ನ್ಯೂಯಾರ್ಕ್‌: ಚೀನಾದೊಂದಿಗೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲಿಯೇ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ತಾತ್ಕಾಲಿಕ ಸದಸ್ಯತ್ವ ಸಿಕ್ಕಿದೆ.

ಈ ಕುರಿತು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ಟಿ.ಎಸ್‌. ತಿರುಮೂರ್ತಿ ತಿಳಿಸಿದ್ದಾರೆ. 192 ಮತಗಳ ಪೈಕಿ ಭಾರತಕ್ಕೆ 184 ಮತಗಳು ಸಿಕ್ಕಿವೆ. ಈ ನಿಟ್ಟಿನಲ್ಲಿ ಭಾರತ 2021ರಿಂದ 22ರ ವರೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯತ್ವ ಹೊಂದಿರಲಿದೆ.
ವಿಶ್ವಂಸ್ಥೆಯ ವಿವಿಧ ಸದಸ್ಯ ರಾಷ್ಟ್ರಗಳೊಂದಿಗಿನ ಉತ್ತಮ ಸಂಬಂಧವು ಐತಿಹಾಸಿಕ ವಿಜಯಕ್ಕೆ ಕಾರಣವಾಗಿದೆ ಎಂದು ತಿರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ವಿಶ್ವಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವ ಪಡೆದಿರುವ ಫ್ರಾನ್ಸ್, ಭಾರತಕ್ಕೆ ಖಾಯಂ ಸದಸ್ವತ್ವ ನೀಡುವಂತೆ ಪ್ರತಿಪಾದಿಸಿತ್ತು. ಅಲ್ಲದೇ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡುವ ಎಲ್ಲಾ ಅರ್ಹತೆ ಇದೆ ಎಂದು ಅದು ವಾದಿಸಿತ್ತು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಒಟ್ಟು 5 ಖಾಯಂ ಸದಸ್ಯರಿದ್ದು, 10 ತಾತ್ಕಾಲಿಕ ಸದಸ್ಯ ರಾಷ್ಟ್ರಗಳಿವೆ.

Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರದಲ್ಲಿ ಹತ್ತಿ ಗಿರಣಿಗೆ ಬೆಂಕಿ: ಲಕ್ಷಾಂತರ ರೂ. ಹಾನಿ..!

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿ ಗಿರಣಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಹತ್ತಿ, ಬೆಂಕಿಗೆ ಆಹುತಿಯಾದ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

ದಿನವೂ 24 ಕಿಮೀ ಸೈಕಲ್ ಹೊಡ್ದು ಕಲಿತಳು:10ನೇತರಗತಿಯಲ್ಲಿ ಶೇ. 98.75 ಗಳಿಸಿದಳು!

ಭೋಪಾಲ್: ಹತ್ತನೆ ಕ್ಲಾಸ್ ಪರೀಕ್ಷೆಯಲ್ಲಿ ಬರೊಬ್ಬರಿ 98.75 ಪರ್ಸೆಂಟು ಮಾಡಿದ ಈ ಛೋಟಿ, ರಾಜ್ಯಕ್ಕೆ 8ನೇ…

ಅಪ್ಪಾ ಹೇಳಿದ ಹೊಡಿ ಒಂಭತ್ತಿನ ಕಥಿ ಏನು ಗೊತ್ತಾ…?

ಹಿಗ್ಗಿನಿಂದ ಕುಣಿದಾಡಿದ ಅಪ್ಪನ ಮಾತು ನಂಬಿ ಪಾಪ ಗುಂಡ ಮುಗಿಲು ನೋಡಿಕೊಂಡ ಮಲಗಿದ. ಗುಂಡನ ಅಪ್ಪನ ಹಿಗ್ಗಿಗೆ ಕಾರಣ ಏನು ಗೊತ್ತಾ..? ಹಾಗಾದ್ರೆ ಈ ಕಥೆ ಓದಿ

ಕೋವಿಡ್ ಬಲಿ: ಹೈದರಾಬಾದ್ ನಲ್ಲಿ ವೈದ್ಯರ ಮೇಲೆ ದಾಳಿ

ಹೈದರಾಬಾದ್: ಹೈದರಾಬಾದ್ ನ ಗಾಂಧಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಬಲಿಯಾದ ನಂತರ ವೈದ್ಯರ…