ಬೆಂಗಳೂರು: ಸ್ಮಾರ್ಟ್ ಫೋನ್ ಗಾಗಿ ಕಳ್ಳತನ ಮಾಡಲು ಪ್ರಾರಂಭಿಸಿದ ಅಪ್ರಾಪ್ತ ಬಾಲಕನೊಬ್ಬ ಬರೋಬ್ಬರಿ ರೂ. 4 ಲಕ್ಷಕ್ಕೂ ಅಧಿಕ ಹಣ ಕದ್ದು ಸಿಕ್ಕಿ ಬಿದ್ದ ಘಟನೆ ನಗರದಲ್ಲಿ ನಡೆದಿದೆ.

ಈ ಬಾಲಕನ ಸ್ನೇಹಿತರು ದುಬಾರಿ ಫೋನ್ ಬಳಸಿ ಸೋಷಿಯಲ್ ಮೀಡಿಯಾದಲ್ಲಿ ನಿರತರಾಗಿರುತ್ತಿದ್ದರು. ಅವರನ್ನು ನೋಡಿ ಬಾಲಕನಿಗೂ ಮೊಬೈಲ್ ತೆಗೆದುಕೊಳ್ಳುವ ಆಸೆಯಾಗಿದೆ. ಇದಕ್ಕಾಗಿ ಕಳ್ಳತನದ ಹಾದಿ ಹಿಡಿದಿದ್ದಾನೆ. ನಗರದ ಪ್ರತಿಷ್ಠಿತ ಏರಿಯಾದ ನಾಲ್ಕು ಅಂಗಡಿಯಲ್ಲಿ ಕಳ್ಳತನ ಮಾಡಿದ್ದಾನೆ.

ಬಾಲಕ ಜೂ. 9ರಂದು ಬೆಂಗಳೂರಿನ ವಿಠ್ಠಲ ಮಲ್ಯ ರಸ್ತೆ, ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ ರಸ್ತೆಯ ನಾಲ್ಕು ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡಿದ್ದಾನೆ. ಒಂದು ಅಂಗಡಿಯಲ್ಲಿ ರೂ. 4 ಸಾವಿರ ಹಾಗೂ ಮತ್ತೊಂದು ಅಂಗಡಿಯಲ್ಲಿ ರೂ. 4 ಲಕ್ಷ ದೋಚಿದ್ದಾನೆ.

ಈ ಕುರಿತು ಅಂಗಡಿ ಮಾಲೀಕರು ಸಿಸಿಟಿವಿ ವಿಡಿಯೋ ಸಹಿತ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಪ್ರಾಪ್ತನನ್ನು ಪತ್ತೆ ಹಚ್ಚಿ ಬಾಲಮಂದಿರಕ್ಕೆ ಕಳುಹಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.

ಮದ್ಯೆದಂಗಡಿ ಪ್ರಾರಂಭಕ್ಕೆ ಲಂಬಾಣಿ ಸಂಘಟನೆ ವಿರೋಧ

ಒಂದು ಕಾಲ ಘಟ್ಟದಲ್ಲಿ ಲಂಬಾಣಿ ಸಮಾಜ ಭಟ್ಟಿ ಸಾರಾಯಿ ಮಾರಾಟ ಮಾಡಿಯೇ ತಮ್ಮ ಬದುಕು ಕಟ್ಟಿಕೊಂಡಿತ್ತು. ಆದರೆ ಇದೀಗ ಸಮಾಜದಲ್ಲಿ ಜಾಗೃತಿ ಮೂಡಿದೆ ಎನ್ನುವುದಕ್ಕೆ ಯುವಕರ ಕಾರ್ಯ ಇದಕ್ಕೆ ಉದಾಹರಣೆಯಾಗಿದೆ.

ಬಿಂಕದಕಟ್ಟಿ ಮೃಗಾಲಯದಲ್ಲಿ ಧರ್ಮಾರ್ಜುನರ ಘರ್ಜನೆ

ಬಿಂಕದಕಟ್ಟಿ ಮೃಗಾಲಯಕ್ಕೆ ಗುರುವಾರ ತಡರಾತ್ರಿ 11 ವರ್ಷದ ಧರ್ಮ ಮತ್ತು ಅರ್ಜುನ ಹೆಸರಿನ ಗಂಡು ಸಿಂಹಗಳು ಗುರುವಾರ ತಡರಾತ್ರಿ ಆಗಮಿಸಿವೆ.

ರೈತರ ಸಾಲ ಮನ್ನಾ ಮಾಡಿದ ಸರ್ಕಾರ

ಬ್ಯಾಂಕುಗಳಲ್ಲಿ ಬಾಕಿ ಉಳಿದ 57,229 ರೈತರ 295 ಕೋಟಿ ರೂ. ಸಾಲವನ್ನು ಸರ್ಕಾರ ಮನ್ನಾ ಮಾಡಿದೆ.