ನ್ಯೂಯಾರ್ಕ್‌: ಚೀನಾದೊಂದಿಗೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲಿಯೇ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ತಾತ್ಕಾಲಿಕ ಸದಸ್ಯತ್ವ ಸಿಕ್ಕಿದೆ.

ಈ ಕುರಿತು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ಟಿ.ಎಸ್‌. ತಿರುಮೂರ್ತಿ ತಿಳಿಸಿದ್ದಾರೆ. 192 ಮತಗಳ ಪೈಕಿ ಭಾರತಕ್ಕೆ 184 ಮತಗಳು ಸಿಕ್ಕಿವೆ. ಈ ನಿಟ್ಟಿನಲ್ಲಿ ಭಾರತ 2021ರಿಂದ 22ರ ವರೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯತ್ವ ಹೊಂದಿರಲಿದೆ.
ವಿಶ್ವಂಸ್ಥೆಯ ವಿವಿಧ ಸದಸ್ಯ ರಾಷ್ಟ್ರಗಳೊಂದಿಗಿನ ಉತ್ತಮ ಸಂಬಂಧವು ಐತಿಹಾಸಿಕ ವಿಜಯಕ್ಕೆ ಕಾರಣವಾಗಿದೆ ಎಂದು ತಿರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ವಿಶ್ವಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವ ಪಡೆದಿರುವ ಫ್ರಾನ್ಸ್, ಭಾರತಕ್ಕೆ ಖಾಯಂ ಸದಸ್ವತ್ವ ನೀಡುವಂತೆ ಪ್ರತಿಪಾದಿಸಿತ್ತು. ಅಲ್ಲದೇ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡುವ ಎಲ್ಲಾ ಅರ್ಹತೆ ಇದೆ ಎಂದು ಅದು ವಾದಿಸಿತ್ತು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಒಟ್ಟು 5 ಖಾಯಂ ಸದಸ್ಯರಿದ್ದು, 10 ತಾತ್ಕಾಲಿಕ ಸದಸ್ಯ ರಾಷ್ಟ್ರಗಳಿವೆ.

Leave a Reply

Your email address will not be published. Required fields are marked *

You May Also Like

ಪುಟ್ಟ ಕಂದಮ್ಮಳ ಮೇಲೆ ಪಾಪಿ ಪೊಲೀಸ್ ಈ ಕೃತ್ಯ ಎಸಗಿದನೇ?

ರಾಯ್ಪುರ : ಕಂದಮ್ಮನ ಮೇಲೆ ಪಾಪಿ ಪೊಲೀಸ್ ಒಬ್ಬ ಸಿಗರೇಟ್ ನಿಂದ ಸುಟ್ಟು ಚಿತ್ರ ಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಬಾಲಿವುಡ್ ನಟ ರಣ್ವೀರ್ ಗೆ ಕೊರೊನಾ ಸೋಂಕು

ಬಾಲಿವುಡ್ ಖ್ಯಾತ ಸಹನಟ ರಣವೀರ್ ಶೌರಿಗೆ ಕೊರೊನಾ ಪಾಸಿಟಿವ್ ಆಗಿದೆ. ಈ ವಿಷಯವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕೋರೊನಾ ನಿರ್ವಹಣೆ ಸರಿಯಾಗಿದೆ, ಆತಂಕ ಬೇಡ: ಸಚಿವ ಸಿ.ಸಿ. ಪಾಟೀಲ್

ಕೋರೊನಾ ನಿವ೯ಹಣೆ ಹಾಗೂ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಸಕಾ೯ರ ಹಾಗೂ ಜಿಲ್ಲಾಡಳಿತ ಸಮಥ೯ವಾಗಿವೆ. ಯಾವುದೆ ರೀತಿಯ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 05 ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು 5 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 237…