದಿರುವ ಫ್ರಾನ್ಸ್, ಭಾರತಕ್ಕೆ ಖಾಯಂ ಸದಸ್ವತ್ವ ನೀಡುವಂತೆ ಪ್ರತಿಪಾದಿಸಿತ್ತು. ಅಲ್ಲದೇ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡುವ ಎಲ್ಲಾ ಅರ್ಹತೆ ಇದೆ ಎಂದು ಅದು ವಾದಿಸಿತ್ತು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಒಟ್ಟು 5 ಖಾಯಂ ಸದಸ್ಯರಿದ್ದು, 10 ತಾತ್ಕಾಲಿಕ ಸದಸ್ಯ ರಾಷ್ಟ್ರಗಳಿವೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-4

ಇವತ್ತಿನ ಕೊರೋನಾ ಕಾವ್ಯ ಸರಿಣಿಗೆ ಕವನ ಕಳುಹಿಸಿದವರು ಮಂಗಳಗೌರಿ ಹಿರೇಮಠ, ಮಂಗಳಗೌರಿ ಹಿರೇಮಠ ಇವರು ಗದಗನ ಬಸವೇಶ್ವರ ನಗರದವರು, ಸಾಹಿತ್ತಿಕವಾಗಿ ಅಭಿರುಚಿ ಉಳ್ಳ ಮಂಗಳಗೌರಿ ಅವರು ಸಾಕಷ್ಟು ಕವತೆಗಳನ್ನು ರಚಿಸಿದ್ದಾರೆ. ಊಹಿಸದೇ ಬಂದ ಘಳಿಗೆಯನ್ನು ಕೊರೋನಾದ ಈ ಸಂಕಷ್ಟ ಕಾಲದಲ್ಲಿ ಹದವಾಗಿ ಕಟ್ಟಿಕೊಟ್ಟಿದ್ದಾರೆ.

ಖಾಸಗಿ ವೈದ್ಯರು ವೃತ್ತಿ ಪರತೆ ಮರೆತರೆ ಶಿಕ್ಷೆ ಕಟ್ಟಿಟ್ಟ ಬುತ್ತಿ!

ಖಾಸಗಿ ವೈದ್ಯರು ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು. ಒಂದು ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಸಿಬಿಎಸ್ ಇ ಪರೀಕ್ಷೆ ಇಲ್ಲ – ಕೇಂದ್ರ ಸ್ಪಷ್ಟನೆ!

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶ…

ಮನುಕುಲದ ಸೂರ್ಯ ಲಿಂ.ತೋಂಟದ ಸಿದ್ದಲಿಂಗ ಶ್ರೀ

ಆಲಮಟ್ಟಿ : ಲಿಂ, ತೋಂಟದ ಡಾ.ಸಿದ್ದಲಿಂಗ ಶ್ರೀ ಕರುನಾಡು,ದೇಶ ಕಂಡ ಅಪರೂಪದ ಜೀವ ದೈವ. ನಿಭೀ೯ಡೆ…