ನ್ಯೂಯಾರ್ಕ್‌: ಚೀನಾದೊಂದಿಗೆ ಗಡಿಯಲ್ಲಿ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲಿಯೇ ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ತಾತ್ಕಾಲಿಕ ಸದಸ್ಯತ್ವ ಸಿಕ್ಕಿದೆ.

ಈ ಕುರಿತು ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ಟಿ.ಎಸ್‌. ತಿರುಮೂರ್ತಿ ತಿಳಿಸಿದ್ದಾರೆ. 192 ಮತಗಳ ಪೈಕಿ ಭಾರತಕ್ಕೆ 184 ಮತಗಳು ಸಿಕ್ಕಿವೆ. ಈ ನಿಟ್ಟಿನಲ್ಲಿ ಭಾರತ 2021ರಿಂದ 22ರ ವರೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ತಾತ್ಕಾಲಿಕ ಸದಸ್ಯತ್ವ ಹೊಂದಿರಲಿದೆ.
ವಿಶ್ವಂಸ್ಥೆಯ ವಿವಿಧ ಸದಸ್ಯ ರಾಷ್ಟ್ರಗಳೊಂದಿಗಿನ ಉತ್ತಮ ಸಂಬಂಧವು ಐತಿಹಾಸಿಕ ವಿಜಯಕ್ಕೆ ಕಾರಣವಾಗಿದೆ ಎಂದು ತಿರುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ವಿಶ್ವಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವ ಪಡೆದಿರುವ ಫ್ರಾನ್ಸ್, ಭಾರತಕ್ಕೆ ಖಾಯಂ ಸದಸ್ವತ್ವ ನೀಡುವಂತೆ ಪ್ರತಿಪಾದಿಸಿತ್ತು. ಅಲ್ಲದೇ ಭಾರತಕ್ಕೆ ಶಾಶ್ವತ ಸದಸ್ಯತ್ವ ನೀಡುವ ಎಲ್ಲಾ ಅರ್ಹತೆ ಇದೆ ಎಂದು ಅದು ವಾದಿಸಿತ್ತು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಒಟ್ಟು 5 ಖಾಯಂ ಸದಸ್ಯರಿದ್ದು, 10 ತಾತ್ಕಾಲಿಕ ಸದಸ್ಯ ರಾಷ್ಟ್ರಗಳಿವೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿಂದು ಒಂದು ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79…

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್!

ಕೃಷ್ಣಾಪುರ ಮಹಿಳೆಗೆ ಕೊರೋನಾ ಪಾಸಿಟಿವ್: ಜನರಲ್ಲಿ ಆತಂಕ ಹಲವರ ಕ್ವಾರಂಟೈನ್! ಬಾಗಲಕೋಟೆ : ಬಾದಾಮಿ ಮೂಲದ…

ಭಾರತದ ಅತಿ ಶ್ರೀಮಂತ ಮಹಿಳೆ ರೋಶ್ನಿ: 38 ವರ್ಷಕ್ಕೆ ಎಚ್.ಸಿ.ಎಲ್ ಕಂಪನಿ ಅಧ್ಯಕ್ಷೆ

ವಾಣಿಜ್ಯ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ-ಎಂಬಿಎ ಮಾಡಿರುವ ರೋಶ್ನಿ ಈಗ ಎಚ್.ಸಿ.ಎಲ್. ಟೆಕ್ನಾಲಜೀಸ್ ಕಂಪನಿಯ ಅಧ್ಯಕ್ಷೆ ಆಗಿದ್ದಾರೆ. ಶಿವ್ ನಾಡಾರ್ ತೆರವು ಮಾಡಿದ ಸ್ಥಾನಕ್ಕೆ ಅವರ ಮಗಳು ರೋಶ್ನಿ ನಾಡಾರ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ.
ಇವತ್ತಿನ ಕೊರೋನಾ ಕಾವ್ಯ ಸರಣಿಗೆ ಕವನ ಕಳುಹಿಸಿದವರು ಅರುಣಕುಮಾರ ಮ ನರಗುಂದ. ಇವರು ವೃತ್ತಿಯಲ್ಲಿ ಹಿರೇಕೆರೂರಿನಲ್ಲಿ ನ್ಯಾಯಾಂಗ ಇಲಾಖೆಯ ನೌಕರ. ವೃತ್ತಿ ನ್ಯಾಯಾಂಗ ಇಲಾಖೆ ಆದರೆ ಸಾಹಿತ್ಯ ಕೃಷಿ ಇವರ ಪ್ರವೃತ್ತಿ.