ನ್ಯೂಯಾರ್ಕ್‌: ಚೀನಾದೊಂದಿಗೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲಿಯೇ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ತಾತ್ಕಾಲಿಕ ಸದಸ್ಯತ್ವ ಸಿಕ್ಕಿದೆ.

ಈ ಕುರಿತು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ಟಿ.ಎಸ್‌. ತಿರುಮೂರ್ತಿ ತಿಳಿಸಿದ್ದಾರೆ. 192 ಮತಗಳ ಪೈಕಿ ಭಾರತಕ್ಕೆ 184 ಮತಗಳು ಸಿಕ್ಕಿವೆ. ಈ ನಿಟ್ಟಿನಲ್ಲಿ ಭಾರತ 2021ರಿಂದ 22ರ ವರೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯತ್ವ ಹೊಂದಿರಲಿದೆ.
ವಿಶ್ವಂಸ್ಥೆಯ ವಿವಿಧ ಸದಸ್ಯ ರಾಷ್ಟ್ರಗಳೊಂದಿಗಿನ ಉತ್ತಮ ಸಂಬಂಧವು ಐತಿಹಾಸಿಕ ವಿಜಯಕ್ಕೆ ಕಾರಣವಾಗಿದೆ ಎಂದು ತಿರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ವಿಶ್ವಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವ ಪಡೆದಿರುವ ಫ್ರಾನ್ಸ್, ಭಾರತಕ್ಕೆ ಖಾಯಂ ಸದಸ್ವತ್ವ ನೀಡುವಂತೆ ಪ್ರತಿಪಾದಿಸಿತ್ತು. ಅಲ್ಲದೇ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡುವ ಎಲ್ಲಾ ಅರ್ಹತೆ ಇದೆ ಎಂದು ಅದು ವಾದಿಸಿತ್ತು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಒಟ್ಟು 5 ಖಾಯಂ ಸದಸ್ಯರಿದ್ದು, 10 ತಾತ್ಕಾಲಿಕ ಸದಸ್ಯ ರಾಷ್ಟ್ರಗಳಿವೆ.

Leave a Reply

Your email address will not be published. Required fields are marked *

You May Also Like

ಮುಂಬೈ ಎಕ್ಸಪ್ರೆಸ್ ನಲ್ಲಿ ಬಂದಿಳಿದರು 124 ಜನ..!

ಮುಂಬೈನಲ್ಲಿದ್ದ ಜನರು ಇಂದು ಮುಂಬೈ-ಗದಗ ಎಕ್ಸಪ್ರೆಸ್ ರೈಲಿನ ಮೂಲಕ ಗದಗ ನಗರಕ್ಕೆ ಆಗಮಿಸಿದರು. ಇದರಲ್ಲಿ 124 ಜನರು ರೈಲಿನ ಮೂಲಕ ನಗರಕ್ಕೆ ಆಗಮಿಸಿದರು.

ಭಾರತದ ಅತಿ ಶ್ರೀಮಂತ ಮಹಿಳೆ ರೋಶ್ನಿ: 38 ವರ್ಷಕ್ಕೆ ಎಚ್.ಸಿ.ಎಲ್ ಕಂಪನಿ ಅಧ್ಯಕ್ಷೆ

ವಾಣಿಜ್ಯ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ-ಎಂಬಿಎ ಮಾಡಿರುವ ರೋಶ್ನಿ ಈಗ ಎಚ್.ಸಿ.ಎಲ್. ಟೆಕ್ನಾಲಜೀಸ್ ಕಂಪನಿಯ ಅಧ್ಯಕ್ಷೆ ಆಗಿದ್ದಾರೆ. ಶಿವ್ ನಾಡಾರ್ ತೆರವು ಮಾಡಿದ ಸ್ಥಾನಕ್ಕೆ ಅವರ ಮಗಳು ರೋಶ್ನಿ ನಾಡಾರ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ.

ಕೊರೊನಾ ಪಿಪಿಇ ಕಿಟ್ ನದಿಯಲ್ಲಿ ಪತ್ತೆ: ಗ್ರಾಮಸ್ಥರ ಆತಂಕ

ಕೊರೊನಾ ವೈದ್ಯಕೀಯ ಸಿಬ್ಬಂದಿ ಬಳಸುವ ವೈಯಕ್ತಿಕ ಸುರಕ್ಷ ಸಾಧನ(ಪಿಪಿಇ), ನದಿಯಲ್ಲಿ ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.

ಡಿಸಿ ಬಂಗಲೆಯಲ್ಲಿ ಶೂಟ್ ಮಾಡಿಕೊಂಡ ಪೊಲೀಸ್ ಪೇದೆ

ಜಿಲ್ಲಾಧಿಕಾರಿ ಬಂಗಲೆಯಲ್ಲಿಯೇ ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.