ಬೆಂಗಳೂರು: ಇತ್ತಿಚೆಗಷ್ಟೆ ನಿಧನ ಹೊಂದಿದ ನಟ ಚಿರಂಜೀವಿ ಸರ್ಜಾ ಬಹುಬೇಗ ಮರೆಯುವಂತಹ ನಟನಲ್ಲ. ಅದರಲ್ಲೂ 10 ವರ್ಷದಿಂದ ಪ್ರೀತಿಸಿ ಮದುವೆಯಾದ ಮಡದಿಯ ಪಾಡು ಏನಾಗಿರಬೇಡ. ಇನ್ನು ವಿಚಿತ್ರ ಎಂದರೆ ಚಿರು ಪತ್ನಿ ಮೇಘನಾ ಈಗ ಗರ್ಭೀಣಿ ಇಂಥ ಸಂದರ್ಭದಲ್ಲಿ ಪತಿಯ ಅಗಲಿಕೆಯ ದುಖ: ಸಹಿಸುವುದು ಹೇಗೆ? ಇಂದು ಪತಿ ಚಿರು ನೆನೆದು ಮೇಘನಾ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ಮೇಘನ ಬರೆದ ಪ್ರತಿ ಪದಗಳು ಎಂಥ ಕಲ್ಲು ಹೃದಯವನ್ನು ಕರಗಿಸುವಂತಿದೆ.

ಮೇಘನಾ ಮಾಡಿದ ಟ್ವೀಟ್
ಚಿರು ಬಾರಿ-ಬಾರಿ ಯತ್ನಿಸಿದರು ನನ್ನ ಮನದಾಳದ ಮಾತನ್ನು ಪದಗಳಲ್ಲಿ ವರ್ಣಿಸಲಾಗದ ಪರಿಸ್ಥಿತಿ ನನ್ನದು. ನಿನ್ನ ಮೇಲಿನ ಪ್ರೀತಿ, ಹುಚ್ಚು ವಿಶ್ವಾಸದ ಬಗ್ಗೆ ಮಾತನಾಡಲು ಶಬ್ಧಕೋಶದಲ್ಲಿ ಪದಗಳೇ ಸಾಲುತ್ತಿಲ್ಲ. ನನ್ನ ಸ್ನೇಹಿತ, ನನ್ನ ಪ್ರೇಮಿ, ನನ್ನ ಹಿತೈಷಿ, ನನ್ನ ಮಗು, ನನ್ನ ಸರ್ವಸ್ವ, ನನ್ನ ಪತಿ. ನೀನು ಇದೆಲ್ಲದಕ್ಕಿಂತ ಹೆಚ್ಚು. ನೀನು ನನ್ನ ಆತ್ಮದ ಅರ್ಧ ಭಾಗ ಚಿರು.
ಪ್ರತಿ ದಿನ ನಮ್ಮ ಮನೆಯ ಬಾಗಿಲು ನೋಡುತ್ತ.. ಅಗೋ ನೀ ಬಂದೇ ಬಿಟ್ಟೆ, ನಾ ಮನೆಗೆ ಬಂದೆ ಅಂತ ಹೇಳುತ್ತ ನೀನು ಬಂದೇ ಬಿಡುವೆ ಎಂಬ ಒಂದು ಆಸೆ. ನೀ ಬರದಿದ್ದಾಗ ನನ್ನ ಆತ್ಮವನ್ನೆ ಸುಡುವಂತ ಒಂದು ನೋವು ನನ್ನಲ್ಲಿ. ಪ್ರತಿದಿನದ ಪ್ರತಿಕ್ಷಣ ನಿನ್ನನ್ನು ಸ್ಪರ್ಷಿಸಲಾಗದೇ ನನ್ನ ಕಾಲ್ಕೆಳಗಿನ ಭೂಮಿ ಕುಸಿಯುವಂತೆ ಒಂದು ನಡುಕ. ಸಾವಿರ ಬಾರಿ ನಿಧಾನವಾಗಿ ನೋವಿನಿಂದ ಸಾಯುವಂತೆ. ಪ್ರತಿ ಬಾರಿ ನಾನು ನೋವುಂಡಾಗ, ಪ್ರತಿ ಬಾರಿ ನಾನು ಕಣ್ಣೀರು ಹಾಕಿದಾಗ ದೈವತೀತ ಅದ್ಭುತದಂತೆ ನೀನು ಇಲ್ಲೆ ನನ್ನ ಸುತ್ತ ನಿನ್ನ ಪ್ರೀತಿಯ ರಕ್ಷಾ ಕವಚದಲ್ಲಿ ಆರೈಕೆ ಮಾಡುತ್ತಿರುವ ಭಾವನೆ ನನಗೆ. ಸದಾಕಾಲ ನನ್ನ ರಕ್ಷಿಸುತ್ತಿರುವ ಕಾವಲು ದೈವ.
ಎಷ್ಟು ಅಪಾರ ನಿನ್ನ ಪ್ರೀತಿ, ನನ್ನನ್ನು ಒಂಟಿಯಾಗಿ ಬಿಟ್ಟು ಹೋಗಲು ಮನಸಾಗಲಿಲ್ಲ ನಿನಗೆ. ಹೋಗುತ್ತ ನಮ್ಮ ಪ್ರೀತಿಯ ಸಂಕೇತವಾಗಿ ಒಂದು ಪುಟ್ಟ ಹರುಷವನ್ನು ನನಗೆ ಕೊಟ್ಟು ಹೋಗಿದ್ದಿಯಾ. ಈ ಕಾಣಿಕೆಗೆ ನಾನು ಚಿರ ಋಣಿ. ನಮ್ಮ ಈ ಪುಟ್ಟ ಹರುಷವನ್ನು ಭೂಮಿಗೆ ತರಲು ಕಾತುರ ನನಗೆ. ಮಗುವಾಗಿ ನಿನ್ನ ಮತ್ತೆ ಮುದ್ದಿಸುವ ಕಾತುರ. ನಿನ್ನ ಚಿರುನಗೆಯ ನೋಡುವ ಕಾತುರ. ನೀನಿದ್ದಲ್ಲೆಲ್ಲ ಬೆಳಕು ಚೆಲ್ಲುತ್ತಿದ್ದ, ಎಲ್ಲರನ್ನು ಹರ್ಷಿಸುತ್ತಿದ್ದ ಆ ನಗು ಮತ್ತೊಮ್ಮೆ ಕೇಳೊ ಕಾತುರ. ನೀನು ಮತ್ತೆ ಬರುವ ವೇಳೆಗಾಗಿ ನಾನು ಕಾಯುವೆ. ನೀ ನನಗಾಗಿ ಕಾಯು ದಿಗಂತದ ಆ ಬದಿಯಲಿ. ನನ್ನ ಕೊನೆಯ ಉಸಿರು ಇರುವವರೆಗೂ ನೀನು ಚಿರಂಜೀವಿ. ನೀನು ‌ನನ್ನಲ್ಲೆ ಇರುವೆ.

Leave a Reply

Your email address will not be published. Required fields are marked *

You May Also Like

ಕನ್ನಡ ರಾಜ್ಯೋತ್ಸವ ದಿನದಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲು ಮುಂದಾದ ಮಹಾರಾಷ್ಟ್ರ ಸಚಿವರು!

ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ.

ತ್ರಿಪುರಾದಲ್ಲಿ ಸೈನಿಕರಿಗೆ ಮಾತ್ರ ಕಂಡು ಬಂದ ಸೋಂಕು!

ತ್ರಿಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮತ್ತೆ 24 ಜನ ಬಿಎಸ್ ಎಫ್ ಯೋಧರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣ 88 ಕ್ಕೆ ತಲುಪಿವೆ .

ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಅವಶ್ಯವಿದೆ: ಮೋಹನ ಮಾಳಿಶೆಟ್ಟಿ

ಪಂಚಮಸಾಲಿ 2ಎ ಮಿಸಲಾತಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಫೆ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಜಿಲ್ಲೆಯ ಸಮಾಜದ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಮೋಹನ ಮಾಳಿಶೆಟ್ಟಿ ಹೇಳಿದರು.

ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಡಿಕೆಶಿ ವಿರೋಧ

ಬೆಂಗಳೂರು: 2003ರ ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.ಈ ಕುರಿತು ಟ್ವೀಟ್…