ಇಂಫಾಲ: ಮಣಿಪುರದಲ್ಲಿ ಆಡಳಿತಾರೂಢ ಬಿಜೆಪಿಯ ಮೂವರು ಶಾಸಕರು ಮತ್ತು ಎನ್.ಪಿ.ಪಿ.ಯ ಒಬ್ಬ ಶಾಸಕ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿಯ ಮೈತ್ರಿ ಪಕ್ಷ ಎನ್.ಪಿ.ಪಿ. ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದೆ.

ಇವರ ಜೊತೆ ಕೈಜೋಡಿಸಿರುವ ಟಿಎಂಸಿ ಶಾಸಕ ಮತ್ತು ಪಕ್ಷೇತರ ಶಾಸಕ ಜಿರಿಬಮ್ ಕೂಡ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದಾರೆ. ಬಿಜೆಪಿಯಿಂದ ಗೆದ್ದ ಮೂರು ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಈ ಮೂಲಕ ಎನ್.ಬಿರೆನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಸದ್ಯಕ್ಕೆ 8 ವಿಧಾನಸಭೆ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ.

2017ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಿದ್ದರು. ಸರ್ಕಾರ ರಚಿಸಲು 31 ಶಾಸಕರ ಬೆಂಬಲ ಅಗತ್ಯವಿತ್ತು. ಆದರೆ, 21 ಕ್ಷೇತ್ರಗಳಲ್ಲಿ ಜಯಿಸಿದ್ದ ಬಿಜೆಪಿಗೆ ಅಂದಿನ ರಾಜ್ಯಪಾಲರಾದ ನಜ್ಮಾ ಹೆಫ್ತುಲ್ಲಾ ಸರ್ಕಾರ ರಚಿಸಲು ಅವಕಾಶ ನೀಡಿದ್ದರು.

ಅನಂತರ ನಡೆದ ರಾಜಕೀಯ ಸ್ಥಿತ್ಯಂತರಗಳಲ್ಲಿ ಬಿಜೆಪಿ ಸರ್ಕಾರ ರಚಿಸಿ ಬಹುತಮತ ಗಳಿಸುವಲ್ಲಿ ಸಫಲವಾಗಿತ್ತು. ಬಿಜೆಪಿ 21, ಎನ್ ಪಿ ಎಫ್ 4, ಎನ್ ಪಿ ಪಿ 4, ಟಿಎಂಸಿ 1, ಎಲ್ ಜೆ ಪಿ 1, ಪಕ್ಷೇತರ 1 ಶಾಸಕರ ಬೆಂಬಲ ಗಳಿಸಿ, ಬಿಜೆಪಿ ಸರ್ಕಾರ ರಚಿಸಿತ್ತು. ಕಾಂಗ್ರೆಸ್ ನ 7 ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈ ಮೂಲಕ ಬಿಜೆಪಿ ತನ್ನ ಬಲವನ್ನು ಹೆಚ್ಚಿಸಿಕೊಂಡಿತ್ತು. ಆದರೆ, ಇದೀಗ ಬಿಜೆಪಿ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಹಾವಳಿಯ ಮಧ್ಯೆಯೇ ಶಾಲೆಗಳು ಆರಂಭವಾಗಲಿವೆಯೇ?

ದೇಶದಲ್ಲಿ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೂ ಜನ ಜೀವನ ಎಂದಿನಂತೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಮುಚ್ಚಿದ್ದ ಶಾಲಾ – ಕಾಲೇಜುಗಳನ್ನು ಮರಳಿ ತೆರೆಯುವ ಚಿಂತನೆ ನಡೆದಿದೆ.

ಸುಳ್ಳು ಹೇಳಿದ್ದು ಭಾರತವೋ ಅಥವಾ ಡೊನಾಲ್ಡ್ ಟ್ರಂಪೋ?

ದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೆ ಮಾತಾಡಿದ್ದೇನೆ. ಅವರು ಒಳ್ಳೆಯ ಮನಃಸ್ಥಿತಿಯಲ್ಲಿಲ್ಲ ಎಂದು ಅಮೆರಿಕ…

ಮಹಿಳಾ ವಿಶ್ವಕಪ್ ಆತಿಥ್ಯ ವಹಿಸಿದ ಭಾರತ!

2022 ರ ಮಹಿಳಾ ಏಷ್ಯನ್ ಕಪ್ ಆತಿಥ್ಯ ಭಾರತಕ್ಕೆ ಲಭಿಸಿದೆ. 1979ರ ನಂತರ ಇದೇ ಮೊದಲ ಬಾರಿಗೆ ಭಾರತದಲ್ಲಿ ಮಹತ್ವದ ಫುಟ್ಬಾಲ್ ಕ್ರಿಡಾಕೂಟ ನಡೆಯಲಿದೆ.

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.