ಬೆಂಗಳೂರು: ಕೊರೊನಾ ಕಾಟದಿಂದಾಗಿ ಪ್ರಯಾಣಿಕರು ಹಾಗೂ ಸಿಬ್ಬಂಧಿಗಳ ಹಿತದೃಷ್ಟಿಯಿಂದ ಬಿಎಂಟಿಸಿ ಡಿಜಿಟಲ್ ಗೆ ಮಾರು ಹೋಗಿದೆ. ಫೋನ್ ಪೇ, ಗೂಗಲ್ ಪೇ ಸೇರಿದಂತೆ ಡಿಜಿಟಲ್ ನಲ್ಲಿ ಹಣ ಪಡೆಯಲು ನಿರ್ಧರಿಸಲಾಗಿದೆ. ಟಿಕೆಟ್ ಪಡೆಯುವ ಪ್ಯಾಸೆಂಜರ್ ಗಳು, ಡಿಜಿಟಲ್ ಮೂಲಕ ಹಣ ಪಾವತಿಸಿ ಟಿಕೆಟ್ ಪಡೆಯಬಹುದಾಗಿದೆ.
ವರ್ತಮಾನ, ಇತಿಹಾಸ ಯಡಿಯೂರಪ್ಪರನ್ನು ಕ್ಷಮಿಸಲಾರದು: ಸಿದ್ದು
ರೈತ ವಿರೋಧಿ @BSYBJP ಅವರೇ, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.
ಮಲಗಿದೆ ರಾಜ್ಯ ಮಾಹಿತಿ ಹಕ್ಕು ವೆಬ್ ಸೈಟ್!: ಮಾಹಿತಿ ಮುಚ್ಚಿಡುವ ಯತ್ನದ ಆರೋಪ
ಜನರಿಗೆ ಮಾಹಿತಿ ಒದಗಿಸಲೆಂದೇ ಮಾಹಿತಿ ಹಕ್ಕು ಜಾರಿಗೆ ಬಂದಿದೆ. ಆದರೆ, ಜನರು ಬಯಸುವ ಮಾಹಿತಿ ನೀಡಲು ಮಾಹಿತಿ ಹಕ್ಕು ಆಯೋಗ ಹಿಂದೇಟು ಹಾಕುತ್ತಿದೆಯೇ ಎಂಬ ಸಂದೇಹ ಬರುವಂತಾಗಿದೆ. ಕಳೆದ ಒಂದು ತಿಂಗಳಿಂದ ರಾಜ್ಯದ ಮಾಹಿತಿ ಹಕ್ಕು ಅಂತರ್ಜಾಲ ತಾಣ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಅರ್ಜಿ ಹಾಕಲು ಬಯಸುವವರು ನಿರಾಶರಾಗಿ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ.
ಗದಗ ಜಿಲ್ಲೆಯಲ್ಲಿ 72; ರಾಜ್ಯದಲ್ಲಿಂದು 10,947 ಕೊರೊನಾ ಪಾಸಿಟಿವ್!
ಜಿಲ್ಲೆಯಲ್ಲಿಂದು 72 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9700ಕ್ಕೆ ಏರಿಕೆಯಾಗಿದೆ. ಒಟ್ಟು ಸಕ್ರೀಯ 676 ಪ್ರಕರಣಗಳಿವೆ. ಇಂದು 63 ಜನರು ಗುಣಮುಖ ಹೊಂದಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು ಬಿಡುಗಡೆಯಾಗಿರುವ ಪ್ರಕರಣಗಳ ಸಂಖ್ಯೆ 8889. ಒಟ್ಟು ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 135ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೆಲ್ಥ್ ಬುಲೆಟಿನ್ ತಿಳಿಸಿದೆ.